ಬೆಂಗಳೂರು: ಬಾಡಿಗೆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಯುವತಿಯ ನಗ್ನ ಶವ ಪತ್ತೆ

ಬೆಂಗಳೂರು: ಸಿಲಿಕಾನ್ ಸಿಟಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ 34 ವರ್ಷದ ಯುವತಿಯೊಬ್ಬಳು ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಜಾರ್ಖಂಡ್‌ನ ಧನ್‌ಬಾದ್ ಮೂಲದ ಪೂಜಾ ದತ್ತಾ ಎಂದು ಗುರುತಿಸಲಾಗಿದೆ. ಪೂಜಾ ದತ್ತಾ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಇವರು ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಒಬ್ಬರೇ … Continued

ಬೆಂಗಳೂರು : ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣ ; ಕಾಲೇಜಿನ ಮೂವರು ಅಮಾನತು

ಬೆಂಗಳೂರು: ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪತ್ರ ಬರೆದಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದರೂ ಈ ಘಟನೆ … Continued

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ ; ಆರೋಪ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂಬ ಆರೋಪಿತ ಪ್ರಕರಣದ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ … Continued

ಬೆಂಗಳೂರು : ‘ಫಾರಿನ್‌ ಸ್ಟೈಲ್‌ ಪ್ರಪೋಸಲ್’ ನೆಪದಲ್ಲಿ ಪ್ರಿಯಕರನ ಕೈಕಾಲು ಕಟ್ಟಿ ಹಾಕಿ ಜೀವಂತ ಸುಟ್ಟು ಕೊಂದ ಯುವತಿ !

ಬೆಂಗಳೂರು: ಪ್ರೀತಿಯಲ್ಲಿ ಉಂಟಾದ ವೈಮನಸ್ಸು ಮತ್ತು ನಿರ್ಲಕ್ಷ್ಯದ ಸೇಡು ನಗರದಲ್ಲಿ ಘೋರ ಹತ್ಯೆಯೊಂದಕ್ಕೆ ಸಾಕ್ಷಿಯಾಗಿದೆ. ತನ್ನನ್ನು ನಿರ್ಲಕ್ಷಿಸುತ್ತಿದ್ದಾನೆ ಎಂಬ ಕೋಪದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಹೊಸ ಮಾದರಿಯ ‘ಪ್ರಪೋಸ್’ ಮಾಡುವ ಆಮಿಷವೊಡ್ಡಿ, ಆತನನ್ನು ಕುರ್ಚಿಗೆ ಕಟ್ಟಿ ಹಾಕಿ ಜೀವಂತವಾಗಿ ಸುಟ್ಟು ಕೊಂದಿರುವ ಅಮಾನವೀಯ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಕಿರಣ (27) … Continued

4 ಗಂಟೆ ಆಕಾಶದಲ್ಲೇ ಸುತ್ತಾಡಿದ ಹೈದರಾಬಾದ್-‌ ಹುಬ್ಬಳ್ಳಿ ವಿಮಾನ ; ಪ್ರಯಾಣಿಕರ ಆಕ್ರಂದನ, ಪ್ರಾರ್ಥನೆ….

ಬೆಂಗಳೂರು: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ವಿಮಾನವೊಂದು ಹವಾಮಾನ ವೈಪರೀತ್ಯಕ್ಕೆ ಸಿಲುಕಿ, ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುದೀರ್ಘ ಹಾರಾಟ ನಡೆಸಿದ ಆತಂಕಕಾರಿ ಘಟನೆ ನಡೆದಿದೆ. ವಿಮಾನವು ತೀವ್ರವಾಗಿ ಅಲುಗಾಡತೊಡಗಿದಾಗ ಪ್ರಯಾಣಿಕರು ಪ್ರಾಣಭಯದಿಂದ ಕೂಗಿಕೊಂಡ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಫ್ಲೈ-91 (Fly91) ಸಂಸ್ಥೆಗೆ ಸೇರಿದ IC3401 ವಿಮಾನವು ಭಾನುವಾರ (ಏ.19) ಮಧ್ಯಾಹ್ನ 3 … Continued

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಕೊಂದ ಮಗ !

