ಮದ್ಯ ಹಗರಣ ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಿಎಂ ಜಗನ್ಮೋಹನ ರೆಡ್ಡಿ ಆಪ್ತನ ಬಂಧನ

ಬೆಂಗಳೂರು: ಬಹುಕೋಟಿ ಮೌಲ್ಯದ ಮದ್ಯ ಹಗರಣದಲ್ಲಿ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ಸಹಾಯಕ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಚೆವಿರೆಡ್ಡಿ ಭಾಸ್ಕರ ರೆಡ್ಡಿ ಅವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಿದ್ದರಿಂದ ಮಂಗಳವಾರ ರಾತ್ರಿ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ, 10-15 ಬಾರಿ ಕಪಾಳಮೋಕ್ಷ ; ರನ್ಯಾ ರಾವ್ ಆರೋಪ

ಬೆಂಗಳೂರು: ತನಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಮತ್ತು ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ನಟಿ ರನ್ಯಾ ರಾವ್ ಹೇಳಿದ್ದಾರೆ. ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಯ ಹೆಚ್ಚುವರಿ ಮಹಾನಿರ್ದೇಶಕರಿಗೆ (ಎಡಿಜಿ) ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ರನ್ಯಾ ರಾವ್ ಅವರು, ಅಧಿಕೃತವಾಗಿ ಹೇಳಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ಅಲ್ಲ, ವಿಮಾನದಿಂದ ನೇರವಾಗಿ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಶುಕ್ರವಾರ ಪ್ರಕಟಿಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್‌ … Continued

ಚಿನ್ನದ ಕಳ್ಳಸಾಗಣೆ ಹಗರಣ | ‘ಯೂ ಟ್ಯೂಬ್‌ ನೋಡಿ ಚಿನ್ನ ಅಡಗಿಸಿಟ್ಟುಕೊಳ್ಳುವುದು ಕಲಿತೆ ಎಂದು ಬಾಯ್ಬಿಟ್ಟ ನಟಿ ರನ್ಯಾ ರಾವ್‌ : ವರದಿ

ಬೆಂಗಳೂರು: ₹ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆಯಲ್ಲಿ ಇದೇ ತನ್ನ ಮೊದಲ ಪ್ರಯತ್ನ ಎಂದು ಹೇಳಿಕೊಂಡಿದ್ದಾಳೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಬ್ಯಾಂಡೇಜ್‌ ಒಳಗೆ ಅಡಗಿಸಿಟ್ಟುಕೊಂಡು ಬಂದಿಳಿದ ಆಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಡಿಜಿಪಿ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ. ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ … Continued

ದುಬೈನಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣ ; ಕನ್ನಡ ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನತಂದ ಆರೋಪದಲ್ಲಿ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ಮಧ್ಯರಾತ್ರಿ ಆಗಮಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಮಾರ್ಚ್‌4ರಂದು ರಾತ್ರಿ ನಟಿ ರನ್ಯಾ ಅವರನ್ನು ವಶಕ್ಕೆ … Continued

ಬೆಂಗಳೂರು : ವಿಮಾನ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರಜ್ವಲ್ ರೇವಣ್ಣ ಅವರು ವೀಡಿಯೊ ಬಿಡುಗಡೆ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ … Continued

ರಾಜ್ಯಪಾಲ ಗೆಹ್ಲೋಟ್‌ ಅವರನ್ನೇ ಬಿಟ್ಟು ಹಾರಿದ ಏರ್ ಏಷ್ಯಾ ವಿಮಾನ ; ನಂತರ ಕ್ಷಮೆಯಾಚನೆ

ಬೆಂಗಳೂರು: ಹೈದರಾಬಾದಿಗೆ ತೆರಳಬೇಕಿದ್ದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಏರ್ ಏಷ್ಯಾ ವಿಮಾನ ಬಿಟ್ಟು ಹೋದ ಘಟನೆ ಶುಕ್ರವಾರ ನಡೆದಿದೆ. ರಾಜ್ಯಪಾಲರನ್ನು ಬಿಟ್ಟು ಹಾರಿದ್ದ ವಿಮಾನಯಾನ ಸಂಸ್ಥೆ ವಿರುದ್ಧ ರಾಜ್ಯಪಾಲರ ಕಚೇರಿ “ಶಿಷ್ಟಾಚಾರ ಉಲ್ಲಂಘನೆ” ಪ್ರಕರಣ ದಾಖಲಿಸಿದ ಬೆನ್ನಲ್ಲೇ ವಿಮಾನಯಾನ ಸಂಸ್ಥೆ ಇದಕ್ಕೆ ವಿಷಾದಿಸಿದೆ. ರಾಜ್ಯಪಾಲರ ಕಚೇರಿ ಅಧಿಕಾರಿಗಳು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, … Continued

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕಾರು ಹತ್ತುವ ಮುನ್ನವೇ ಚಾಲಕನಿಗೆ ಹೃದಯಾಘಾತ, ಸಾವು

ಬೆಂಗಳೂರು: ಶನಿವಾರ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜ್ಯಪಾಲರನ್ನು ವಿಮಾನ ನಿಲ್ದಾಣದಿಂದ ಕರೆದೊಯ್ಯಲು ಆಗಮಿಸಿದ್ದ ಚಾಲಕ ರವಿಕುಮಾರ ಅವರಿಗೆ ರಾಜ್ಯಪಾಲರನ್ನು ಕರೆದೊಯ್ಯುವ ಮೊದಲೇ ಹೃದಯಾಘಾತವಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ವನಿರ್ಧರಿತ ಶೆಡ್ಯೂಲ್‌ನಂತೆ ವಿಮಾನ ನಿಲ್ದಾಣಕ್ಕೆ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಗುಂಡು ಪತ್ತೆ: ಅಮೆರಿಕಾ ಪ್ರಜೆ ಬಂಧನ

ಬೆಂಗಳೂರು: ಬ್ಯಾಗ್‌ನಲ್ಲಿ ಸಜೀವ ಗುಂಡನ್ನು ಇಟ್ಟುಕೊಂಡು ಬಂದಿದ್ದ ಅಮೆರಿಕಾ ಮೂಲದ ಪ್ರಜೆಯನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಪಾಸಣೆ ವೇಳೆ ಸಜೀವ ಗುಂಡು ಪತ್ತೆಯಾದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ. ಅಮೆರಿಕದ ಟೆಕ್ಸಾಸ್ ಮೂಲದ ಬೆಂಜಮಿನ್ ಡೇನಿಯಲ್ ಹ್ಯೂಸ್ ಎಂಬುವವರು ಕೌಬಾಯ್ ಅಸಾಲ್ಟ್ ರೈಫಲ್‌ ನ ಗುಂಡನ್ನು ತಮ್ಮ ಬ್ಯಾಗ್‌ನಲ್ಲಿಟ್ಟು … Continued