ಮಾಜಿ ಪ್ರಧಾನಿ ಎಚ್​ ಡಿ ದೇವೆಗೌಡರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಎಚ್.ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ನಂತರ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ. ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, … Continued

ಚಲನಚಿತ್ರ ನಿರ್ಮಾಪಕ ರಾಕ್‌ ಲೈನ್ ವೆಂಕಟೇಶಗೆ ಶಾಕ್‌ ನೀಡಿದ ಬಿಬಿಎಂಪಿ : ರಾಕ್‌ ಲೈನ್ ಮಾಲ್​ ಗೆ ಬೀಗ

ಬೆಂಗಳೂರು: ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಲನಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ ಅವರ ಒಡೆತನದ ರಾಕ್‌ಲೈನ್ ಮಾಲ್ ಅನ್ನು ಇಂದು, ಬುಧವಾರ ಪಾಲಿಕೆ ಕಂದಾಯ ಅಧಿಕಾರಿಗಳು ಬೀಗ ಹಾಕಿದ್ದಾರೆ. ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಕ್‌ಲೈನ್ ಮಾಲ್ ಬಳಿ ತೆರಳಿಬೀಗ ಜಡಿದಿದ್ದಾರೆ. ರಾಕ್​ಲೈನ್ ಮಾಲ್​ 2011 … Continued

ತಂದೆ ನಾರಾಯಣ ಮೂರ್ತಿ ಜೊತೆ ಬೆಂಗಳೂರಿನಲ್ಲಿ ಸಾಮಾನ್ಯರಂತೆ ಐಸ್‌ಕ್ರೀಂ ಸವಿದ ಬ್ರಿಟನ್‌ ನ ಪ್ರಥಮ ಮಹಿಳೆ..!

ಬೆಂಗಳೂರು : ಬ್ರಿಟನ್ನಿನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ಬೆಂಗಳೂರಿನಲ್ಲಿ ತಮ್ಮ ತಂದೆ ನಾರಾಯಣ ಮೂರ್ತಿ ಅವರೊಂದಿಗೆ ಐಸ್ ಕ್ರೀಂ ಸವಿಯುತ್ತಿರುವುದು ಕಂಡುಬಂದಿದೆ. ತಂದೆ-ಮಗಳ ಜೋಡಿಯ ಸ್ನ್ಯಾಪ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ, “ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ತಮ್ಮ ತಂದೆ ನಾರಾಯಣ … Continued

ವೀಡಿಯೊ…| ಬೆಂಗಳೂರು ಬಿಎಂಟಿಸಿ ಬಸ್ಸಿನಲ್ಲಿ ಕಿಟಕಿ ತೆರೆದ ಬಗ್ಗೆ ನಡೆದ ವಾಗ್ವಾದದ ನಂತರ ಚಪ್ಪಲಿಯಿಂದ ಹೊಡೆದಾಡಿಕೊಂಡ ಇಬ್ಬರು ಮಹಿಳೆಯರು…!

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಸಿನಲ್ಲಿ ಇತ್ತೀಚೆಗೆ ಆಘಾತಕಾರಿ ಘಟನೆ ನಡೆದಿರುವುದು ವರದಿಯಾಗಿದೆ. ವೈರಲ್ ದೃಶ್ಯಗಳಲ್ಲಿ, ಇಬ್ಬರು ಮಹಿಳಾ ಪ್ರಯಾಣಿಕರು ತೀವ್ರ ಘರ್ಷಣೆಯಲ್ಲಿ ತೊಡಗಿರುವುದು ಕಂಡುಬರುತ್ತದೆ, ಅದು ನಂತರ ದೈಹಿಕ ವಾಗ್ವಾದಕ್ಕೆ ತಿರುಗುತ್ತದೆ. ನಂತರ ಮಹಿಳೆಯರಿಬ್ಬರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಳ್ಳುವುದು ಕಂಡುಬರುತ್ತದೆ. ಮೆಜೆಸ್ಟಿಕ್‌ನಿಂದ ಪೀಣ್ಯಕ್ಕೆ ತೆರಳುತ್ತಿದ್ದ ಬಸ್‌ ನಲ್ಲಿ ಈ ಘಟನೆ … Continued

ಮಂಗನ ಕಾಯಿಲೆ ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ : ದಿನೇಶ ಗುಂಡೂರಾವ್‌

ಉಡುಪಿ : ಮಂಗನ ಕಾಯಿಲೆಗೆ ಲಸಿಕೆ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದರು. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ … Continued