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಇಎಂಎಲ್ (BEML) ಲೇಔಟ್‌ನಲ್ಲಿ ಭಾನುವಾರ ಮಧ್ಯಾಹ್ನ ಈ ಭೀಕರ ಘಟನೆ ಸಂಭವಿಸಿದೆ. 72 ವರ್ಷದ ಸಾವಿತ್ರಮ್ಮ ಎಂಬುವವರೇ ಮಗನಿಂದಲೇ ಕೊಲೆಯಾದವರು ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ ಅವರ ಮಗ ವೆಂಕಟೇಶ (42) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಮೃತ ಸಾವಿತ್ರಮ್ಮ ಅವರು ಕಳೆದ 4-5 ವರ್ಷಗಳಿಂದ ಪಾರ್ಶ್ವವಾಯು (Paralysis) ಪೀಡಿತರಾಗಿ ಸಂಪೂರ್ಣವಾಗಿ … Continued

ಬೆಂಗಳೂರು : ಆರ್‌ಬಿಐನಲ್ಲೇ ₹2000 ನಕಲಿ ನೋಟು ಬದಲಿಸಲು ಯತ್ನ; ವ್ಯಕ್ತಿಯ ಬಂಧನ

ಬೆಂಗಳೂರು: ಭಾರತೀಯ ರಿಸರ್ವ ಬ್ಯಾಂಕ್ (RBI) ಕಚೇರಿಯಲ್ಲೇ ನಕಲಿ ನೋಟುಗಳನ್ನು ಅಸಲಿ ನೋಟುಗಳನ್ನಾಗಿ ಬದಲಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ನಾಗಶೆಟ್ಟಿಹಳ್ಳಿಯ ಎಸ್‌.ವಿ. ರಮೇಶ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಆರ್‌ಬಿಐ ಶಾಖೆಗೆ ₹2,000 ಮುಖಬೆಲೆಯ 375 ನೋಟುಗಳನ್ನು ಹಿಡಿದು ಬಂದಿದ್ದ. ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳುವ ನೆಪದಲ್ಲಿ ಈತ … Continued

ವಿಡಿಯೋ | ಬೆಂಗಳೂರು : ಬೆಕ್ಕು ಗರ್ಭಿಣಿಯಾದ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ರಂಪಾಟ ;’ವಿಚಿತ್ರ’ ಜಗಳಕ್ಕೆ ಪೊಲೀಸರೇ ಸುಸ್ತು..!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನೆರೆಹೊರೆಯವರ ನಡುವೆ ಜಗಳವಾಗುವುದು ಸಾಮಾನ್ಯ. ಆದರೆ, ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಕಳೆದ ವಾರ ನಡೆದ ಘಟನೆ ಮಾತ್ರ ತೀರಾ ವಿಭಿನ್ನವಾಗಿದೆ. ಬೆಕ್ಕಿನ ಮರಿಗಳ ವಿಚಾರವಾಗಿ ಆರಂಭವಾದ ಜಗಳವೊಂದು ಬೀದಿ ರಂಪಾಟಕ್ಕೆ ಕಾರಣವಾಗಿ, ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಾದ ಪ್ರಸಂಗ ನಡೆದಿದೆ ಎಂದು ವರದಿಯಾಗಿದೆ. ಈ ವಿವಾದದ ಮೂಲವೇ ವಿಚಿತ್ರವಾಗಿತ್ತು. ಮಹಿಳೆಯೊಬ್ಬರು ತನ್ನ … Continued

ವಿಡಿಯೋ | ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ಗಳಗಳನೆ ಅತ್ತ ನಟಿ ರಮ್ಯಾ..

ಬೆಂಗಳೂರು: ನಗರದ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದ ಕಗ್ಗದಾಸಪುರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳನ್ನು ಚೀಲದಲ್ಲಿ ಕಟ್ಟಿ ಅಮಾನವೀಯಾಗಿ ಸಾಗಿಸಿದ್ದ ಘಟನೆ (Brutality on street dogs) ನಡೆದಿತ್ತು. ಈ ಕ್ರಮವನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಣಿಪ್ರಿಯರಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆದಿದ್ದು, ಈ ವೇಳೆ ಶ್ವಾನಗಳ ಮೇಲೆ … Continued

ವಿಜಯಪುರ: ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಮೂವರು ಸಾವು

ವಿಜಯಪುರ : ಪ್ರವಾಸಕ್ಕೆ ಬಂದಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ (Bhutnal Lake) ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಆರ್.ಟಿ ನಗರದಿಂದ 14 ಜನ ಕುಟುಂಬಸ್ಥರು ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿದ್ದರು. ಈ ವೇಳೆ ಭೂತನಾಳ ಕೆರೆ ವೀಕ್ಷಣೆಗೆ ಹೋಗಿದ್ದರು. ಬಾಲಕನೊಬ್ಬ ನೀರಿಗೆ ಇಳಿದು ಆಟವಾಡುವಾಗ ಮುಳುಗಿದ್ದಾನೆ. … Continued