ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್​​ ಪತ್ತೆ ; ಮಹಾರಾಷ್ಟ್ರ ಪೊಲೀಸರ ವಾದ ತಳ್ಳಿಹಾಕಿದ ಗೃಹ ಸಚಿವ ಪರಮೇಶ್ವರ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮೆಫೆಡ್ರೋನ್ (Mephedrone) ಉತ್ಪಾದನಾ ಘಟಕಗಳ ಮೇಲೆ ಮಹಾರಾಷ್ಟ್ರ ಡ್ರಗ್ ವಿರೋಧಿ ದಳ (ANTF) ನಡೆಸಿದ ದಾಳಿಗೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಭಾನುವಾರ ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆಯಲ್ಲ, ಬದಲಿಗೆ ಅವರ ಜೊತೆಗೆ ಕರ್ನಾಟಕ ಪೊಲೀಸರು ಮತ್ತು ಎನ್‌ಸಿಬಿ (NCB) ತಂಡಗಳ ‘ಜಂಟಿ ಕಾರ್ಯಾಚರಣೆ’ … Continued

ಬೆಂಗಳೂರಲ್ಲಿ ʼವರದಯೋಗಿ ಶ್ರೀಧರʼ ನಾಟಕ ಪ್ರದರ್ಶನ

ಬೆಂಗಳೂರು : ಭಗವಾನ್‌ ಸದ್ಗುರು ಶ್ರೀ ಶ್ರೀಧರ ಸ್ವಾಮಿಗಳ ಜೀವನಾಧಾರಿತ ʼವರದಯೋಗಿʼ ಶ್ರೀಧರ ಎಂಬ ಭಕ್ತಿ ಪ್ರಧಾನ ನಾಟಕವನ್ನು ಗುರುವಾರ (ಡಿಸೆಂಬರ್‌ 25 ) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಶಸ್ವಿಯಾಗಿ ಪ್ರದರ್ಶಗೊಂಡಿತು. ಮೂರೂವರೆ ತಾಸುಗಳ ಕಾಲ ನಡೆದ ಈ ಪ್ರದರ್ಶನವು ಶ್ರೀ ಗಜಾನನ ಕಲೆ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಟ್ರಸ್ಟ್ ಮಣ್ಣಿಗೆ, ಹೊನ್ನಾವರ (ಉತ್ತರ ಕನ್ನಡ) … Continued

ಬೆಂಗಳೂರು : ಮೂರು ಕಡೆ ದಾಳಿ, 55.88 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶಕ್ಕೆ

ಬೆಂಗಳೂರು/ ಮುಂಬೈ : ಮಹಾರಾಷ್ಟ್ರದ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ, ಅಂತಾರಾಜ್ಯ ಎಂಡಿ (MD) ಡ್ರಗ್ಸ್ ಉತ್ಪಾದನಾ ಜಾಲವನ್ನು ಧ್ವಂಸಗೊಳಿಸಿದೆ ಎಂದು ವರದಿಯಾಗಿದೆ. ಬೆಂಗಳೂರು ನಗರದ ಮೂರು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಘಟಕಗಳ ಮೇಲೆ ದಾಳಿ ಮಾಡಿರುವ ಪೊಲೀಸರು, ಸುಮಾರು 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. … Continued

ಬೆಂಗಳೂರು : ಪ್ರೇಮ ಪ್ರಸ್ತಾವನೆ ನಿರಾಕರಿಸಿದ ಯುವತಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ-ದೌರ್ಜನ್ಯ

ಬೆಂಗಳೂರು: ತನ್ನನ್ನು ಪ್ರೀತಿಸು ಎಂದು ಒತ್ತಡ ಹೇರಿದರೂ ಅದನ್ನು ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಡಿಸೆಂಬರ್ 22ರಂದು ಮಧ್ಯಾಹ್ನ ಸುಮಾರು 3:20ರ ಸುಮಾರಿಗೆ ಉಲ್ಲಾಳ ಮುಖ್ಯರಸ್ತೆಯ ಜ್ಞಾನಜ್ಯೋತಿ ನಗರದ ಬಳಿಯ ಖಾಸಗಿ ಪಿಜಿ (PG) … Continued

17ನೇ ಬೆಂಗಳೂರು ಚಲನಚಿತ್ರೋತ್ಸವ ; ರಾಯಭಾರಿಯಾಗಿ ನಟ ಪ್ರಕಾಶ ರಾಜ ನೇಮಕ

ಬೆಂಗಳೂರು : ಜನವರಿ 29ರಿಂದ ಫೆಬ್ರವರಿ 06ರವರೆಗೆ ಆಯೋಜಿಸಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ಅದರ ರಾಯಭಾರಿಯಾಗಿ ( (Brand Ambassador) ಹಿರಿಯ ಚಲನಚಿತ್ರ ನಟ ಪ್ರಕಾಶ ರಾಜ (Prakash Raj) ಅವರನ್ನು ನೇಮಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ … Continued

ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ, ಹಲವು ಜಿಲ್ಲೆಗಳಲ್ಲಿ ತೀವ್ರ ಚಳಿ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಶುಕ್ರವಾರ (ಡಿಸೆಂಬರ್ 19) ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತಗಾಳಿಯ ಜೋರಾಗಿ ಬೀಸಲಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಭಾಗದ ನಾಲ್ಕು ಜಿಲ್ಲೆಗಳಲ್ಲಿ ತೀವ್ರವಾದ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ  ಕನಿಷ್ಠ ತಾಪಮಾನ 12 ರಿಂದ 14 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. … Continued

ನಡು ರಸ್ತೆಯಲ್ಲೇ ವ್ಯಕ್ತಿಗೆ ಹೃದಯಾಘಾತ ; ಪತ್ನಿ ಅಂಗಲಾಚಿ ಬೇಡಿಕೊಂಡರೂ ನೆರವಿಗೆ ಬಾರದ ಜನ…!

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ನಡುರಸ್ತೆಯಲ್ಲೇ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಂತೆ ಆತನ ಪತ್ನಿ ಎಷ್ಟೇ ಅಂಗಲಾಚಿದರೂ ಯಾರೂ ನೆರವಿಗೆ ಬಾರದ ಅಮಾನವೀಯ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಬೈಕ್ ಮೇಲೆ ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರೂ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ದಕ್ಷಿಣ ಬೆಂಗಳೂರಿನ ಬಾಲಾಜಿ … Continued

ಬೆಂಗಳೂರು : ಮಗುವಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ಪತಿ…!

 ಬೆಂಗಳೂರು: ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಪಡೆಯುವ ಹಠಕ್ಕೆ ಬಿದ್ದ ಚಿತ್ರ ನಿರ್ಮಾಪಕನೊಬ್ಬ, ಪತ್ನಿಯನ್ನೇ (ಕನ್ನಡದ ಕಿರುತೆರೆ ಮತ್ತು ಚಲನಚಿತ್ರ ನಟಿ) ಅಪಹರಿಸಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ವರ್ಧನ್ ಎಂಟರ್‌ಪ್ರೈಸಸ್’ ಮಾಲೀಕ ಹರ್ಷವರ್ಧನ್ ಈ ಪ್ರಕರಣದ ಮುಖ್ಯ ಆರೋಪಿ ಎಂದು ಹೇಳಲಾಗಿದೆ. ಹಾಸನ ಜಿಲ್ಲೆಯ ನಿವಾಸಿಯಾದ ಹರ್ಷವರ್ಧನ್ ಮತ್ತು ನಟಿ ಚೈತ್ರಾ … Continued

ಸ್ನೇಹಿತರ ಜೊತೆ ಪಾರ್ಟಿ: ಪೊಲೀಸರು ಬಂದಿದ್ದಕ್ಕೆ ಹೆದರಿ ತಪ್ಪಿಸಿಕೊಳ್ಳುವಾಗ ಬಾಲ್ಕನಿಯಿಂದ ಬಿದ್ದು ಯುವತಿಗೆ ಗಾಯ

ಬೆಂಗಳೂರು: ನಗರದ ಬ್ರೂಕ್‌ಫೀಲ್ಡ್‌ನಲ್ಲಿರುವ ಹೋಟೆಲ್‌ವೊಂದರ ಬಾಲ್ಕನಿಯಿಂದ ಕೆಳಗೆ ಇಳಿಯಲು ಡ್ರೈನ್‌ಪೈಪ್ (ಕೊಳಾಯಿ) ಬಳಸಲು ಯತ್ನಿಸಿದ 21 ವರ್ಷದ ಯುವತಿಯೊಬ್ಬಳು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ. ಪಾರ್ಟಿಯ ಗದ್ದಲದ ಕುರಿತು ದೂರು ಬಂದ ನಂತರ ಪೊಲೀಸರು ಹೋಟೆಲ್‌ಗೆ ಭೇಟಿ ನೀಡಿದ್ದರಿಂದ ಆತಂಕಗೊಂಡ ಯುವತಿ ತಪ್ಪಿಸಿಕೊಳ್ಳಲು ಈ ಪ್ರಯತ್ನ ಮಾಡಿದ್ದಳು ಎನ್ನಲಾಗಿದೆ. … Continued

ಬೆಂಗಳೂರು : ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ವಿದೇಶಿ ತಳಿಯ ಎರಡು ಲಕ್ಷ ರೂ. ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ, ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನ ಗಿರಿನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅರುಣಕುಮಾರ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಲೋಗೋ ಎಂಬಾಸಿಂಗ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ. ಮಂಡ್ಯದ ನಾಗಮಂಗಲದ ಮೂಲದವರಾದ … Continued