2023ರಲ್ಲಿ ವರದಕ್ಷಿಣೆ ಪ್ರಕರಣಗಳು ಶೇ.14ರಷ್ಟು ಏರಿಕೆ; ಬೆಂಗಳೂರಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲು…!

ಬೆಂಗಳೂರು : 2023 ರಲ್ಲಿ ಬೆಂಗಳೂರಿನಲ್ಲಿ ಭಾರತದಲ್ಲೇ ಅತಿ ಹೆಚ್ಚು ವರದಕ್ಷಿಣೆ ಸಂಬಂಧಿತ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಲ್ಲಿ 2023 ರಲ್ಲಿ ಒಟ್ಟು 1,013 ದೂರುಗಳು ದಾಖಲಾಗಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದ ಇತ್ತೀಚಿನ ಮಾಹಿತಿಯ ಪ್ರಕಾರ, ಈ ಸಂಖ್ಯೆ ದೇಶದ 18 ಇತರ ಮೆಟ್ರೋ ನಗರಗಳಲ್ಲಿ ದಾಖಲಾದ ಒಟ್ಟು ಪ್ರಕರಣಗಳಿಗಿಂತ ಹೆಚ್ಚಾಗಿದೆ. ವರದಕ್ಷಿಣೆ … Continued

ಗಟ್ಟಿಮೇಳ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ನಿಧನ

ಬೆಂಗಳೂರು : ಗಟ್ಟಿಮೇಳ ಧಾರಾವಾಹಿಯ ಮೂಲಕ ಕರ್ನಾಟಕದ ಜನರ ಮನಗೆದ್ದಿದ್ದ ಹಿರಿಯ ನಟಿ ಕಮಲಶ್ರೀ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಟಿ ಕಮಲಶ್ರೀ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರು ಮಂಗಳವಾರ (ಸೆಪ್ಟೆಂಬರ್‌ 30) ಮೃತಪಟ್ಟಿದ್ದಾರೆ. ಕಮಲಶ್ರೀ ಅವರು ಜನಪ್ರಿಯ ಧಾರಾವಾಹಿಯಾದ ‘ಗಟ್ಟಿಮೇಳ’ ದಲ್ಲಿ ಅಜ್ಜಿಯ … Continued

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜ್ವರ ಕಾಣಿಸಿಕೊಂಡು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಖರ್ಗೆ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಮಂಗಳವಾರ ತಡರಾತ್ರಿ ನಿರಂತರ ಜ್ವರ ಬಂದ ನಂತರ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ … Continued

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಎಲ್ಲ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ ನೀಡಿದ್ದು, ನಾಗರಿಕ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ … Continued

ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು, ಸೋಮವಾರ (ಸೆಪ್ಟೆಂಬರ್‌ ೨೯) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಯಶವಂತ ಸರದೇಶಪಾಂಡೆ ಅವರಿಗೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರು … Continued

ಬೆಂಗಳೂರು-ಮುಂಬೈ ಮಧ್ಯೆ ನೂತನ ಸೂಪರ್‌ ಫಾಸ್ಟ್ ರೈಲು ಆರಂಭಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ. ಇದರಿಂದ ಸುಮಾರು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆ ಬಹುತೇಕ ಈಡೇರುವ ಹಂತಕ್ಕೆ ಬಂದುನಿಂತಂತಾಗಿದೆ. ಬಿಜೆಪಿ ನಾಯಕ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಈ ವಿಷಯ ಪ್ರಕಟಿಸಿದ್ದಾರೆ. ಸಂಸತ್ತು, … Continued

ಸಂಚಾರ ದಟ್ಟಣೆ ಕಡಿಮೆ ಮಾಡಲು ವಿಪ್ರೋ ಕ್ಯಾಂಪಸ್ಸಿನಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೋರಿದ್ದ ಸಿಎಂ ಸಿದ್ದರಾಮಯ್ಯ ; ಒಪ್ಪದ ಅಜೀಂ ಪ್ರೇಮ್‌ ಜಿ

ಬೆಂಗಳೂರು: ಬೆಂಗಳೂರು ಔಟರ್‌ ರಿಂಗ್‌ ರೋಡ್‌ (outer ring road) ಪ್ರದೇಶದಲ್ಲಿ ಭಾರೀ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರಕ್ಕಾಗಿ ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಮನವಿಗೆ ವಿಪ್ರೋ ಅಧ್ಯಕ್ಷ ಅಜೀಜ್ ಪ್ರೇಮ್‌ಜಿ ಸಮ್ಮತಿ ಸೂಚಿಸಿಲ್ಲ. ಕ್ಯಾಂಪಸ್ ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು, ಕ್ಯಾಂಪಸ್ … Continued

ಮೈಸೂರಿನಲ್ಲಿ ಸಾಹಿತಿ ಎಸ್‌.ಎಲ್‌. ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ. ಎಸ್ ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಿನ್ನೆ ಬುಧವಾರ (ಸೆ.24) ನಿಧನರಾದ ಸಾಹಿತಿ ಎಸ್.ಎಲ್. ಭೈರಪ್ಪ (94) ಅವರ ಪಾರ್ಥಿವ ಶರೀರವನ್ನು ಇಂದು ಗುರುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ … Continued

ಬಾಲ್ಯದಲ್ಲಿ ತಾಯಿ, ಅಣ್ಣ, ಅಕ್ಕ, ತಂಗಿ ಪ್ಲೇಗ್‌ ನಿಂದ ಸಾವು….ತಮ್ಮನ ಶವ ಒಬ್ಬನೇ ಹೊತ್ತೊಯ್ದು ಅಂತ್ಯಕ್ರಿಯೆ ಮಾಡಿದ್ದ ಬಾಲಕ ಭೈರಪ್ಪ

ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ SL Bhyrappa)ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಆದರೆ ಭೈರಪ್ಪ ( ಅವರ ಬಾಲ್ಯ ಅತ್ಯಂತ ದುರಂತದಿಂದ ಕೂಡಿತ್ತು. ಅವರು ಬಾಲ್ಯದಲ್ಲಿ ಪ್ಲೇಗ್‌ಗೆ ತುತ್ತಾಗಿದ್ದರು. ಹೇಗೋ ಅದರಿಂದ ಪಾರಾದರು. ಆದರೆ ಅವರ ಕುಟುಂಬದ ಸದಸ್ಯರನ್ನು ಹೆಮ್ಮಾರಿ ಪ್ಲೇಗ್‌ ಬಲಿ ತೆಗೆದುಕೊಂಡಿತ್ತು. ಈ ಬಗ್ಗೆ ಅವರು ತಮ್ಮ ಆತ್ಮಕಥನ ಭಿತ್ತಿಯಲ್ಲಿಯೂ ಬರೆದಿದ್ದಾರೆ. ಅವರ … Continued

ಸಾಹಿತಿ ಎಸ್‌.ಎಲ್‌.ಭೈರಪ್ಪ ನಿಧನ ; ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ನಾಳೆ, ಗುರುವಾರ (ಸೆಪ್ಟೆಂಬರ್‌ 25) ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ನಾಳೆ ಗುರುವಾರ ಬೆಳಿಗ್ಗೆ 8 ಎಲ್ಲ ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆಯಬೇಕೆಂದು ಕುಟುಂಬದವರು … Continued