ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಅಧಿಕಾರ ಸ್ವೀಕರಿಸಿದ 3 ವಾರಗಳ ಬಳಿಕ ಇದೀಗ ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ. ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ಅವರು ತಾತ್ಕಾಲಿಕವಾಗಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ … Continued

ಬೆಂಗಳೂರು : ಬೆಚ್ಚಿಬೀಳಿಸಿದ ಘಟನೆ ; ಪ್ರಿಯಕರನ ಜೊತೆ ಸೇರಿ ತಂದೆ-ತಾಯಿ, ತಂಗಿಯನ್ನೇ ಇರಿದು ಕೊಂದಳಾ ಯುವತಿ…!?

ಬೆಂಗಳೂರು :  ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತರನ್ನು ಸೋಮಸುಂದರ (55), … Continued

ವಿಶ್ವಮಟ್ಟದಲ್ಲಿ ಬೆಂಗಳೂರಿಗೆ ಮತ್ತೊಂದು ಗರಿ: ‘ವಿಶ್ವದ 20 ಅತ್ಯುತ್ತಮ ಆಹಾರ ನಗರಗಳ’ ಪಟ್ಟಿಯಲ್ಲಿ 13ನೇ ಸ್ಥಾನ ; 20 ನಗರಗಳ ಪಟ್ಟಿ…

ಬೆಂಗಳೂರು: ಸ್ಟಾರ್ಟ್‌ಅಪ್‌ಗಳು ಮತ್ತು ಬೃಹತ್ ಟೆಕ್ ಪಾರ್ಕ್‌ಗಳಿಗೆ ಹೆಸರುವಾಸಿಯಾಗಿರುವ ನಮ್ಮ ಬೆಂಗಳೂರು, ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹತ್ವದ ಸ್ಥಾನ ಪಡೆದಿದೆ. ಕೇವಲ ತಂತ್ರಜ್ಞಾನ ಮಾತ್ರವಲ್ಲದೆ, ತನ್ನ ವೈವಿಧ್ಯಮಯ ಮತ್ತು ವಿಶಿಷ್ಟ ಆಹಾರ ಸಂಸ್ಕೃತಿಯ ಮೂಲಕವೂ ಬೆಂಗಳೂರು ಜಗತ್ತಿನ ಗಮನ ಸೆಳೆದಿದೆ. ಪ್ರಸಿದ್ಧ ಅಂತಾರಾಷ್ಟ್ರೀಯ ನಿಯತಕಾಲಿಕೆ ‘ಟೈಮ್ ಔಟ್’ (Time Out) ಬಿಡುಗಡೆ ಮಾಡಿರುವ ‘ವಿಶ್ವದ … Continued

ಫೋರ್ಬ್ಸ್ ‘ಏಷ್ಯಾ ಅಂಡರ್ 30’ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ವರ್ಷದ ಹುಡುಗಿ

ಬೆಂಗಳೂರು: ಬೆಂಗಳೂರಿನ 17 ವರ್ಷದ ವಿದ್ಯಾರ್ಥಿನಿ ದಿವಾ ಉತ್ಕರ್ಷ ಅವರು ಪ್ರತಿಷ್ಠಿತ ಫೋರ್ಬ್ಸ್ ಏಷ್ಯಾ ಅಂಡರ್ 30’ (2025) ಪಟ್ಟಿಯ ‘ಸಾಮಾಜಿಕ ಪ್ರಭಾವ’ (Social Impact) ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ.  ಟೈಪ್-1 ಮಧುಮೇಹದಿಂದ (Type 1 Diabetes) ಬಳಲುತ್ತಿರುವ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ನೆರವಾಗಲು ಅವರು ನಡೆಸುತ್ತಿರುವ ಅಪ್ರತಿಮ ಸೇವೆಗಾಗಿ ಈ ಜಾಗತಿಕ ಮನ್ನಣೆ … Continued

ವಿಡಿಯೋ | ಬೆಂಗಳೂರು : ರಾಜ್ಯಪಾಲರ ಸಂಚಾರಕ್ಕಾಗಿ ಸಂಚಾರ ಸ್ಥಗಿತ ; ಗರ್ಭಿಣಿ ಪತ್ನಿ ಚಿಕಿತ್ಸೆಗಾಗಿ ರಸ್ತೆ ಮಧ್ಯೆ ಕುಳಿತು ಪ್ರತಿಭಟಿಸಿದ ಪತಿ !

