ಬೆಂಗಳೂರಲ್ಲಿ ಭೀಕರ ಕೊಲೆ: ಯುವತಿಯ ಕೊಂದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ ಒಂದರ ಫ್ರಿಡ್ಜ್‌ನಲ್ಲಿ ಸುಮಾರು 30 ತುಂಡುಗಳಾಗಿ ಕತ್ತರಿಸಿದ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬಂದ ನಂತರ ನೆರೆಹೊರೆಯವರು ಸಂಬಂಧಿಕರಿಗೆ ಕರೆ ಮಾಡಿದ ನಂತರ ವಿಷಯ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಅದೇ ಬಿಲ್ಡಿಂಗ್​ನ ಅಕ್ಕಪಕ್ಕದವರು … Continued

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರದ ಆರೋಪ‌ದ ಪ್ರಕರಣದಲ್ಲಿ ಬಿಜೆಪಿ ಶಾಸಕ‌ ಮುನಿರತ್ನ ಅವರಿಗೆ ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಶನಿವಾರ ಆದೇಶಿಸಿದೆ. ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನ‌ ಅನುಸಾರ ಮುನಿರತ್ನ ಅವರನ್ನು … Continued

ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಹಾಗೂ ಮೀಸಲಾತಿ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕರ್ನಾಟಕ ಬಿಜೆಪಿ ಶನಿವಾರ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಿಖ್‌ ಸಮುದಾಯದ ಬಗ್ಗೆ ದೂಷಣೆ ಹಾಗೂ ಎಸ್‌ಸಿ, ಎಸ್‌ಟಿ ಮತ್ತು … Continued

ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಪ್ರಕರಣದ ನಂತರ ಬಿಜೆಪಿ ಶಾಸಕ ಮುನಿರತ್ನಗೆ ಈಗ ಮತ್ತೊಂದು ಕಂಟಕ ಎದುರಾಗಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಶಾಸಕ … Continued

ವೀಡಿಯೊ : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ರಸ್ತೆಯಲ್ಲಿ ಓಡಾಡಿದ ಚಿರತೆ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರಿನಲ್ಲಿ ಟೋಲ್ ಪ್ಲಾಜಾ ಬಳಿ ಫ್ಲೈಓವರ್ ದಾಟುತ್ತಿದ್ದ ಚಿರತೆಯನ್ನು ಮಂಗಳವಾರ ಮುಂಜಾನೆ ಗಮನಿಸಲಾಗಿದೆ. ಇದನ್ನು ಅನೇಕ ಟೆಕ್ ಕಂಪನಿಗಳ ಕೇಂದ್ರವಾದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಂಗಳವಾರ ಮುಂಜಾನೆ 3ಕ್ಕೆ ಕಂಡುಬಂದಿದೆ. ಚಿರತೆ ಚಲನವಲನವನ್ನು ಸಿಸಿಟಿವಿಯಲ್ಲಿ ಈ ಪ್ರದೇಶದ ಹಂತ 1 ಟೋಲ್ ಪ್ಲಾಜಾದಲ್ಲಿ ಸೆರೆಹಿಡಿಯಲಾಗಿದೆ. ವೀಡಿಯೊದಲ್ಲಿ, ಚಿರತೆಯು ಸಿಲೂಯೆಟ್ ವಿರುದ್ಧ ದಿಕ್ಕಿನಲ್ಲಿ ಹಿಂತಿರುಗುವ ಮೊದಲು ರಸ್ತೆ … Continued

ವೀಡಿಯೊ..| ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ; ವೇದಿಕೆಗೆ ನುಗ್ಗಿದ ವ್ಯಕ್ತಿ..

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆಯೇ ಭದ್ರತಾ ಲೋಪ ಸಂಭವಿಸಿದೆ. ಕಾರ್ಯಕ್ರಮ ನಡೆಯುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ವೇದಿಕೆಯ ಮೇಲೆ ಬರಲು ಯತ್ನಿಸಿದ ಘಟನೆ ನಡೆದಿದೆ. ಆದರೆ, ಅವರ ಭದ್ರತಾ ಸಿಬ್ಬಂದಿ ತ್ವರಿತವಾಗಿ ಸಮಯಪ್ರಜ್ಞೆ ಪ್ರದರ್ಶಿಸಿದರು ಮತ್ತು ತಕ್ಷಣವೇ ಕಾರ್ಯಪ್ರವೃತ್ತರಾಗಿ ಆತನನ್ನು ತಡೆದರು. ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಯಿಂದ ಕೇವಲ … Continued

ವೀಡಿಯೊ..| ಅರಳು ಹುರಿದಂತೆ ಪಟಪಟನೆ ಕನ್ನಡದಲ್ಲಿ ಮಾತನಾಡುವ ಜರ್ಮನಿ ಯುವತಿ…!

ಜರ್ಮನ್ ಮಹಿಳೆಯೊಬ್ಬರು ಕನ್ನಡ ಮಾತನಾಡುವ ವೀಡಿಯೊ ಎಕ್ಸ್‌ನಲ್ಲಿ ವೈರಲ್ ಆಗಿದೆ. “ಬೆಂಗಳೂರು ಕನ್ನಡಿಗರಿಗೆ ಸೇರಿದ್ದು” ಎಂಬ ಚರ್ಚೆಯ ನಡುವೆ ಈ ವೀಡಿಯೊ ಹೊರಹೊಮ್ಮಿದೆ. ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಉಳಿಯುವ ಯಾರಾದರೂ ಸ್ಥಳೀಯ ಭಾಷೆಯನ್ನು ತಿಳಿದುಕೊಳ್ಳಬೇಕು ಎಂದು ಕೆಲವರು ಹೇಳುತ್ತಾರೆ. ಈ ಚರ್ಚೆಯ ಮಧ್ಯೆ, ಜರ್ಮನ್ ಪ್ರಜೆ ಮತ್ತು ಭಾಷಾ ಉತ್ಸಾಹಿ ಜೆನ್ನಿಫರ್ ಅವರ ಯೂ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಗ್ಯಾಂಗ್ ವಿರುದ್ಧ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ ಸಲ್ಲಿಸಿದ್ದಾರೆ. ಈ ದೋಷಾರೋಪಣಾ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ನಮೂದಿಸಲಾಗಿದೆ. ಒಟ್ಟು 3,991 ಪುಟ ಇರುವ ಈ ಆರೋಪ ಪಟ್ಟಿಯಲ್ಲಿ ಒಟ್ಟು 7 ಸಂಪುಟಗಳಿವೆ. 10 … Continued

ಖರ್ಗೆ ಕುಟುಂಬದ ಟ್ರಸ್ಟ್​ಗೆ ಸಿಎ ನಿವೇಶನ ಹಂಚಿಕೆ ಪ್ರಕರಣ ; ಸರ್ಕಾರದಿಂದ ವಿವರಣೆ ಕೇಳಿದ ರಾಜ್ಯಪಾಲ

ಬೆಂಗಳೂರು : ಸಹೋದರ ರಾಹುಲ್ ಖರ್ಗೆ ಅವರ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ತಮ್ಮ ಪ್ರಭಾವ ಬಳಸಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೆಐಎಡಿಬಿಯಿಂದ ಸಿಎ ನಿವೇಶನ ಮಂಜೂರು ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ … Continued

ಕೆಪಿಎಸ್​​ಸಿ ಪರೀಕ್ಷೆಯಲ್ಲಿ ಗೊಂದಲ : ಮರುಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆಯಲ್ಲಿನ ಎಡವಟ್ಟುಗಳ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು … Continued