ಬೆಂಗಳೂರಲ್ಲಿ ಭಾರಿ ವಂಚನೆ: 3 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಖದೀಮರು ಎಸ್ಕೇಪ್

ಬೆಂಗಳೂರು : ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿನಡೆದ  ಸಿನಿಮೀಯ ಶೈಲಿಯ ಹೈ-ಪ್ರೊಫೈಲ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಖದೀಮರು ಪಕ್ಕಾ ಪ್ಲಾನ್ ಮಾಡಿ ಬರೋಬ್ಬರಿ 1.85 ಕೆಜಿ ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ರಸಿದ್ಧ ನಾಗರತ್‌ ಪೇಟೆಯ “ಮೆಹ್ತಾ ಜ್ಯುವೆಲ್ಲರಿ” (Mehta Jewellery) ಮಾಲೀಕರು ಈ ಬೃಹತ್ ವಂಚನೆಗೆ ಒಳಗಾದವರು ಎನ್ನಲಾಗಿದೆ. ಉದ್ಯಮಿ ನೀಡಿರುವ … Continued

ಬೆಂಗಳೂರು : 35 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ; 8 ಆರೋಪಿಗಳ ಬಂಧನ

ಬೆಂಗಳೂರು : ಇತ್ತೀಚಿನ ದಿನಗಳಲ್ಲೇ ಬೆಂಗಳೂರಿನಲ್ಲಿ ಅತ್ಯಂತ ಬೃಹತ್ ಎನ್ನಲಾದ ಅಂತರರಾಜ್ಯ ಮಾದಕ ವಸ್ತು ಜಾಲವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್‌ನ ಉತ್ತರ ವಿಭಾಗದ ಪೊಲೀಸರು ನಡೆಸಿದ ಈ ಮಹತ್ವದ ಕಾರ್ಯಾಚರಣೆಯಲ್ಲಿ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 35 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ಎರಡು ಕಾರುಗಳನ್ನು ಜಪ್ತಿ … Continued

ಬೆಂಗಳೂರು : ಯುವ ಕಾಂಗ್ರೆಸ್ ಸಭೆಯಲ್ಲಿ ತಳ್ಳಾಟ, ನೂಕಾಟ, ಗದ್ದಲ…!

ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಜಗಳ, ತಳ್ಳಾಟ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದಿದೆ. ಯುವ ಕಾಂಗ್ರೆಸ್‌ನ (Youth Congress) ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಬೀದಿಗೆ ಬಂದಿದ್ದು, … Continued

ಯಕ್ಷಗಾನ ಭರತನ ನಾಟ್ಯಶಾಸ್ತ್ರದ ಜೀವಂತ ಪ್ರಯೋಗ ; ಶುದ್ಧ ಯಕ್ಷಗಾನವು ಭಾರತೀಯ ಸಾಂಸ್ಕೃತಿಕತೆಯ ಸಾರ ; ಅಶೋಕ ಹಾಸ್ಯಗಾರ

ಬೆಂಗಳೂರು : ಯಕ್ಷಗಾನವು ಭರತಮುನಿಯ ನಾಟ್ಯಶಾಸ್ತ್ರದ ಜೀವಂತ ಪ್ರಯೋಗವಾದುದರಿಂದ ಇದು ಭಾರತೀಯ ಸಾಂಸ್ಕೃತಿಕತೆಯ ಉನ್ನತ ಪ್ರದರ್ಶನವಾಗಿದೆ ಎಂದು ಸಂಶೋಧಕ ಹಾಗೂ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅಭಿಪ್ರಾಯಪಟ್ಟರು. ಅವರು ಇಲ್ಲಿಯ ಕೋರಮಂಗಲದ ಇಂಡಿಯನ್ ಹೆರಿಟೇಜ್ ಅಕಾಡೆಮಿಯು ಮೇ ೮, ೨೦೨೬ ರಂದು ಕಶ್ಯಪ ಸಭಾಂಗಣದಲ್ಲಿ ಏರ್ಪಡಿಸಿದ್ದ “ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಮತ್ತು ಯಕ್ಷಗಾನ” ಎಂಬ ವಿಷಯದ … Continued

ವಿಡಿಯೋ..| ರಾಮಸೇತು ಸಮುದ್ರ ಮಾರ್ಗದಲ್ಲಿ ಶ್ರೀಲಂಕಾದಿಂದ ಭಾರತಕ್ಕೆ 11 ತಾಸಿನೊಳಗೆ 32 ಕಿ.ಮೀ ಈಜಿ ಬಂದ ಬೆಂಗಳೂರು ದಂಪತಿ…!

