ಔಷಧಗಳಿಗೆ ಸವಾಲಾಗಿರುವ ಬ್ಯಾಕ್ಟೀರಿಯಾ ಸೋಂಕುಗಳ ವಿರುದ್ಧ ಹೋರಾಡುವ ʼಜೈವಿಕ ಅಸ್ತ್ರ’ ಹಸುವಿನ ಕರುಳಿನಲ್ಲಿ ತಯಾರಾಗುತ್ತೆ ; ಐಐಎಸ್‌ಸಿ ಅಧ್ಯಯನ

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (IISC) ಸಂಶೋಧಕರು ಹಸುವಿನ ಕರುಳಿನಲ್ಲಿರುವ ವಿಶಿಷ್ಟ ಕಿಣ್ವವೊಂದನ್ನು (Enzyme) ಗುರುತಿಸಿದ್ದು, ಇದು ಔಷಧಗಳು ಪರಿಣಾಮಕಾರಿಯಾಗದ (Antibiotic-resistant) ಬ್ಯಾಕ್ಟೀರಿಯಾ ಸೋಂಕುಗಳ ಚಿಕಿತ್ಸೆಗೆ ಹೊಸ ಭರವಸೆ ಮೂಡಿಸಿದೆ. ಈ ಕಿಣ್ವವು ಬ್ಯಾಕ್ಟೀರಿಯಾಗಳು ರಚಿಸುವ ರಕ್ಷಣಾತ್ಮಕ ಬಯೋಫಿಲ್ಮ್‌ಗಳನ್ನು (Biofilms) ಒಡೆಯುವ ಸಾಮರ್ಥ್ಯ ಹೊಂದಿದ್ದು, ಬ್ಯಾಕ್ಟೀರಿಯಾಗಳ ಮೇಲೆ ಪ್ರತಿಜೀವಕ(Antibiotics) ಔಷಧಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಲು … Continued

ದೊಡ್ಡಬಳ್ಳಾಪುರ : ಇನ್‌ಸ್ಟಾಗ್ರಾಂನಲ್ಲಿ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಸಂಪರ್ಕ; ವ್ಯಕ್ತಿಯ ಬಂಧನ

ಬೆಂಗಳೂರು : ಬೆಂಗಳೂರು ಉತ್ತರ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಪರ್ಕ ಹೊಂದಿರುವ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 28 ವರ್ಷದ ಏರ್‌ ಕಂಡೀಷನರ್‌ ಮೆಕ್ಯಾನಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಸ್ಲಾಂಪುರ ನಿವಾಸಿ ಎಸ್. ಸಯ್ಯದ್ ಅಬುಬಕರ್ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಆತ ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳು ಹಾಗೂ … Continued

ಕೊಡಗು; ಕಾಡಾನೆ ದಾಳಿಗೆ ಬೆಂಗಳೂರು ಪ್ರವಾಸಿಗ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಮೃತಪಟ್ಟಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಯಿಂದ ಮೃತಪಟ್ಟವರನ್ನು ಸ್ಥಳೀಯ ಹೋಂ ಸ್ಟೇಗೆ ಆಗಮಿಸಿದ್ದ ಸುಮಾರು 40 ವರ್ಷದ ಮುರಳಿಕೃಷ್ಣ ಎಂಬ ಪ್ರವಾಸಿಗ ಎಂದು ಗುರುತಿಸಲಾಗಿದೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ … Continued

ಭೂಸ್ವಾಧೀನಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ; ₹12.95 ಕೋಟಿ ಅಕ್ರಮ ಆಸ್ತಿ, 100 ಎಕರೆ ಕೃಷಿ ಭೂಮಿ ಪತ್ತೆ

ಬೆಂಗಳೂರು: ಆದಾಯದಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ಬೆಂಗಳೂರಿನ ವಿಶೇಷ ಭೂಸ್ವಾಧೀನ ಅಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ್ದ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ ಅಧಿಕಾರಿಯು 100 ಎಕರೆ ಕೃಷಿ ಭೂಮಿ ಹೊಂದಿರುವುದು ಪತ್ತೆಯಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ, ಗುಡ್ಡದಹಳ್ಳಿ, ಹೆಬ್ಬಾಳ ಸೇರಿದಂತೆ ಹಲವು … Continued

ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿ

ಬೆಂಗಳೂರು : ನಗರದ ಚಿಕ್ಕಬಾಣಾವರದಲ್ಲಿ ಗಂಡ ಹಾಗೂ ನಾಲ್ಕು ವರ್ಷದ ಮಗನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಲಗಿದ್ದಲ್ಲೇ ಪತಿ ಮತ್ತು ನಾಲ್ಕು ವರ್ಷದ ಮುಗ್ಧ ಕಂದಮ್ಮನ ಜೀವ ತೆಗೆದ ಪತ್ನಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಆರೋಪಿಗಳನ್ನು ಹರಿಣಿ ಮತ್ತು ವಿನಯಕುಮಾರ ಎಂದು ಗುರುತಿಸಲಾಗಿದೆ. … Continued

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ : 21 ಕಡೆ ಇ.ಡಿ. ದಾಳಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ  ವಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್.ಸಾಹುಕಾರ ಅವರ ಮನೆ ಸೇರಿದಂತೆ 21 ಕಡೆಗಳಲ್ಲಿ ಬೆಂಗಳೂರು ವಲಯದ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಇಂದು, ಮಂಗಳವಾರ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. .ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ … Continued

ವಿಡಿಯೋ | ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರ ಹೊಡೆದಾಟ ; ರೀಲ್ಸ್‌ಗಾಗಿ ನಡೆಯಿತೇ ಜಗಳ ?

