ವೀಡಿಯೊ…| ಬೆಂಗಳೂರು ಬಿಎಂಟಿಸಿ ಬಸ್ಸಿನಲ್ಲಿ ಕಿಟಕಿ ತೆರೆದ ಬಗ್ಗೆ ನಡೆದ ವಾಗ್ವಾದದ ನಂತರ ಚಪ್ಪಲಿಯಿಂದ ಹೊಡೆದಾಡಿಕೊಂಡ ಇಬ್ಬರು ಮಹಿಳೆಯರು…!

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಸಿನಲ್ಲಿ ಇತ್ತೀಚೆಗೆ ಆಘಾತಕಾರಿ ಘಟನೆ ನಡೆದಿರುವುದು ವರದಿಯಾಗಿದೆ. ವೈರಲ್ ದೃಶ್ಯಗಳಲ್ಲಿ, ಇಬ್ಬರು ಮಹಿಳಾ ಪ್ರಯಾಣಿಕರು ತೀವ್ರ ಘರ್ಷಣೆಯಲ್ಲಿ ತೊಡಗಿರುವುದು ಕಂಡುಬರುತ್ತದೆ, ಅದು ನಂತರ ದೈಹಿಕ ವಾಗ್ವಾದಕ್ಕೆ ತಿರುಗುತ್ತದೆ. ನಂತರ ಮಹಿಳೆಯರಿಬ್ಬರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಳ್ಳುವುದು ಕಂಡುಬರುತ್ತದೆ. ಮೆಜೆಸ್ಟಿಕ್‌ನಿಂದ ಪೀಣ್ಯಕ್ಕೆ ತೆರಳುತ್ತಿದ್ದ ಬಸ್‌ ನಲ್ಲಿ ಈ ಘಟನೆ … Continued

ಮಂಗನ ಕಾಯಿಲೆ ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ : ದಿನೇಶ ಗುಂಡೂರಾವ್‌

ಉಡುಪಿ : ಮಂಗನ ಕಾಯಿಲೆಗೆ ಲಸಿಕೆ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದರು. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ … Continued

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ ಆರೋಪ : ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಬ್ಸಿಡಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಸಂಗ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್ ಅಡಿ ಪವಿತ್ರಾ ಮತ್ತು ಆಕೆಯ ಗ್ಯಾಂಗ್ ಹಲವರಿಗೆ … Continued

ನಿವೃತ್ತಿಗೂ ಎರಡು ತಿಂಗಳು ಮೊದಲೇ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ದಿಢೀರ್‌ ರಾಜೀನಾಮೆ

ಬೆಂಗಳೂರು : ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ಅವರು ನಿವೃತ್ತಿಗೂ ಎರಡು ತಿಂಗಳು ಮೊದಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರತಾಪ ರೆಡ್ಡಿ ಅವರು ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ವರ್ಷ ಮೇ ತಿಂಗಳಲ್ಲಿ ಅವರು ನಿವೃತ್ತರಾಗುತ್ತಿದ್ದರು. ಆದರೆ, ವೈಯಕ್ತಿಕ ಕಾರಣ ನೀಡಿ … Continued

ಈ ವರ್ಷ ವಿಪರೀತ ಬಿಸಿಲು : ರಾಜ್ಯದಲ್ಲಿ ಫೆಬ್ರವರಿ ಮೊದಲನೇ ವಾರದಲ್ಲೇ ಬೇಸಿಗೆ ಆರಂಭ : ಇದಕ್ಕೆ ಕಾರಣವೆಂದರೆ…

ಬೆಂಗಳೂರು : ಎಲ್ ನಿನೋ ಪರಿಣಾಮದಿಂದ ಭಾರತವು ಈ ವರ್ಷ ವಿಪರೀತ ಬೇಸಿಗೆಯ ಶಾಖವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಹವಾಮಾನಶಾಸ್ತ್ರಜ್ಞರು ಹೇಳಿದ್ದಾರೆ, ಜೂನ್ ವೇಳೆಗೆ ಎಲ್ ನಿನೋ ಪರಿಸ್ಥಿತಿಗಳು ಕ್ರಮೇಣ ತಟಸ್ಥ ಸ್ಥಿತಿಗೆ ಪರಿವರ್ತನೆಗೊಳ್ಳುತ್ತವೆ ಮತ್ತು ಸೆಪ್ಟೆಂಬರ್ ವೇಳೆಗೆ ಲಾ ನಿನಾಕ್ಕೆ ಇದು ದಾರಿ ಮಾಡಿಕೊಡುತ್ತವೆ ಎಂದು ಹವಾಮಾನ ಶಾಸ್ತ್ರಜ್ಷರು ಭವಿಷ್ಯ ನುಡಿದಿದ್ದಾರೆ. ಎಲ್ ನಿನೋ … Continued

