1.47 ಕೋಟಿ ರೂ. ಮೌಲ್ಯದ ಚಿನ್ನ ಲೇಪಿತ ಆಭರಣಗಳ ವಶ

ಬೆಂಗಳೂರು : ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1.47 ಕೋಟಿ ರೂ. ಮೌಲ್ಯದ 8.30 ಕಿಗ್ರಾಂ ತೂಕದ ಚಿನ್ನ ಲೇಪಿತ ಆಭರಣಗಳನ್ನು ಹಲಸೂರು ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿ.ವಿ.ರಾಮನ್‍ನಗರ ವಿಧಾನಸಭಾ ಕ್ಷೇತ್ರದ ಹಲಸೂರು ಲೇಕ್ ಚೆಕ್‍ಪೋಸ್ಟ್‌ನಲ್ಲಿ ಸೋಮವಾರ ಸಂಜೆ ವಾಹನ ತಪಾಸಣೆ ಮಾಡುತ್ತಿದ್ದಾಗ ಈ ಅದರಲ್ಲಿದ್ದ ಕಬ್ಬಿಣದ ಟ್ರಂಕ್‍ನಲ್ಲಿ ಚಿನ್ನದ ಲೇಪಿತ ಆಭರಣಗಳು ಪತ್ತೆಯಾಗಿವೆ. ಈ ಆಭರಣಗಳಿಗೆ … Continued

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ದೊಡ್ಮನೆ ಗಣೇಶ ಹೆಗಡೆ ಅವರ ಮೊಮ್ಮಗ, ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವರಾದ ಭಗವಂತ ಖೂಬಾ, … Continued

ವೀಕೆಂಡ್ ಟ್ರಿಪ್ಪಿಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ವೀಕೆಂಡ್‌ನಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ರಾಧಿಕಾ(19), ಪೂಜಾ (20) ಹಾಗೂ ಇಮ್ರಾನ್ ಖಾನ್(20) ಎಂದು ಗುರುತಿಸಲಾಗಿದೆ. ವೀಕೆಂಡ್ ಎಂದು ಬೆಂಗಳೂರಿನ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ವಿಕಾಸ್, ಚನ್ನರಾ, ಇಮ್ರಾನ್ ಖಾನ್ ಎಂಬ ಆರು ವಿದ್ಯಾರ್ಥಿಗಳು … Continued

ಶಾಸಕ ಮಾಡಾಳು ವಿರೂಪಾಕ್ಷಪ್ಪ ಐದು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ : ನ್ಯಾಯಾಲಯ ಆದೇಶ

ಬೆಂಗಳೂರು : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಲೋಕಾಯುಕ್ತ ದಾಳಿ ವೇಳೆ ಪುತ್ರ ಪ್ರಶಾಂತ್ ಮಾಡಾಳು ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಹೈಕೋರ್ಟಿನಲ್ಲಿ ನಿರೀಕ್ಷಣಾ … Continued

ಹಿಂದುತ್ವದ ಕುರಿತು ಟ್ವೀಟ್‌ ಪ್ರಕರಣ: ನಟ ಚೇತನಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಇಂದು ಮಂಗಳವಾರ ಬಂಧಿತರಾಗಿರುವ ನಟ ಚೇತನ್‌ ಅವರನ್ನು ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಚೇತನ್‌ ಅವರ ಜಾಮೀನು ಅರ್ಜಿಯನ್ನು 32ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಜೆ ಲತಾ ಅವರು ವಿಚಾರಣೆ ನಡೆಸಿದ್ದು, ವಿಚಾರಣೆಯನ್ನು ಮಾರ್ಚ್‌ 23ಕ್ಕೆ ಮುಂದೂಡಿದ್ದಾರೆ. ಬೆಂಗಳೂರಿನ … Continued