ಬೆಂಗಳೂರು: ನಗರದ ಪ್ರಸಿದ್ಧ ಕಬ್ಬನ್ ಪಾರ್ಕ್‌ನಲ್ಲಿ ಭಾನುವಾರ ಇಬ್ಬರು ಯುವತಿಯರ ನಡುವೆ ನಡೆದ ಜಗಳ ಸಾರ್ವಜನಿಕರ ಗಮನ ಸೆಳೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಕಬ್ಬನ್ ಪಾರ್ಕ್‌ನಲ್ಲಿ ರೀಲ್ಸ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಅದು ಕೈಕೈ … Continued

ಬೆಂಗಳೂರು : 500 ವಿದ್ಯಾರ್ಥಿಗಳು, 21 ಸಿಬ್ಬಂದಿಗೆ ತೀವ್ರ ಜ್ವರ ; ಶಾಲೆ ಬಂದ್‌

ಬೆಂಗಳೂರು: ಬೆಂಗಳೂರು ನಗರದ ರಿಚರ್ಡ್ಸ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಋತುಮಾನೀಯ ಜ್ವರದಂತಹ ಕಾಯಿಲೆಯ ತೀವ್ರ ಹಾವಳಿ ಕಾಣಿಸಿಕೊಂಡಿದ್ದು, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 21 ಸಿಬ್ಬಂದಿ ಜ್ವರ, ಶೀತ, ಕೆಮ್ಮು ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದಾರೆ ಎಂದು ಶಾಲಾ ಆಡಳಿತ ತಿಳಿಸಿದೆ.  ಕನಿಷ್ಠ ಇಬ್ಬರು ವಿದ್ಯಾರ್ಥಿಗಳಲ್ಲಿ ಎಚ್‌1ಎನ್‌1 (H1N1) ಸೋಂಕು ದೃಢಪಟ್ಟಿದೆ ಎಂದು ತಿಳಿಸಲಾಗಿದೆ. ಅಲ್ಲದೆ, … Continued

ಇನ್ಮುಂದೆ ಕರ್ನಾಟಕದ ಹೋಟೆಲ್‌, ಮೆಡಿಕಲ್‌ ಸ್ಟೋರ್‌ಗಳಲ್ಲಿ ಕ್ಯೂಆರ್‌ (QR) ಕೋಡ್ ಅಳವಡಿಕೆ, ಸ್ಕ್ಯಾನ್ ಮಾಡಿ ದೂರು ನೀಡಬಹುದು

ಬೆಂಗಳೂರು: ಕರ್ನಾಟಕದಾದ್ಯಂತ ಹೋಟೆಲ್‌ಗಳು ಹಾಗೂ ಫಾರ್ಮಸಿಗಳ ಹೊರಭಾಗದಲ್ಲಿ ಕ್ಯೂಆರ್‌ (QR) ಕೋಡ್‌ಗಳನ್ನು ಅಳವಡಿಸಿ, ಸಾರ್ವಜನಿಕರು ಸ್ಥಳದಲ್ಲೇ ಅದನ್ನು ಸ್ಕ್ಯಾನ್‌ ಮಾಡುವ ಮೂಲಕ ಆಹಾರ ಸುರಕ್ಷತೆಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ. ದೇಶದಲ್ಲೇ ಇಂತಹ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಲಿದೆ ಎಂದು … Continued

ಬೆಂಗಳೂರು : ಬೆಳ್ಳಂದೂರು ಪೊಲೀಸರಿಂದ 800 ಕೆಜಿ ಜೆಲಟಿನ್ ವಶ

ಬೆಂಗಳೂರು: ಬೆಂಗಳೂರಿನ ಭೋಗನಹಳ್ಳಿ ಸಮೀಪದ ನಿರ್ಮಾಣ ಸ್ಥಳದಲ್ಲಿ ಬಂಡೆಗಳನ್ನು ಸ್ಫೋಟಿಸಲು ಅಕ್ರಮವಾಗಿ ಬಳಸಲಾಗುತ್ತಿತ್ತು ಎನ್ನಲಾದ 800 ಕೆಜಿಗೂ ಹೆಚ್ಚು ಜೆಲಟಿನ್‌ನ್ನು ಬೆಳ್ಳಂದೂರು ಪೊಲೀಸರು ಭಾನುವಾರ (ಆಗಸ್ಟ್ 16) ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಸ್ಫೋಟಕ ವಸ್ತುಗಳ ಮೂಲ, ಅವುಗಳ ಸಂಗ್ರಹಣೆ ಹಾಗೂ ಬಳಕೆಗೆ ಅಗತ್ಯ ಅನುಮತಿಗಳನ್ನು ಪಡೆಯಲಾಗಿತ್ತೇ ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. … Continued