ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವು

ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್‌ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) … Continued

ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಕರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಇದೆ. ಅರಬ್ಬೀ ಸಮುದ್ರದ ರಾಜ್ಯದ ಕರಾವಳಿಯ ಬಳಿ ಮೇ 22 ರಂದು ವಾಯುಭಾರ ಕುಸಿತ ಆಗಲಿದೆ. ಇದರ ಪ್ರಭಾವದಿಂದ ಮೇ 24ರ ವರೆಗೆ ಕರ್ನಾಟಕದಾದ್ಯಂತ ಉತ್ತಮ ಮಳೆ ಆಗಲಿದೆ … Continued

ವೀಡಿಯೊಗಳು..| ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತತ್ತರ ; ಬುಲ್ಡೋಜರ್‌ ನಲ್ಲಿ ಪರಿಸ್ಥಿತಿ ವೀಕ್ಷಿಸಿದ ಶಾಸಕ

ಬೆಂಗಳೂರು : ಭಾನುವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆಯವರೆಗೆ ಆರು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವಾರು ತಗ್ಗು ಪ್ರದೇಶಗಳಲ್ಲಿ ತೀವ್ರ ನೀರು ನಿಂತಿದ್ದು, ದೈನಂದಿನ ಜನಜೀವನ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿನಲ್ಲಿ ಕಳೆದ 48 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಬಳಕೆದಾರರು ‘ಎಕ್ಸ್’ ನಲ್ಲಿ ಇದನ್ನು ನಗರದ ಈ ವರ್ಷದ ಅತಿ ಹೆಚ್ಚು ಮಳೆ … Continued

ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಸ್ವಾಧೀನಾನುಭವ ಪ್ರಮಾಣ ಪತ್ರ( Occupancy certificates) ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ವಿದ್ಯುತ್‌ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್‌ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೀಡಿರುವ … Continued

ಕನ್ನಡಿಗರ ಕುರಿತು ವಿವಾದಾತ್ಮಕ ಹೇಳಿಕೆ; ಹಿನ್ನೆಲೆ ಗಾಯಕ ಸೋನು ನಿಗಮ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರಿಗೆ ನೋವುಂಟುಮಾಡುವ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ ಎ ಅವರು ದೂರು ದಾಖಲಿಸಿದ್ದಾರೆ. ಕನ್ನಡಿಗರ ಭಾವನೆಗಳಿಗೆ ನೋವುಂಟುಮಾಡುವ ಮತ್ತು ಕರ್ನಾಟಕದ … Continued

ಯತ್ನಾಳ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ : ಆದರೆ…

ಬೆಂಗಳೂರು: ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಸವಾಲು ಸ್ವೀಕರಿಸಿರುವ ಶಿವಾನಂದ ಪಾಟೀಲ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ಯತ್ನಾಳ ವಿರುದ್ಧ ತಾನು ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್‌ ಇದೆ. … Continued

ಗ್ಯಾಸ್ ಸಿಲಿಂಡರ್‌ ಸೋರಿಕೆಯಿಂದ ಹೊತ್ತಿ ಉರಿದ ಮನೆ ; ಇಬ್ಬರು ಸಜೀವ ದಹನ, ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ನೆಲಮಂಗಲ ಸಮೀಪದ ಅಡಕಮಾರಹಳ್ಳಿಯಲ್ಲಿ ಗುರುವಾರ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಿಂದ ಮೃತರನ್ನು 50 ವರ್ಷದ ನಾಗರಾಜು ಮತ್ತು 50 ವರ್ಷದ ಶ್ರೀನಿವಾಸ ಎಂದು ಗುರುತಿಸಲಾಗಿದೆ. ಗಾಯಗೊಂಡ ಅಭಿಷೇಕ ಗೌಡ, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮನೆಯೊಳಗಿನ ಎಲ್‌ಪಿಜಿ ಗ್ಯಾಸ್ ಸೋರಿಕೆಯಿಂದ ಬೆಂಕಿ … Continued

ಕಾರವಾರ | ತಲೆಮರೆಸಿಕೊಂಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಮುಖ ಆರೋಪಿ ಬಂಧನ

ಕಾರವಾರ: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ (KG Halli-DJ Halli) ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಆರೋಪಿ ಮೌಸೀನ್ ಪಿಎಫ್‌ಐ (PFI) ಕಾರ್ಯಕರ್ತನಾಗಿದ್ದ ಹಾಗೂ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ವಿರುದ್ಧ ಕೋಫೆಪೋಸಾ ಪ್ರಕರಣ

ಬೆಂಗಳೂರು: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (Ranya Rao) ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA ACT) 1974 ಅನ್ವಯ ದೂರು ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ : ತಾಯ್ನಾಡಿಗೆ ಬಂದ ಕನ್ನಡಿಗರ ಮೃತದೇಹ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಸಾವಿಗೀಡಾದ ಕರ್ನಾಟಕದ ಮೂವರು ಪ್ರವಾಸಿಗರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಬೆಳಿಗ್ಗೆ ಬೆಂಗಳೂರು ತಲುಪಿವೆ. ಬೆಂಗಳೂರಿನ ಭರತ ಭೂಷಣ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸಂತ್ರಸ್ತರ ಕುಟುಂಬಗಳ ಸದಸ್ಯರು ಸಹ … Continued