ಕನ್ನಡದ ಖ್ಯಾತ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (ವಿಜಯಕುಮಾರ ಆರ್‌.) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸರಿಗಮ ವಿಜಿ ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ … Continued

ಬೇರೆಯವರ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್‌ ಬೆದರಿಕೆ ಕರೆ ; ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ (Rameshwaram Cafe) ರೀತಿಯಲ್ಲಿ ಗಣರಾಜ್ಯೋತ್ಸವದಂದು 6 ಗಣ್ಯರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಐದು ಜನರ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್‌ ಬೆದರಿಕೆ (Hoax Homb threat) ಹಾಕಿರುವುದಾಗಿ ಆರೋಪಿ ಹೇಳಿದ್ದಾನೆ. ಕಳೆದ ವರ್ಷ ಬೆಂಗಳೂರಿನ … Continued

ವೀಡಿಯೊ…| ಬೆಂಗಳೂರು : ಕಂಠಪೂರ್ತಿ ಕುಡಿದು ಬಂದು ಮದುಮಗನ ರಂಪಾಟ ; ಮದುವೆಯನ್ನೇ ರದ್ದು ಮಾಡಿದ ವಧುವಿನ ತಾಯಿ…!

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅದ್ಧೂರಿ ವಿವಾಹವೊಂದು ದಿಢೀರ್ ಸ್ಥಗಿತವಾದ ಘಟನೆ ವರದಿಯಾಗಿದ್ದು, ಅಚ್ಚರಿ ಎಂದರೆ ತಾಳಿಕಟ್ಟುವ ಕೆಲವೇ ಹೊತ್ತಿನ ಮೊದಲು ವಧು ಹಾಗೂ ವಧುವಿನ ತಾಯಿ ಮದುವೆಯನ್ನು ರದ್ದುಗೊಳಿಸಿದ್ದಾರೆ…! ಮದುವೆ ಸಮಾರಂಭದಲ್ಲಿ ವರ ಕುಡಿದು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಮದುವೆಯಲ್ಲಿ ರಂಪಾಟ ಮಾಡಿದ್ದಾನೆ. ಮದುವೆ ವಿಧಿವಿಧಾನಗಳು ನಡೆಯುತ್ತಿದ್ದಾಗ ವರನ ಕಡೆಯವರು ಅನುಚಿತವಾಗಿ ವರ್ತಿಸಿ ಆರತಿ ತಾಳಿ … Continued

ಬೆಂಗಳೂರು | ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ (Cows) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬವರು ದೂರು ನೀಡಿದ ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶೇಕ್ ನಸ್ರು (30) ಎಂದು ಗುರುತಿಸಲಾಗಿದ್ದು, … Continued

ಹಿರಿಯ ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ನಟ ಸರಿಗಮ ವಿಜಿ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಇವರು 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ … Continued

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ; ಸಿಎಂ ಸಿದ್ದರಾಮಯ್ಯ

ವಿಜಯನಗರ/ ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿ, ‘ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ‘ಪ್ರಾಣಿ ಹಿಂಸೆ ಮಾಡುವುದು ಅಪರಾಧ. ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು … Continued

ಬೆಂಗಳೂರು | ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ದುರುಳರು…!

ಬೆಂಗಳೂರು: ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ ಎನ್ನಲಾಗಿದ್ದು, ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಭಾನುವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಹಸುಗಳಿಗೆ … Continued

ಚಿಕ್ಕಮಗಳೂರು | ಶರಣಾದ 6 ನಕ್ಸಲರ ಶಸ್ತ್ರಾಸ್ತ್ರಗಳು ಪತ್ತೆ

ಚಿಕ್ಕಮಗಳೂರು : ಸರ್ಕಾರಕ್ಕೆ ಶರಣಾಗಿರುವ ಆರು ಮಂದಿ ನಕ್ಸಲರು ಬಳಸುತ್ತಿದ್ದ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೂತಿಟ್ಟಿದ್ದರು. ನಕ್ಸಲರು ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ … Continued

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಗುರುತಿಸಿ ಅಂತಹ ಕಾರ್ಡ್‌ಗಳನ್ನು ಹಂತ ಹಂತವಾಗಿ ರದ್ದು ಮಾಡಿ. ಆದರೆ, ಈ ವೇಳೆ ಯಾವುದೇ ಅರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ … Continued

ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಎದುರು 6 ನಕ್ಸಲರು ಶರಣಾಗತಿ

ಬೆಂಗಳೂರು: ಬುಧವಾರ (ಜ. 8) 6 ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ … Continued