ಬೆಂಗಳೂರು: ಸಿಲಿಕಾನ್ ಸಿಟಿಯ ಐಟಿ ಉದ್ಯೋಗಿಗಳಾದ ದಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದೆ ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇವರು ಶ್ರೀಲಂಕಾದಿಂದ ಭಾರತಕ್ಕೆ ರಾಮಸೇತು ಮಾರ್ಗದ ಮೂಲಕ ‘ಸೈಡ್-ಬೈ-ಸೈಡ್’ (ಜೊತೆಜೊತೆಯಾಗಿ) ಈಜುವ ಮೂಲಕ ಈ ಸಾಧನೆ ಮಾಡಿದ ಮೊದಲ ದಂಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೇ 7 ರಂದು ಮುಂಜಾನೆ ಸುಮಾರು 4:30ಕ್ಕೆ ಶ್ರೀಲಂಕಾದ ತಲೈಮನ್ನಾರ್‌ನಿಂದ … Continued

ಬೆಂಗಳೂರು : ಶೆಡ್‌ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಮನಕಲಕುವ ದುರಂತವೊಂದು ಸಂಭವಿಸಿದ್ದು, ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಕೂಲಿ ಕಾರ್ಮಿಕರು ವಾಸವಿದ್ದ ತಾತ್ಕಾಲಿಕ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಮೃತಪಟ್ಟ ಮಕ್ಕಳನ್ನು ಐದು ವರ್ಷದ ಅರ್ಜುನ್ ಮತ್ತು ಮೂರು ವರ್ಷದ … Continued

ಬೆಂಗಳೂರು : ಪ್ರಧಾನಿ ಮೋದಿ ಸಂಚಾರದ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ…!

ಬೆಂಗಳೂರು: ನಗರದ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ ಪ್ರಧಾನಿ ಮೋದಿ ತೆರಳುವ ಮಾರ್ಗದ ಬಳಿ ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಬೆಂಗಳೂರು : ಮೇ 8ರಂದು ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಮತ್ತು ಯಕ್ಷಗಾನ ಕುರಿತು ಮಾತುಕತೆ-ಸಂವಾದ

ಬೆಂಗಳೂರು : ಅಜಿಂ ಪ್ರೇಮಜೀ ವಿಶ್ವ ವಿದ್ಯಾಲಯದಿಂದ ಭಾರತೀಯ ಸಾಂಸ್ಕೃತಿಕತೆ,  ನಾಟ್ಯಶಾಸ್ತ್ರ ಹಾಗೂ ಯಕ್ಷಗಾನ ಈ ಕರಾವಳಿ ಪರಂಪರೆಯ ದೃಶ್ಯ ಕಾವ್ಯದ ಕುರಿತು  ಮಾತು-ಸಂವಾದ ಕಾರ್ಯಕ್ರಮ ಬೆಂಗಳೂರಿನ ಕೋರಮಂಗಲದ ಇಂಡಿಯನ್‌ ಹೆರಿಟೇಜ್‌ ಅಕಾಡೆಮಿಯಲ್ಲಿ ಮೇ 8ರಂದು ಸಂಜೆ 6:30ರಿಂದ ನಡೆಯಲಿದೆ. ದಶಕರೂಪಕಗಳ ದಶಾವತಾರಗಳು-ಯಕ್ಷಗಾನ ಸಂಶೋಧನಾ ಕೃತಿಯ ಲೇಖಕ ಹಾಗೂ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅವರು  … Continued

ವಿಡಿಯೋ: ಬೆಂಗಳೂರಲ್ಲಿ ಆಲಿಕಲ್ಲು ಮಳೆಯ ಅಬ್ಬರ; ಹಿಮದ ನಗರಿಯಂತಾದ ಸಿಲಿಕಾನ್ ಸಿಟಿಯ ಕೆಲ ಪ್ರದೇಶ…!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಿಪರೀತ ತಾಪಮಾನದ ಬೇಗೆಯಲ್ಲಿದ್ದ ಬೆಂಗಳೂರು ನಗರಕ್ಕೆ  ಬುಧವಾರ ಸಂಜೆ ದಿಢೀರ್ ಮಳೆ ಅಪ್ಪಳಿಸಿದೆ. ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಯು ನಗರದ ತಾಪಮಾನವನ್ನು ತಂಪಾಗಿಸಿದೆಯಾದರೂ, ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಮಳೆಯ ನಡುವೆ ಸಂಭವಿಸಿದ ಅತ್ಯಂತ ದುರದೃಷ್ಟಕರ ಘಟನೆಯೆಂದರೆ, ಶಿವಾಜಿನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ … Continued

ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಸಂಜೆ ಆರ್ಭಟಿಸಿದ ಭೀಮರೂಪಿ ಮಳೆ ಭೀಕರ ದುರಂತಕ್ಕೆ ಕಾರಣವಾಗಿದೆ. ನಗರದ ಹೃದಯಭಾಗದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಮಳೆಗಾಗಿ ಆಶ್ರಯ ಪಡೆದಿದ್ದ ಆರು ವರ್ಷದ ಮಗು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಸಂಜೆ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಮತ್ತು … Continued