ಕನ್ನಡ ಕಿರುತೆರೆ ನಟಿಗೆ ಅಶ್ಲೀಲ ವೀಡಿಯೊ ಕಳುಹಿಸಿ ಕಿರುಕುಳ ; ಆರೋಪಿ ಬಂಧನ

ಬೆಂಗಳೂರು: ಕನ್ನಡ ಹಾಗೂ ತೆಲುಗು ಧಾರವಾಹಿಗಳಲ್ಲಿ ಕೆಲಸ ಮಾಡುವ 41 ವರ್ಷದ ನಟಿಯೊಬ್ಬರು ತಮಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಪದೇ ಪದೇ ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸಿದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಆತ ಕಿರುಕುಳ ಮುಂದುವರೆಸಿದ್ದ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ತೆಲುಗು ಮತ್ತು ಕನ್ನಡ … Continued

ಬೆಂಗಳೂರು : ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಾಕು ನಾಯಿಯನ್ನು ನೆಲಕ್ಕೆ ಬಡಿದು ಕೊಂದ ಮನೆಕೆಲಸದವಳು…!

ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯೊಬ್ಬರು ಸಾಕು ನಾಯಿಯನ್ನು ಅಪಾರ್ಟ್‌ಮೆಂಟ್ ಲಿಫ್ಟ್‌ನ ನೆಲಕ್ಕೆ ಬಡಿದು ಭೀಕರ ಕೊಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪುಟ್ಟ ನಾಯಿಮರಿಯನ್ನು ನೋಡಿಕೊಳ್ಳುವುದಕ್ಕೆಂದೇ ಕೆಲಸಕ್ಕಿದ್ದ ಮಹಿಳೆ ಅಮಾನವೀಯ ಕೃತ್ಯ ಎಸಗಿದ್ದು, ಆಕೆಯ ವಿರುದ್ಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವೆಂಬರ್ 1 … Continued

ಖಾನಾಪುರ | ವಿದ್ಯುತ್ ಸ್ಪರ್ಶಿಸಿ ಎರಡು ಕಾಡಾನೆಗಳ ಸಾವು : ತನಿಖೆಗೆ ಆದೇಶ

ಬೆಳಗಾವಿ : ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಭತ್ತದ ಗದ್ದೆಯಲ್ಲಿ ಎರಡು ಆನೆಗಳು ಏಕಕಾಲದಲ್ಲಿ ಸಾವಿಗೀಡಾಗಿರುವುದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಬಳಿ ಕಂಡುಬಂದಿದೆ ಎಂದು ವರದಿಯಾಗಿದೆ. ಮಾಹಿತಿಗಳ ಪ್ರಕಾರ,ಸುಳೇಗಾಳಿ ಗ್ರಾಮದ ರೈತ ಗಣಪತಿ ಗುರವ ಅವರು ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ತಮ್ಮ ಹೊಲದ ಸುತ್ತಲೂ ಸೌರಶಕ್ತಿ … Continued

ಬೆಂಗಳೂರು | ಸಿಗ್ನಲ್ ಜಂಪ್‌ ಮಾಡಿ ಡಿಕ್ಕಿ ಹೊಡೆದ ಆಂಬುಲೆನ್ಸ್ ; ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಜೀವ ಉಳಿಸುವ ವಾಹನ ಆಂಬುಲೆನ್ಸ್ ನಗರದಲ್ಲಿ ಮಾರಣಾಂತಿಕ ರೂಪ ತಾಳಿದ್ದು, ನಿಯಂತ್ರಣ ಕಳೆದುಕೊಂಡು ಸಿಗ್ನಲ್‌ನಲ್ಲಿ ನಿಂತಿದ್ದ ಹಲವು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ಘಟನೆಯು ಶನಿವಾರ ರಾತ್ರಿ ಸುಮಾರು 11:00 ಗಂಟೆ ಸುಮಾರಿಗೆ ನಗರದ ರಿಚ್‌ಮಂಡ್ ಸರ್ಕಲ್ ಬಳಿ ಸಂಭವಿಸಿದೆ. ಟ್ರಾಫಿಕ್‌ ಸಿಗ್ನಲ್‌ನಲ್ಲಿ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಿ, ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆ ಅನುಮತಿ ಹಿಂಪಡೆಯಿರಿ ; ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಒತ್ತಾಯಿಸಿದ ನಿಯೋಗ

ಬೆಂಗಳೂರು : ಬೆಂಗಳೂರು : ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಗೌರಾಧ್ಯಕ್ಷತೆಯ ಬೇಡ್ತಿ ಅಘಾನಿಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು, ಸಂಸದರನ್ನು ಒಳಗೊಂಡ ಸಮಿತಿಯು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿ ಅನುಷ್ಠಾನ ಮಾಡಲು ಹೊರಟಿರುವ ಮೂರು ಹೊಸ ಯೋಜನೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಮತ್ತು … Continued

ಬೀದಿಗಳಲ್ಲಿ ಕಸ ಎಸೆದರೆ, ನಿಮ್ಮ ಮನೆ ಮುಂದೆ ಕಸ ಸುರಿದು ದಂಡ…! ಬೇಕಾಬಿಟ್ಟಿ ಕಸ ಎಸೆಯುವವರ ವಿರುದ್ಧ ಜಿಬಿಎ ವಿನೂತನ ಕ್ರಮ

