ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ನಿಧನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ನಿಧನರಾಗಿದ್ದಾರೆ ಎಂದು … Continued

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಉದಯನಿಧಿ ಸ್ಟಾಲಿನ್‌ ಗೆ ಜಾಮೀನು

ಬೆಂಗಳೂರು : ಸನಾತನ ಧರ್ಮ ಕುರಿತು ವಿವಾದಾತಕ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಸಾಮಾಜಿಕ ಕಾರ್ಯಕರ್ತ ಪರಮೇಶ್ವರ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ … Continued

ವೀಡಿಯೊ…| ಬೆಂಗಳೂರು : ಅಮೆಜಾನ್‌ನಲ್ಲಿ ಆರ್ಡರ್ ಮಾಡಿದ್ದು ಎಕ್ಸ್‌ಬಾಕ್ಸ್ ; ಆದ್ರೆ ಪಾರ್ಸೆಲ್ ನಲ್ಲಿ ಬಂದಿದ್ದು ನಾಗರ ಹಾವು…!

ಬೆಂಗಳೂರು : ಬೆಂಗಳೂರಿನ ಮಹಿಳೆಯೊಬ್ಬರು ತಮ್ಮ ಅಮೆಜಾನ್ ಪ್ಯಾಕೇಜ್‌ನಲ್ಲಿ ಜೀವಂತ ನಾಗರಹಾವು ಕಂಡು ಆಘಾತಕ್ಕೊಳಗಾಗಿದ್ದಾರೆ. ಮಹಾನಗರದ ಸರ್ಜಾಪುರ ರಸ್ತೆಯಲ್ಲಿ ವಾಸಿಸುವ ಮಹಿಳೆ, ಆನ್‌ಲೈನ್ ಚಿಲ್ಲರೆ ವ್ಯಾಪಾರಿಗಳಿಂದ ಎಕ್ಸ್‌ಬಾಕ್ಸ್ ನಿಯಂತ್ರಕವನ್ನು ಆರ್ಡರ್ ಮಾಡಿದ್ದರು. ಆದರೆ ಪಾರ್ಸೆಲ್ ಬಂದ ನಂತರ ಅದನ್ನು ತೆರೆದಾಗ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ಆಘಾತಕರ ಅಚ್ಚರಿಯನ್ನು ಕಂಡು ಗಾಬರಿಯಾದರು. ಅದರೊಳಗೆ ವಿಷಪೂರಿತ ನಾಗರಹಾವು ಇತ್ತು. … Continued

ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ಬೆಂಗಳೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಚಿತ್ರನಟ ದರ್ಶನ್‌ ಸ್ನೇಹಿತೆ ಹಾಗೂ ಕೊಲೆ ಪ್ರಕರಣ ಮೊದಲ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಗೆಳತಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಹೀಗಾಗಿ ಇಂದು ಮಂಗಳವಾರ … Continued

ಪೋಕ್ಸೋ ಪ್ರಕರಣ: ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಬೆಂಗಳೂರು :ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ದಾಖಲಾಗಿ ಮೂರು ತಿಂಗಳಾಗಿದ್ದು, ಅವರು ಎರಡನೇ ಬಾರಿಗೆ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಡಿವೈಎಸ್‌ಪಿ ತನಿಖಾಧಿಕಾರಿಯಿಂದ ಯಡಿಯೂರಪ್ಪ ವಿಚಾರಣೆ ನಡೆದಿದೆ. ಸಿಐಡಿ ಅಧಿಕಾರಿಗಳು ಈ ಮೊದಲೇ ಯಡಿಯೂರಪ್ಪ ಅವರ … Continued

ಕೊಲೆ ಪ್ರಕರಣ: ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿ ಬಂಧನ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿಯನ್ನ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ರಾಜು ಅಲಿಯಾಸ್‌ ಧನರಾಜ ಎಂಬಾತನೇ ಬಂಧಿತ ಆರೋಪಿ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಈತ ತಲೆಮರೆಸಿಕೊಂಡಿದ್ದ. ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ, ಪವಿತ್ರ ಗೌಡ ಸೇರಿ ಆರೋಪಿಗಳಿಗೆ ಮತ್ತೆ ಪೊಲೀಸ್‌ ಕಸ್ಟಡಿ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 10 ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶನಿವಾರ ಮತ್ತೆ ಐದು ದಿನಗಳ ಕಾಲ (ಜೂನ್‌ 20ರವರೆಗೆ) ಪೊಲೀಸ್‌ ಕಸ್ಟಡಿಗೆ ನೀಡಿದೆ. ದರ್ಶನ್‌ ಸೇರಿ ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪೊಲೀಸರಿಗೆ ಶರಣಾದ ಮತ್ತಿಬ್ಬರು ಆರೋಪಿಗಳು..

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾದಂತಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಶರಣಾಗಿದ್ದು, ತಕ್ಷಣವೇ ಇಬ್ಬರನ್ನೂ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ ಅಲಿಯಾಸ್‌ ಅನು, ಜಗದೀಶ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ಈ … Continued

ದರ್ಶನ್ ಪ್ರಕರಣ : ತೀವ್ರ ಆಘಾತ-ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು ಎಂದ ಮರಣೋತ್ತರ ಪರೀಕ್ಷೆ ವರದಿ

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ ಮಾಡಿದ್ದಾರೆ ಎಂದು ಆರೋಪಿಸಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ಆಘಾತ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ವರದಿ ತಿಳಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಶವಪರೀಕ್ಷೆಯಲ್ಲಿ ರೇಣುಕಾ ಸ್ವಾಮಿ ಅವರ ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ. ರೇಣುಕಾಸ್ವಾಮಿ ಅವರನ್ನು ನಟ ದರ್ಶನ್‌ … Continued

ನಟ ವಿನೋದರಾಜ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದರಾಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಕರುಳಿನ ಸಮಸ್ಯೆಯಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ವಿನೋದರಾಜ ಅವರು ಹೃದಯದ ಆಪರೇಷನ್‌ಗೆ ಒಳಗಾಗಿದ್ದರು. ಈ ವೇಳೆ ಅವರ ಸ್ಟಂಟ್‌ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್‌ ಪರಿಣಾಮದಿಂದ ಅವರಿಗೆ ಕರುಳಿನ ಸಮಸ್ಯೆ ಉಂಟಾಗಿದೆ … Continued