ಬೆಂಗಳೂರು: ನಗರದ ಸಂಚಾರ ದಟ್ಟಣೆಯ ನಡುವೆ ವಿಐಪಿ (VIP) ಸಂಸ್ಕೃತಿಯ ಅತಿರೇಕ ಮತ್ತೊಮ್ಮೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯಪಾಲರ ಬೆಂಗಾವಲು ಪಡೆಯ (ಕಾನ್ವಾಯ್) ಸುಗಮ ಸಂಚಾರಕ್ಕಾಗಿ ಪೊಲೀಸರು ಬರೋಬ್ಬರಿ 30 ನಿಮಿಷಗಳ ಕಾಲ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ, ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದ ಗರ್ಭಿಣಿ ಪತ್ನಿಯ ತುರ್ತು ವೈದ್ಯಕೀಯ ತಪಾಸಣೆಗಾಗಿ ಆಕೆಯ ಪತಿ … Continued

ಬೆಂಗಳೂರು ಶಾಲೆಯಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ಸ್ಥಳೀಯ ಶಾಲಾ ಕಟ್ಟಡವೊಂದರಲ್ಲಿ ಇಂದು, ಶನಿವಾರ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಇದರಿಂದಾಗಿ ‘ಕೌಸಲ್ಯ ಶಾಲೆ’ಯ (Kousalya School) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಕಟ್ಟಡದಿಂದ ದಟ್ಟವಾದ ಹೊಗೆ ಆಕಾಶಕ್ಕೆ ಮುಟ್ಟುವಂತೆ ಹರಡಿದೆ. ಶನಿವಾರ ಬೆಳಿಗ್ಗೆ 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ … Continued

ಅತಿದೊಡ್ಡ ಸೈಬರ್‌ ವಂಚನೆ : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಶಿಕ್ಷಕಿಗೆ ‘ಡಿಜಿಟಲ್ ಅರೆಸ್ಟ್’; 24 ಕೋಟಿ ರೂ. ಲೂಟಿ..!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೂಡ್ಡದಾದ ‘ಡಿಜಿಟಲ್ ಅರೆಸ್ಟ್’ ವಂಚನೆ ಜಾಲವನ್ನು ರಾಜ್ಯದ ಸೈಬರ್ ಕಮಾಂಡ್ ಭೇದಿಸಿದ್ದು, ಸಿಬಿಐ (CBI) ಅಧಿಕಾರಿಗಳ ಸೋಗಿನಲ್ಲಿ ಬಂದು ನಿವೃತ್ತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ವಂಚನೆಗೊಳಗಾಗಿದ್ದ ಹಣದಲ್ಲಿ ಸುಮಾರು 5.46 ಕೋಟಿ … Continued

ಬೆಂಗಳೂರು : ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತದಿಂದ ಆಟಗಾರ ನಿಧನ

ಬೆಂಗಳೂರು : ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ ಅವರು ಭಾನುವಾರ ಕ್ರಿಕೆಟ್ ಪಂದ್ಯವನ್ನಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. 2014-15ರ ಋತುವಿನಲ್ಲಿ ರಣಜಿ ಟ್ರೋಫಿ ಮುಕುಟ ಮುಡಿಗೇರಿಸಿಕೊಂಡ ಕರ್ನಾಟಕ ತಂಡದ ಸದಸ್ಯರಾಗಿದ್ದ ಅಕ್ಷಯ ಅವರು, ಈ ದುರದೃಷ್ಟಕರ ಘಟನೆ ನಡೆದಾಗ ಕೆಎಸ್‌ಸಿಎ (KSCA) ಮೂರನೇ ಡಿವಿಷನ್ … Continued

ಬೆಂಗಳೂರಲ್ಲಿ ಭಾರಿ ವಂಚನೆ: 3 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಖದೀಮರು ಎಸ್ಕೇಪ್

ಬೆಂಗಳೂರು : ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿನಡೆದ  ಸಿನಿಮೀಯ ಶೈಲಿಯ ಹೈ-ಪ್ರೊಫೈಲ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಖದೀಮರು ಪಕ್ಕಾ ಪ್ಲಾನ್ ಮಾಡಿ ಬರೋಬ್ಬರಿ 1.85 ಕೆಜಿ ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ರಸಿದ್ಧ ನಾಗರತ್‌ ಪೇಟೆಯ “ಮೆಹ್ತಾ ಜ್ಯುವೆಲ್ಲರಿ” (Mehta Jewellery) ಮಾಲೀಕರು ಈ ಬೃಹತ್ ವಂಚನೆಗೆ ಒಳಗಾದವರು ಎನ್ನಲಾಗಿದೆ. ಉದ್ಯಮಿ ನೀಡಿರುವ … Continued

ಬೆಂಗಳೂರು : 35 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ; 8 ಆರೋಪಿಗಳ ಬಂಧನ

ಬೆಂಗಳೂರು : ಇತ್ತೀಚಿನ ದಿನಗಳಲ್ಲೇ ಬೆಂಗಳೂರಿನಲ್ಲಿ ಅತ್ಯಂತ ಬೃಹತ್ ಎನ್ನಲಾದ ಅಂತರರಾಜ್ಯ ಮಾದಕ ವಸ್ತು ಜಾಲವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್‌ನ ಉತ್ತರ ವಿಭಾಗದ ಪೊಲೀಸರು ನಡೆಸಿದ ಈ ಮಹತ್ವದ ಕಾರ್ಯಾಚರಣೆಯಲ್ಲಿ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 35 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ಎರಡು ಕಾರುಗಳನ್ನು ಜಪ್ತಿ … Continued