ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ರಾತ್ರಿ ಸ್ನೇಹಿತರೊಂದಿಗೆ ಬೆಟ್ಟಿಂಗ್ ಚಾಲೆಂಜ್‌ ನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 32 ವರ್ಷದ ವ್ಯಕ್ತಿಯೊಬ್ಬರು ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಪೆಟ್ಟಿಗೆಯ ಮೇಲೆ ಕುಳಿತುಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ … Continued

ನಟ ದರ್ಶನ್‌ ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ನಟ ದರ್ಶನ್‌ ನೋವಿನ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದು, ಬೆನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ನಟ ದರ್ಶನ್‌ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಬಿಜಿಎಸ್ ಗ್ಲೋಬಲ್ … Continued

ನಟ ದರ್ಶನಗೆ ಮಧ್ಯಂತರ ಜಾಮೀನು: ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು…?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನಗೆ ಎಂಟು ಷರತ್ತುಗಳನ್ನು ವಿಧಿಸಿ ಕರ್ನಾಟಕ ಹೈಕೋರ್ಟ್‌ ಬುಧವಾರ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಆಮ್‌ ಆದ್ಮಿ ಪಕ್ಷದ ಮುಖಂಡ ಸತ್ಯೇಂದರ್‌ ಕುಮಾರ್‌ ಜೈನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜನರು ತಮ್ಮ ಖರ್ಚಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು … Continued

ದೀಪಾವಳಿ; ಕಾರವಾರ-ಬೆಂಗಳೂರು ವಿಶೇಷ ರೈಲು

ಬೆಂಗಳೂರು : ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30ರಂದು ಬೆಂಗಳೂರು- ಕಾರವಾರ ವಿಶೇಷ ರೈಲು ಸಂಚಾರವನ್ನು ಘೋಷಣೆ ಮಾಡಿದ್ದ ರೈಲ್ವೆ ಇದೀಗ ನವೆಂಬರ್ 3 ರಂದು ಕಾರವಾರದಿಂದ ಇನ್ನೊಂದು ವಿಶೇಷ ರೈಲು ಬಿಡಲಿದೆ. ನವೆಂಬರ್ 3 ರಂದು ಕಾರವಾರದಿಂದ ರೈಲು ಮಧ್ಯಾಹ್ನ 12ಕ್ಕೆ ಹೊರಟು ಮಾರನೇ ದಿನ ಬೆಳಗ್ಗೆ ನಾಲ್ಕು ಗಂಟೆಗೆ ಬೆಂಗಳೂರು ತಲುಪಲಿದೆ. … Continued

ಮುಡಾ ಹಗರಣದ ತನಿಖೆ ಚುರುಕು : ಬೆಂಗಳೂರು ಸೇರಿ ರಾಜ್ಯದ 9 ಕಡೆ ‘ಇ.ಡಿ.’ ದಾಳಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಸೋಮವಾರ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಂಗಳೂರುಸೇರಿದಂತೆ ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮುಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಮುಂಜಾನೆಯೇ ರಾಜ್ಯದ 9 ಕಡೆ … Continued

ರಾಜಕೀಯ ನಾಯಕನಿಗೆ ಹನಿಟ್ರ್ಯಾಪ್; 20 ಲಕ್ಷ ರೂ. ಪಡೆಯುತ್ತಿದ್ದಾಗ ಮಹಿಳೆ ಅರೆಸ್ಟ್…!

ಬೆಂಗಳೂರು: ರಾಜಕೀಯ ನಾಯಕರೊಬ್ಬರಿಗೆ ಹನಿಟ್ರ್ಯಾಪ್ ಆರೋಪ ಪ್ರಕರಣದಲ್ಲಿ (Honey Trap Case) ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಮಂಜುಳಾ  ಎಂಬವಳನ್ನು ಬಂಧಿಸಿದ್ದು, ಈಕೆ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಎಂದು ಹೇಳಲಾಗುತ್ತಿದೆ. ರಾಜಕೀಯ ನಾಯಕನೊಂದೊಗೆ ಆರೋಪಿ ಮೊದಲಿಗೆ ಸೆಕ್ಸ್‌ ಚಾಟ್‌ ಮಾಡಿ, ನಂತರ ವಾಟ್ಸ್‌ ಆ್ಯಪ್‌ ವಿಡಿಯೊ ಕಾಲ್‌ನಲ್ಲಿ … Continued

ದೀಪಾವಳಿ..| ಹಸಿರು ಪಟಾಕಿ ಮಾತ್ರ ಮಾರಾಟ, ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಹಾಗೂ ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಒಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಪಟಾಕಿ … Continued

ಬೆಂಗಳೂರು | ಭಾರೀ ಮಳೆಗೆ ಕಟ್ಟಡ ಕುಸಿದು ದುರಂತ ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು : ಬೆಂಗಳೂರಿನ ಕಟ್ಟಡ ಕುಸಿತದ ಘಟನೆಯಲ್ಲಿ ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ. ಅವಶೇಷಗಳನ್ನು ತೆರವುಗೊಳಿಸಲು ಮತ್ತು ಅದರ ಒಳಗೆ ಸಿಕ್ಕಿಬಿದ್ದ ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇದುವರೆಗೆ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ಪೂರ್ವ ಭಾಗದ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ … Continued

ಭಾರೀ ಮಳೆ ; ಬುಧವಾರ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬುಧವಾರ (ಅಕ್ಟೋಬರ್‌ ೨೩) ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ … Continued

ವೀಡಿಯೊ…| ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು, ಹಲವರು ಸಿಲುಕಿರುವ ಶಂಕೆ

ಬೆಂಗಳೂರು: ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳವಾರ ಸುರಿಯುತ್ತಿರುವ ಮಳೆಯ ಪರಿಣಾಮ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಬಿದ್ದಿದೆ. ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರ ತೆಗೆದಿದ್ದಾರೆ ಹಾಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. … Continued