ಬೆಂಗಳೂರು | ತರಗತಿಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾವು : ಶಾಲಾ ಸಿಬ್ಬಂದಿ ನಿರ್ಲಕ್ಷ್ಯ ಕಾರಣ ಎಂದು ಕುಟುಂಬದ ಆರೋಪ

ಬೆಂಗಳೂರು: ನಗರದ ಬನ್ನೇರಘಟ್ಟ ರಸ್ತೆಯ ವೀವರ್ಸ್ ಕಾಲೋನಿಯ ಖಾಸಗಿ ಶಾಲೆಯೊಂದರಲ್ಲಿ 12 ವರ್ಷದ ವಿದ್ಯಾರ್ಥಿಯೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಮೂಲ್ಯ ಸಮಯ ವ್ಯರ್ಥವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯದೆ ವಿಳಂಬ ಮಾಡಿದ ಕಾರಣ ಮಗನ ಜೀವ ಉಳಿಯಲಿಲ್ಲ ಎಂದು ಮೃತ ಬಾಲಕನ ಕುಟುಂಬ ಆರೋಪ ಮಾಡಿದೆ. … Continued

ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ … Continued

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಭಾನುವಾರ (ಜುಲೈ 13) ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಗಂಭೀರ ಸ್ವರೂಪದ ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಆರೋಪಗಳು ಕೇಳಿಬಂದಿರುವ … Continued

ಬೆಂಗಳೂರು: ʼಟಾಯ್ಲೆಟ್‌ಗೆ ಹೋಗ್ಬೇಕು’ ಎಂದು ಮನೆಗೆ ನುಗ್ಗಿದ ಡೆಲಿವರಿ ಬಾಯ್ ; ಮಹಿಳೆ ಎದುರು ಅಶ್ಲೀಲ ವರ್ತನೆ ಆರೋಪ

ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ತಮ್ಮ ನಿವಾಸಕ್ಕೆ ಬಂದಿದ್ದ ಡೆಲಿವರಿ ಸಿಬ್ಬಂದಿ ಬಲವಂತವಾಗಿ ಮನೆಗೆ ಪ್ರವೇಶಿಸಿ, ಬಳಿಕ ತನ್ನ ಎದುರು ಅಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿರುವ ಮಹಿಳೆ, ಪಾರ್ಸೆಲ್ ತಲುಪಿಸಲು ಮನೆಗೆ ಬಂದಿದ್ದ ಡೆಲಿವರಿ ಸಿಬ್ಬಂದಿ ಶೌಚಾಲಯ ಬಳಸಲು ಅನುಮತಿ ಕೇಳಿದ್ದಾನೆ. ಆದರೆ, ಅಪರಿಚಿತರನ್ನು ಮನೆಗೆ ಒಳಗೆ … Continued

37 ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ದೇಶದ ಅತ್ಯಂತ ದೀರ್ಘಾವಧಿ ಕೈದಿ ಸಾಯಿಬಣ್ಣ

 ಬೆಂಗಳೂರು: ನಿಧಾನವಾದ ಹೆಜ್ಜೆಗಳು, ಉದ್ದನೆಯ ಬಿಳಿ ಗಡ್ಡ, ಕಾಲದ ಗುರುತು ಮೂಡಿಸಿರುವ ಬಿಳಿ ಕೂದಲಿನ 72 ವರ್ಷದ ಸಾಯಿಬಣ್ಣ ಎನ್‌. ನಾಟೀಕರ ಅವರು ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ದ್ವಾರದಿಂದ ಹೊರಬಂದರು. ಸುಮಾರು 37 ವರ್ಷಗಳ ಕಾಲ ಜೈಲಿನಲ್ಲಿದ್ದ ಅವರು ಕೊನೆಗೂಜೈಲಿನಿಂದ ಹೊರಬಂದಿದ್ದಾರೆ. ಉತ್ತಮ ನಡವಳಿಕೆ ಹಾಗೂ ಪುನರ್ವಸತಿ ನೀತಿಯಡಿ ಕರ್ನಾಟಕ … Continued

ವಾಣಿಜ್ಯ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದಲೇ ಹೊಸ ದರ ಜಾರಿ

ನವದೆಹಲಿ: ಜುಲೈ 1ರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಮತ್ತು ತೈಲ ಮಾರುಕಟ್ಟೆ ಕಂಪನಿಗಳಿಂದ ನೆಮ್ಮದಿ ಸುದ್ದಿ ಸಿಕ್ಕಿದೆ. ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆ.ಜಿ. ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹183.50 ಇಳಿಕೆ ಮಾಡಿವೆ. ಜುಲೈ 1ರಿಂದಲೇ ಈ ಹೊಸ ದರಗಳು ಜಾರಿಗೆ ಬಂದಿದೆ.  ಆದರೆ ಗೃಹ … Continued