ವೀಡಿಯೊ…| ರಸ್ತೆಯಲ್ಲಿ ಹೋಗುತ್ತ ಮೆಕ್‌ಲಾರೆನ್ ಸೂಪರ್‌ ಕಾರ್ ಅನ್ನು ರೆಕಾರ್ಡ್ ಮಾಡುತ್ತಿರುವಾಗ ಅಪಘಾತಕ್ಕೀಡಾದ ಬೆಂಗಳೂರಿನ ಬೈಕರ್‌ಗಳು…!

ಬೆಂಗಳೂರು : ಮೆಕ್ಲಾರೆನ್ ಸೂಪರ್ ಕಾರೊಂದನ್ನು ವೀಡಿಯೊ ರೆಕಾರ್ಡ್ ಮಾಡುವ ಪ್ರಯತ್ನದಲ್ಲಿ ಇಬ್ಬರು ಸ್ಕೂಟಿ ಸವಾರರು ಮತ್ತೊಬ್ಬ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಬಿದ್ದಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ವಿಟ್ಲ ಮಲ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. X ನಲ್ಲಿ ಬಳಕೆದಾರರ ಥರ್ಡ್‌ ಐ ಹಂಚಿಕೊಂಡ ಕ್ಲಿಪ್ ನಲ್ಲಿ, ಸಾಮಾಜಿಕ … Continued

ಸಿಎಂ ಸಿದ್ದರಾಮಯ್ಯ ಸೇರಿ 4 ಕಾಂಗ್ರೆಸ್‌ ನಾಯಕರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್ : ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸೂಚನೆ

ಬೆಂಗಳೂರು: 2022ರ ಏಪ್ರಿಲ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಕರ್ನಾಟಕ ಹೈಕೋರ್ಟ್ 10,000 ರೂಪಾಯಿ ದಂಡ ವಿಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕದ … Continued

ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು : 6 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌ಐಎ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸರಣಿ ಬಾಂಬ್‌ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, … Continued

ಈ ತಿಂಗಳ ಕೊನೆಯಲ್ಲಿ ಸರ್ಕಾರಕ್ಕೆ ಜಾತಿ ಜನಗಣತಿ ವರದಿ ಸಲ್ಲಿಕೆ : ಜಯಪ್ರಕಾಶ ಹೆಗ್ಡೆ

ಬೆಂಗಳೂರು: ಈ ತಿಂಗಳಾಂತ್ಯದಲ್ಲಿ ಜಾತಿ ಜನಗಣತಿ (caste Census) ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಅವಧಿ ಮುಗಿಯುವುದರ ಒಳಗಾಗಿ ವರದಿ ನೀಡುತ್ತೇವೆ. ಸರ್ಕಾರ ಯಾವಾಗ ತೆಗೆದುಕೊಳ್ಳುತ್ತದೋ ಆಗ ಕೊಡುತ್ತೇವೆ. ವರದಿ ಅಂತಿಮಗೊಂಡಿದೆ. ಸಲ್ಲಿಕೆ ಮಾಡಲು ಸಮಯ ಕೇಳಿದ್ದೇವೆ. ಸದ್ಯ … Continued

ಶೀಘ್ರವೇ 900ಕ್ಕೂ ಹೆಚ್ಚು ಪಿಎಸ್‌ ಐ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಶುರು: ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಶೀಘ್ರವೇ 900ಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪಿಎಸ್ ಐ ಪರೀಕ್ಷೆ ಬಹಳ ಸುಸೂತ್ರವಾಗಿ ನಡೆದಿದೆ. ಪರೀಕ್ಷೆಯಲ್ಲಿ … Continued