 ಬೆಂಗಳೂರು: ರಸ್ತೆಗಳಲ್ಲಿ ಕಸ ಎಸೆಯುವ ಬೆಂಗಳೂರಿನ ನಿವಾಸಿಗಳಿಗೆ ತೀವ್ರ ಎಚ್ಚರಿಕೆ ನೀಡಲಾಗಿದೆ. ನೀವು ರಸ್ತೆಯ ಮೇಲೆ ಕಸ ಎಸೆದರೆ, ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಅದನ್ನು ನಿಮ್ಮ ಮನೆ ಬಾಗಿಲಿಗೇ ವಾಪಸ್ ಎಸೆಯಲಿದೆ. ಜಿಬಿಎ (GBA) ಯ “ಕಸ ಎಸೆಯುವ ಹಬ್ಬ” ಎಂಬ ಈ ವಿನೂತನ ಉಪಕ್ರಮವು, ನಗರವನ್ನು ಕೊಳಕು ಮಾಡುವ ಜನರ ಮನೆ ಬಾಗಿಲಿಗೆ … Continued

ಬೆಂಗಳೂರು : ಕಾರಿನ ಕನ್ನಡಿಗೆ ಬೈಕ್‌ ತಾಗಿದ್ದಕ್ಕೆ 2 ಕಿಮೀ ಹಿಂಬಾಲಿಸಿ ಬೈಕಿಗೆ ಗುದ್ದಿ ಸವಾರನನ್ನು ಸಾಯಿಸಿದ ದಂಪತಿ…!

ಬೆಂಗಳೂರು: ಕಾರಿನ ಕನ್ನಡಿಗೆ ಬೈಕ್‌ ಸ್ವಲ್ಪ ತಾಗಿದ್ದಕ್ಕೆ ಕಾರಿನವರು ಬೆನ್ನಟ್ಟಿ ಬೈಕ್ ಗೆ ಗುದ್ದಿ ಸವಾರನನ್ನು ಸಾಯಿಸಿರುವ ಘಟನೆ ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮ ಲೇಔಟ್‌ನಲ್ಲಿ ಅಕ್ಟೋಬರ್ 25ರಂದು ರಾತ್ರಿ ಈ ಘಟನೆ ನಡೆದಿದೆ. ದರ್ಶನ ಮತ್ತು ವರುಣ ಎಂಬುವರು ಬೈಕ್ … Continued

ಕಿರುತೆರೆ ನಟಿ-ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಹಿಟ್‌ & ರನ್‌ ಪ್ರಕರಣ

ಬೆಂಗಳೂರು: ಕಿರುತೆರೆ ನಟಿ, ಬಿಗ್‌ ಬಾಸ್‌ (Bigg boss) ಮಾಜಿ ಸ್ಪರ್ಧಿ ದಿವ್ಯಾ ಸುರೇಶ ಅವರ ವಿರುದ್ಧ ಹಿಟ್ ಆ್ಯಂಡ್ ರನ್ ಆರೋಪ ಕೇಳಿಬಂದಿದೆ. ಅತಿ ವೇಗ ಮತ್ತು ನಿರ್ಲಕ್ಷದಿಂದ ಕಾರು ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿದೆ ಎನ್ನಲಾಗಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ವೇಳೆಗೆ ಬೆಂಗಳೂರಿನ ಬ್ಯಾಟರಾಯನಪುರ … Continued

ಹೈದರಾಬಾದ್-ಬೆಂಗಳೂರು ಬಸ್ಸಿನಲ್ಲಿ ಬೆಂಕಿ ; 19 ಜನರು ಸಾವು

ಕರ್ನೂಲ್ (ಆಂಧ್ರಪ್ರದೇಶ): ಶುಕ್ರವಾರ ಮುಂಜಾನೆ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಐಷಾರಾಮಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು 19 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ 43 ಜನರಿದ್ದರು. ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಬಳಿ ಬಸ್ ಅಪಘಾತ ಸಂಭವಿಸಿದೆ. ಬಸ್ ಮಧ್ಯರಾತ್ರಿ ಸುಮಾರಿಗೆ ಹೈದರಾಬಾದಿನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿತು … Continued

ವೀಡಿಯೊ..| ಬೆಂಗಳೂರಲ್ಲಿ ಕ್ರೂರ ಸರಗಳ್ಳತನ ; ಕತ್ತಿ ಹಿಡಿದು ಮಹಿಳೆಯರಿಗೆ ಹೆದರಿಸಿ, ಓರ್ವ ಮಹಿಳೆ ಬೆರಳು ಕತ್ತರಿಸಿ ಸರ ದೋಚಿದ ಕಳ್ಳರು

ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೆಪ್ಟೆಂಬರ್‌ನಲ್ಲಿ ಕತ್ತಿ ಹಿಡಿದು ಬೆದರಿಸಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಳ್ಳರು ಕಸಿದುಕೊಂಡ ಘಟನೆಯ ವೀಡಿಯೊ ಈಗ ವೈರಲ್‌ ಆಗಿದೆ. ಮಹಿಳೆ ವಿರೋಧಿಸಿದಾಗ, ಸರಗಳ್ಳ ಆಕೆಯ ಎರಡು ಬೆರಳುಗಳನ್ನು ಕತ್ತರಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ಇಬ್ಬರು ಸರಗಳ್ಳರಾದ ಪ್ರವೀಣ ಮತ್ತು ಯೋಗಾನಂದ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. … Continued