40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ

ಬೆಂಗಳೂರು: ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ (BWSSB) ಮುಖ್ಯ ಅಕೌಂಟೆಂಟ್ ಪ್ರಶಾಂತ ಮಾಡಾಳ ಪ್ರಶಾಂತ ಮಾಡಾಳ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಎಂದು … Continued

ಪತ್ನಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಬೆಂಗಳೂರು : ಕ್ಯಾನ್ಸರ್‌ಗೆ ಹೆದರಿದ ಗಂಡ ತನ್ನ ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ನಂತರ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದ್ದು, ನಾಗೇಂದ್ರ ಎಂಬಾತ ಈ ಕೃತ್ಯ ಎಸಗಿದ್ದಾನೆ. ಪತ್ನಿ ವಿಜಯ (28), ಮಕ್ಕಳಾದ ನಿಷಾ (7), ದೀಕ್ಷಾ (5) ಅವರಿಗೆ ವಿಷವುಣಿಸಿದ್ದಾನೆ. ಅವರು … Continued

ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ (H.D. Deve gowda) ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಮಂಗಳವಾರ ಬೆಳಿಗ್ಗೆ 10:30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವು ಹಾಗೂ ಊತಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ದೇವೇಗೌಡರು ಇಂದು,ಮಂಗಳವಾರಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ … Continued

1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲ್ಲಿಸಿದ್ದ ಮಗ: ಪುತ್ರ ಸೇರಿ ಮೂವರನ್ನು ಬಂಧಿಸಿದ ಪೊಲೀಸರು

ಬೆಂಗಳೂರು:ಕೊಲೆ ಪ್ರಕರಣವೊಂದರಲ್ಲಿ ತಂದೆಯ ಕೊಲೆ ಮಾಡಲು ಒಂದು ಕೋಟಿ ರೂ. ಸುಪಾರಿ ನೀಡಿದ್ದ ಮಗ ಸೇರಿದಂತೆ ಮೂವರು ಆರೋಪಿಗಳನ್ನು ಮಾರತ್‍ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ನೀಡಿದ್ದ ಪುತ್ರ ಮಣಿಕಂಠ ಹಾಗೂ ಸುಪಾರಿ ಪಡೆದಿದ್ದ ಶಿವಕುಮಾರ ಹಾಗೂ ನವೀನ ಬಂಧಿತ ಆರೋಪಿಗಳು.ಅಪಾರ್ಟಮೆಂಟ್‍ನ ಪಾರ್ಕಿಂಗ್ ಲಾಟ್‍ನಲ್ಲಿ ಫೆಬ್ರವರಿ 13ರಂದು ನಾರಾಯಣಸ್ವಾಮಿ(70) ಎಂಬವರ ಕೊಲೆ ಆಗಿತ್ತು. ಈ ಪ್ರಕರಣದ … Continued

ಆಶಾ ಕಾರ್ಯಕರ್ತರಿಗೆ ವಿದೇಶಿ ಹಣ ಹಂಚಿದ ಶಾಸಕ ಜಮೀರ್: ಚರ್ಚೆಗೆ ಗ್ರಾಸ

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಇದೀಗ ಬೆಂಗಳೂರಿ ಗೌರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಶಾ ಕಾರ್ಯಕರ್ತರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವಿದೇಶಿ ನೋಟುಗಳನ್ನ ಹಂಚಿದ್ದಾರೆ ಎಂಬ ವಿಷಯ ಭಾರೀ ಸುದ್ದಿಯಾಗಿದೆ. ಪಾದರಾಯನಪುರದ ವಾರ್ಡ್ 135, ಜೆಜೆಆರ್ ನಗರದ ವಾರ್ಡ್ 136 ಹಾಗೂ … Continued

ಬೆಂಗಳೂರು : ಲಿಫ್ಟ್ ಗುಂಡಿಗೆ ಬಿದ್ದು 6 ವರ್ಷದ ಮಗು ಸಾವು

ಬೆಂಗಳೂರು: ನಿರ್ಮಾಣ ಹಂತದ ಲಿಫ್ಟ್ ಗುಂಡಿಗೆ ಬಿದ್ದು ಆರು ವರ್ಷದ ಮಗು ಮೃತಪಟ್ಟ ಘಟನೆ ಕೆ.ಆರ್.ಮಾರ್ಕೆಟಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹೇಶ್ವರಿ (6) ಎಂಬ ಬಾಲಕಿ ಗುಂಡಿಗೆ ಬಿದ್ದು ಮೃತಪಟ್ಟವಳು ಎಂದು ಗುರುತಿಸಲಾಗಿದೆ. ಸುಮಾರು ಐದರಿಂದ ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡದ ಲಿಫ್ಟ್‌ ಅಳವಡಿಸಲು ಗುಂಡಿ ತೆರೆದು ಅದಕ್ಕೆ ನೀರು … Continued

ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಅನಂತ ನಾಗ್‌ ಗೈರು: ಕುತೂಹಲ ಮೂಡಿಸಿದ ನಟನ ನಡೆ

 ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ ನಾಗ್ ಅವರು ಇಂದು, ಬುಧವಾರ ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಕಾರಣಾಂತರದಿಂದ ಅವರು ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಅವರು ಆಗಮಿಸಲಿಲ್ಲ ಎಂದು ವರದಿಯಾಗಿದೆ. ನಟ ಅನಂತ ನಾಗ್ ಅವರು ಇಂದು, ಬುಧವಾರ ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಸಂಜೆ 4:30ಕ್ಕೆ … Continued

ಕೇಂದ್ರ-ರಾಜ್ಯ ಸರ್ಕಾರಗಳ 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (J.C.Madhuswamy) ಲೋಕಾರ್ಪಣೆ ಮಾಡಿದರು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, … Continued

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ (90 ವರ್ಷ) ಅವರು ಇಂದು, ಸೋಮವಾರ ಬೆಳಿಗ್ಗೆ ಬೆಳಗ್ಗೆ 6 ಗಂಟೆಗೆ ( ಫೆಬ್ರವರಿ 20 ) ನಿಧನರಾಗಿದ್ದಾರೆ. ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಗವಾನ್ ಅವರು ಇಬ್ಬರು ಪುತ್ರರು, ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಡಾ.ರಾಜಕುಮಾರ ಅವರ ಅನೇಕ ಸಿನಿಮಾಗಳಿಗೆ ನಿರ್ದೇಶನ ಮಾಡಿ ಹಲವು … Continued

ಬೆಂಗಳೂರು: ತೆಲುಗಿನ ಖ್ಯಾತ ನಟ, ರಾಜಕಾರಣಿ ನಂದಮೂರಿ ತಾರಕರತ್ನ ಇನ್ನಿಲ್ಲ

ಬೆಂಗಳೂರು: ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ (39) ನಿಧನರಾಗಿದ್ದಾರೆ. ಹೃದಯಘಾತದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕಿತ್ಸೆ ಪಡೆಯುತ್ತಿದ್ದ ನಂದಮೂರಿ ತಾರಕರತ್ನ (Nandamuri Taraka Ratna) ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಇವರು ಹೆರಾಂತ ತೆಲುಗು ನಟ ಹಾಗೂ ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌ಟಿಆರ್‌ … Continued