ಕೆ.ಆರ್.ಪುರಂ-ವೈಟ್ ಫೀಲ್ಡ್ ಮೆಟ್ರೋ ಮಾರ್ಗ: ಮಾರ್ಚ್‌ 25ರಂದು ಪ್ರಧಾನಿ ಮೋದಿಯಿಂದ ಉದ್ಘಾಟನೆ

ಬೆಂಗಳೂರು : ಬೆಂಗಳೂರಿನ ಕೆ.ಆರ್. ಪುರಂ-ವೈಟ್‌ಫೀಲ್ಡ್ ಮಧ್ಯದ ಮೆಟ್ರೋದ ನೇರಳೆ ಮಾರ್ಗದ ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಉದ್ಘಾಟಿಸಲಿದ್ದಾರೆ. ನಮ್ಮ ಮೆಟ್ರೋದ 13.71 ಕಿಮೀ ಮಾರ್ಗವು ಒಂದು ತಾಸು ಇದ್ದ ಪ್ರಯಾಣದ ಅವಧಿಯನ್ನು ಸುಮಾರಿ 25 ನಿಮಿಷಗಳ ವರೆಗೆ ಕಡಿಮೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಯಾಣಿಕರು ವೈಟ್‌ಫೀಲ್ಡ್ ಮತ್ತು ಕೆಆರ್ ಪುರಂ … Continued

ಬೆಂಗಳೂರು: ಕರಗವನ್ನು ನಾಟಕ ಎಂದಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ದೇವಸ್ಥಾನಕ್ಕೆ ತೆರಳಿ ಕ್ಷಮೆಯಾಚನೆ

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಹೇಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಈಗ ಧರ್ಮರಾಯಸ್ವಾಮಿ ದೇವಸ್ಥಾನದ ದೇವರ ಸನ್ನಿಧಾನದಲ್ಲಿ ಈ ಬಗ್ಗೆ ಕ್ಷಮೆಯಾಚನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಐತಿಹಾಸಿಕ ಕರಗವನ್ನು ನಾಟಕ ಎಂದು ಕರೆದಿದ್ದರು. ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಬಳಿಕ … Continued

ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಅನಾಹುತ: ಮಲಗಿದ್ದಲ್ಲೇ ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬೆಂಗಳೂರಿನಲ್ಲಿ ಶುಕ್ರವಾರ ಮುಂಜಾನೆ ಬಿಎಂಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಬಸ್‌ನೊಳಗೆ ಮಲಗಿದ್ದ ಕಂಡಕ್ಟರ್ ಸುಟ್ಟು ಕರಕಲಾದ ಘಟನೆ ನಡೆದ ವರದಿಯಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಬೆಂಗಳೂರಿನ ಲಿಂಗಧೀರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ ದಲ್ಲಿ ಬಸ್‌ ಹಾಲ್ಟ್‌ ಮಾಡಿತ್ತು. ಕಂಡಕ್ಟರ್‌ ಬಸ್ಸಿನ ಸೀಟ್‍ನಲ್ಲಿಯೇ ಮಲಗುವುದಾಗಿ ಹೇಳಿ ಬಸ್‌ನೊಳಗೆ … Continued

ಬೆಂಗಳೂರು : ಮನೆಯಲ್ಲಿ ಸಿಲಿಂಡರ್ ಸ್ಪೋಟ, 10 ಮಂದಿಗೆ ಗಾಯ

ಬೆಂಗಳೂರು: ಮನೆಯೊಂದರ ಸಿಲಿಂಡರಿನಿಂದ ಅನಿಲ ಸೋರಿಕೆಯಾಗಿ ಅದು ಸ್ಫೋಟಗೊಂಡು 10 ಮಂದಿ ಗಾಯಗೊಂಡ ಘಟನೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು, ಶುಕ್ರವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಅಜ್ಮಲ್ (46), ನಾಜೀಂ (42), ಅಮೀನ್‌ಜಾನ್ (52), ರೇಷ್ಮಾಭಾನು (48) ರಿಯಾನ್‌(14), ಅಜ್ವಾನ್ (12), ಫಯಾಜ್ (10), ಶಬನಾಜ್‌ (18), ನಾಸೀಂ (40), ಸಲ್ಮಾ (33) … Continued

ಬಿಜೆಪಿ ಶಾಸಕರ ಪುತ್ರ ಪ್ರಶಾಂತ​​ ಮಾಡಾಳಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಗುರುವಾರ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ ಮಾಡಾಳ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಹಾಜರುಪಡಿಸಿದ್ದರು. … Continued