ಬೆಂಗಳೂರು | 5 ಸ್ಟಾರ್ ಹೋಟೆಲ್‌ನಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ; ಪೈಲಟ್ ವಿರುದ್ಧ ಆರೋಪ

ಬೆಂಗಳೂರು: ಖಾಸಗಿ ಚಾರ್ಟರ್ಡ್ ವಿಮಾನಯಾನ ಸಂಸ್ಥೆಯೊಂದರ ಪೈಲಟ್ ವಿರುದ್ಧ, ಬೆಂಗಳೂರಿನ ಹೋಟೆಲ್‌ನಲ್ಲಿ ರಾತ್ರಿ ತಂಗಿದ್ದ ವೇಳೆ 26 ವರ್ಷದ ಕ್ಯಾಬಿನ್ ಸಿಬ್ಬಂದಿ ಸದಸ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ನವೆಂಬರ್ 18 ರಂದು ನಡೆದಿದೆ ಎಂದು ಹೇಳಲಾಗಿದ್ದರೂ, ಸಂತ್ರಸ್ತೆ ಎರಡು ದಿನಗಳ ನಂತರ ಹೈದರಾಬಾದ್ ತಲುಪಿದ ಮೇಲೆ ಪ್ರಕರಣ … Continued

ಬೆಂಗಳೂರು | ವಂದೇ ಭಾರತ್ ರೈಲು ಡಿಕ್ಕಿ ; ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ದುಃಖಕರ ಘಟನೆ ನಡೆದಿದೆ. ಭಾನುವಾರ ಸಂಜೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಯುವ ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಕೇರಳ ಮೂಲದ ಜಸ್ಟಿನ್ ಜೋಸೆಫ್ (21) ಮತ್ತು ಸ್ಟೆರಿನ್ ಎಲ್ಜಾ ಸಾಜಿ (19) ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, … Continued

ಬೆಂಗಳೂರು ಹಣದ ವಾಹನ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : 5.76 ಕೋಟಿ ರೂ. ವಶ, 3 ಪ್ರಮುಖ ಆರೋಪಿಗಳ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಹೈ-ಪ್ರೊಫೈಲ್ ಎಟಿಎಂ ನಗದು ವಾಹನ ದರೋಡೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದು, ಘಟನೆ ಸಂಭವಿಸಿದ 60 ಗಂಟೆಗಳ ಒಳಗೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ 5.76 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ನಡೆದಿದ್ದ ಈ ದರೋಡೆ, ಸಿಎಂಎಸ್ (CMS) ಸಂಸ್ಥೆಯು ನಿರ್ವಹಿಸುವ 7.11 ಕೋಟಿ ರೂ. ನಗದನ್ನು ಹೊತ್ತೊಯ್ಯುತ್ತಿದ್ದ ವಾಹನದಲ್ಲಿ … Continued

ಬೆಂಗಳೂರಲ್ಲಿ ಹಾಡಹಗಲೇ 7 ಕೋಟಿ ರೂ. ದರೋಡೆ ; ಎಟಿಎಂಗೆ ಹಣ ತುಂಬುವ ವಾಹನದಿಂದ ಹಣ ದೋಚಿದ ಗ್ಯಾಂಗ್…!

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಹಾಡಹಗಲೇ ಭಾರೀ ದರೋಡೆ ನಡೆದಿದ್ದು, ಕೇಂದ್ರ ಸರ್ಕಾರದ ತೆರಿಗೆ ಅಧಿಕಾರಿಗಳು ಎಂದು ಹೇಳಿಕೊಂಡ ದುಷ್ಕರ್ಮಿಗಳು ಎಟಿಎಂಗೆ ಹಣ ತುಂಬುವ ವಾಹನವನ್ನು ತಡೆದು ₹7 ಕೋಟಿ ಹಣದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಜಯನಗರದ ಅಶೋಕ ಸ್ತಂಭದ ಬಳಿ ಈ ಘಟನೆ ನಡೆದಿದ್ದು, ತೆರಿಗೆ ಅಧಿಕಾರಿಗಳಂತೆ ನಟಿಸಿದ ಕಳ್ಳರು “ದಾಖಲೆಗಳನ್ನು ಪರಿಶೀಲಿಸಬೇಕು ಮತ್ತು ನಗದು … Continued

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ (B.M. Parvathi) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ವಾಸಕೋಶದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪಾರ್ವತಿ ಅವರನ್ನು ಸೋಮವಾರ ಅಪರಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಮತ್ತು … Continued

ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ ; ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ…!