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ ಆರೋಪ : ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಬ್ಸಿಡಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಸಂಗ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್ ಅಡಿ ಪವಿತ್ರಾ ಮತ್ತು ಆಕೆಯ ಗ್ಯಾಂಗ್ ಹಲವರಿಗೆ … Continued

ನಿವೃತ್ತಿಗೂ ಎರಡು ತಿಂಗಳು ಮೊದಲೇ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ದಿಢೀರ್‌ ರಾಜೀನಾಮೆ

ಬೆಂಗಳೂರು : ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ಅವರು ನಿವೃತ್ತಿಗೂ ಎರಡು ತಿಂಗಳು ಮೊದಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರತಾಪ ರೆಡ್ಡಿ ಅವರು ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ವರ್ಷ ಮೇ ತಿಂಗಳಲ್ಲಿ ಅವರು ನಿವೃತ್ತರಾಗುತ್ತಿದ್ದರು. ಆದರೆ, ವೈಯಕ್ತಿಕ ಕಾರಣ ನೀಡಿ … Continued

ಈ ವರ್ಷ ವಿಪರೀತ ಬಿಸಿಲು : ರಾಜ್ಯದಲ್ಲಿ ಫೆಬ್ರವರಿ ಮೊದಲನೇ ವಾರದಲ್ಲೇ ಬೇಸಿಗೆ ಆರಂಭ : ಇದಕ್ಕೆ ಕಾರಣವೆಂದರೆ…

ಬೆಂಗಳೂರು : ಎಲ್ ನಿನೋ ಪರಿಣಾಮದಿಂದ ಭಾರತವು ಈ ವರ್ಷ ವಿಪರೀತ ಬೇಸಿಗೆಯ ಶಾಖವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಹವಾಮಾನಶಾಸ್ತ್ರಜ್ಞರು ಹೇಳಿದ್ದಾರೆ, ಜೂನ್ ವೇಳೆಗೆ ಎಲ್ ನಿನೋ ಪರಿಸ್ಥಿತಿಗಳು ಕ್ರಮೇಣ ತಟಸ್ಥ ಸ್ಥಿತಿಗೆ ಪರಿವರ್ತನೆಗೊಳ್ಳುತ್ತವೆ ಮತ್ತು ಸೆಪ್ಟೆಂಬರ್ ವೇಳೆಗೆ ಲಾ ನಿನಾಕ್ಕೆ ಇದು ದಾರಿ ಮಾಡಿಕೊಡುತ್ತವೆ ಎಂದು ಹವಾಮಾನ ಶಾಸ್ತ್ರಜ್ಷರು ಭವಿಷ್ಯ ನುಡಿದಿದ್ದಾರೆ. ಎಲ್ ನಿನೋ … Continued

ವೀಡಿಯೊ…| ರಸ್ತೆಯಲ್ಲಿ ಹೋಗುತ್ತ ಮೆಕ್‌ಲಾರೆನ್ ಸೂಪರ್‌ ಕಾರ್ ಅನ್ನು ರೆಕಾರ್ಡ್ ಮಾಡುತ್ತಿರುವಾಗ ಅಪಘಾತಕ್ಕೀಡಾದ ಬೆಂಗಳೂರಿನ ಬೈಕರ್‌ಗಳು…!

ಬೆಂಗಳೂರು : ಮೆಕ್ಲಾರೆನ್ ಸೂಪರ್ ಕಾರೊಂದನ್ನು ವೀಡಿಯೊ ರೆಕಾರ್ಡ್ ಮಾಡುವ ಪ್ರಯತ್ನದಲ್ಲಿ ಇಬ್ಬರು ಸ್ಕೂಟಿ ಸವಾರರು ಮತ್ತೊಬ್ಬ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಬಿದ್ದಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ವಿಟ್ಲ ಮಲ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. X ನಲ್ಲಿ ಬಳಕೆದಾರರ ಥರ್ಡ್‌ ಐ ಹಂಚಿಕೊಂಡ ಕ್ಲಿಪ್ ನಲ್ಲಿ, ಸಾಮಾಜಿಕ … Continued

ಸಿಎಂ ಸಿದ್ದರಾಮಯ್ಯ ಸೇರಿ 4 ಕಾಂಗ್ರೆಸ್‌ ನಾಯಕರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್ : ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸೂಚನೆ

ಬೆಂಗಳೂರು: 2022ರ ಏಪ್ರಿಲ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಕರ್ನಾಟಕ ಹೈಕೋರ್ಟ್ 10,000 ರೂಪಾಯಿ ದಂಡ ವಿಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕದ … Continued