ಹೆಸರಾಂತ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ ನಿಧನ

ಬೆಂಗಳೂರು: ಹೆಸರಾಂತ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ (KT Shivaprasad) ಅವರು ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 1947ರಲ್ಲಿ ಕೊಡಗಿನ ಮಡಿಕೇರಿ ತಾಲೂಕಿನ ಕೃಷಿ ಕುಟುಂಬದಲ್ಲಿ ಜನಿಸಿದ ಶಿವಪ್ರಸಾದ ಅವರಿಗೆ ಬಾಲ್ಯದಿಂದಲೇ ಚಿತ್ರಕಲೆಯತ್ತ ಆಸಕ್ತಿ ಇತ್ತು. ಆದರೆ … Continued

ವಿಡಿಯೋ | ಬೆಂಗಳೂರು : ಹೆಲ್ಮೆಟ್ ಇಲ್ಲದೆ ಹೋಗುತ್ತಿದ್ದ ಬೈಕ್ ಸವಾರನ ತಲೆ ಮೇಲೆ ಬಿದ್ದ ಮರದ ಕೊಂಬೆ ; ಗಂಭೀರ ಗಾಯ

ಬೆಂಗಳೂರು: ಮಹಾನಗರದ ರಾಜಾಜಿನಗರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ, ರಸ್ತೆಯ ಬದಿಯ ಒಣ ಮರದ ಬೃಹತ್ ಕೊಂಬೆಯೊಂದು ಬೈಕ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ 52 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಬುಧವಾರ ಸಂಜೆ ನಡೆದಿದೆಎಂದು ಹೇಳಲಾಗಿದೆ. ಈ ಘಟನೆ ರಾಮಮಂದಿರ ರಸ್ತೆಯಲ್ಲಿ ನಡೆದಿದ್ದು, ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ … Continued

ವಿಡಿಯೋ | ಬೆಂಗಳೂರು : ಚಲಿಸುತ್ತಿದ್ದ ಶಾಲಾ ವಾಹನದ ಹಿಂಬಾಗಿಲು ತೆರೆದು ರಸ್ತೆಗೆ ಬಿದ್ದ ಮಕ್ಕಳು….!

ಬೆಂಗಳೂರು: ಶಾಲಾ ಮಕ್ಕಳನ್ನು ಒಯ್ಯುತ್ತಿದ್ದ ಓಮ್ನಿಯ ಹಿಂಬದಿಯ ಬಾಗಿಲು ದಿಢೀರನೆ ತೆರೆದುಕೊಂಡ ಪರಿಣಾಮ ರಸ್ತೆಗೆ ಬಿದ್ದ ಐವರು ಶಾಲಾ ಮಕ್ಕಳಿಗೆ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ ಎಂದುವರದಿಯಾಗಿದೆ. ಮಕ್ಕಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಕೆ.ಆರ್.ಪುರಂನ ಗಾಯತ್ರಿ ಲೇಔಟ್‌ನಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ವ್ಯಾನ್ … Continued

ವಿಶ್ವದ ಎಲ್ಲ ದೇಶಗಳಿಗೂ ಭೇಟಿ ನೀಡಿ ದಾಖಲೆ ಬರೆದ ಬೆಂಗಳೂರು ಮೂಲದ ಗಿಟಾರ್‌ ವಾದಕ ಬೆನ್ನಿ ಪ್ರಸಾದ…!

ಬೆಂಗಳೂರು ಮೂಲದ ಹೆಸರಾಂತ ಗಿಟಾರ್ ವಾದಕ ಮತ್ತು ಜಾಗತಿಕ ಪ್ರವಾಸಿ ಬೆನ್ನಿ ಪ್ರಸಾದ (Benny Prasad) ಅವರು ತಮ್ಮ ಜೀವಮಾನದ ಅಪರೂಪದ ಪ್ರವಾಸದ ದಾಖಲೆಯನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಜಗತ್ತಿನ ಒಟ್ಟು 245 ದೇಶ ಹಾಗೂ ಪ್ರಾಂತ್ಯಗಳಿಗೆ ಭೇಟಿ ನೀಡಿರುವ ಅವರು, ಅದಕ್ಕೆ ಪುರಾವೆಯಾಗಿ ವೀಸಾ ಮತ್ತು ಸೀಲ್‌ಗಳಿಂದ ತುಂಬಿ … Continued