ಬೆಂಗಳೂರು: ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯೊಬ್ಬರಿಗೆ ಆರು ತಿಂಗಳ ಅವಧಿಯಲ್ಲಿ ಸುಮಾರು ₹ 32 ಕೋಟಿಗಳಷ್ಟು ಬೃಹತ್ ಮೊತ್ತದ ವಂಚನೆ ಮಾಡಲಾಗಿದೆ. ‘ಡಿಜಿಟಲ್ ಬಂಧನ’ (Digital Arrest) ಹೆಸರಿನಲ್ಲಿ ಈ ವಂಚನೆ ನಡೆಸಲಾಗಿದ್ದು, ಸಿಬಿಐ (CBI) ಅಧಿಕಾರಿಗಳೆಂದು ನಟಿಸಿದ ವಂಚಕರು ಮಹಿಳೆಯನ್ನು ನಿರಂತರವಾಗಿ ವೀಡಿಯೊ ಕಣ್ಗಾವಲಿನಲ್ಲಿರಿಸಿ, ಹಣ ಕಳುಹಿಸುವಂತೆ ಒತ್ತಾಯಿಸಿ 187 ಬ್ಯಾಂಕ್ ವರ್ಗಾವಣೆಗಳ ಮೂಲಕ … Continued

ವೀಡಿಯೊಗಳು…| ಬೆಂಗಳೂರು : ಬನ್ನೇರುಘಟ್ಟದಲ್ಲಿ ಸಫಾರಿ ಬಸ್ಸಿನ ಕಿಟಕಿ ಮೇಲೆ ಹಾರಿ ಪರಚಿದ ಚಿರತೆ ; ಮಹಿಳೆಗೆ ಗಾಯ

ಬೆಂಗಳೂರು : ಬೆಂಗಳೂರು ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (Bannerghatta National Park) ಚಿರತೆ ಸಫಾರಿ ವೇಳೆ ಚಿರತೆಯೊಂದು ಸಫಾರಿ ಬಸ್ಸಿನ ಕಿಟಕಿಯ ಜಾಲರಿಯ ಮೂಲಕ ದಾಳಿ ಮಾಡಲು ಪ್ರಯತ್ನಿಸಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆ ವಹೀದಾ ಬಾನು ಎಂಬವರಿಗೆ ಗಾಯಗಳಾಗಿದ್ದು, ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌ ವೀಡಿಯೊ ವೈರಲ್‌ ; ಬಿಜೆಪಿ ಆಕ್ಷೇಪ, ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ … Continued

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಭದ್ರತಾ ಲೋಪ ; ಕುಖ್ಯಾತ ಕೈದಿಗಳಿಂದ ಮೊಬೈಲ್, ಟಿವಿ ಬಳಕೆ-ವೀಡಿಯೊ ವೈರಲ್…!

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ದೊಡ್ಡ ಮಟ್ಟದ ಭದ್ರತಾ ಲೋಪ ಹಾಗೂ ಕೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸಂಬಂಧಿಸಿದಂತೆ, ಕುಖ್ಯಾತ ಕೈದಿಗಳಾದ ಐಸಿಸ್ (ISIS) ಉಗ್ರಗಾಮಿ ನೇಮಕಾತಿಯ ಆರೋಪಿ ಮತ್ತು ಸರಣಿ ಅತ್ಯಾಚಾರಿ ಹಾಗೂ ಕೊಲೆಗಡುಕ ಜೈಲಿನೊಳಗೆ ಮೊಬೈಲ್‌ಗಳನ್ನು ಬಳಸುತ್ತಿರುವ ಮತ್ತು ಟಿವಿ ವೀಕ್ಷಿಸುತ್ತಿರುವ ವಿಡಿಯೋಗಳು ಹೊರಬಿದ್ದ … Continued

ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್.ವೈ ಮೇಟಿ ನಿಧನ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ (Congres MLA) ಎಚ್.ವೈ ಮೇಟಿ (HY Meti) ಅವರು ಮಂಗಳವಾರ ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎಚ್.ವೈ ಮೇಟಿ ಅವರು ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಗಲೋಕಟೆ ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ … Continued