ಬೆಂಗಳೂರು : ಕೇರಳ ಪೊಲೀಸರ ಕಾರ್ಯಾಚರಣೆ ; 1 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ

ಬೆಂಗಳೂರು : ಅಂತಾರಾಜ್ಯ ಮಾದಕವಸ್ತು ಜಾಲದ ವಿರುದ್ಧ ಕೇರಳ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ ಕುಟುಮ್ (27) ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಬೆಂಗಳೂರು : ಸ್ನೇಹಿತನಿಗೆ ಬ್ಯಾಂಕ್‌ ವಿವರ ನೀಡಿ 7 ಕೋಟಿ ರೂ. ವಂಚನೆ ಜಾಲದಲ್ಲಿ ಸಿಲುಕಿದ ವಿದ್ಯಾರ್ಥಿ…!

ಬೆಂಗಳೂರು: ತನ್ನ ಸ್ನೇಹಿತನನ್ನು ಅತಿಯಾಗಿ ನಂಬಿದ್ದು ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ ಪಾಲಿಗೆ ಅದೇ ದುಸ್ವಪ್ನವಾಗಿ ಪರಿಣಮಿಸಿದೆ. ಸ್ನೇಹಿತನಿಗೆ ಸಹಾಯ ಮಾಡಲು ಹೋದ ಈತ ಈಗ ಕೋಟ್ಯಂತರ ರೂಪಾಯಿಗಳ ಸೈಬರ್ ಹಗರಣದಲ್ಲಿ ಸಿಲುಕಿಕೊಂಡಿದ್ದಾನೆ. ಈ ವಿದ್ಯಾರ್ಥಿಯ ಬ್ಯಾಂಕ್ ಖಾತೆಯನ್ನು ಸೈಬರ್ ವಂಚಕರು ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆಗೆ ಬಳಸಿಕೊಂಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಂಗಳೂರು … Continued

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ವ್ಯಸನವನ್ನು  ಗಮನದಲ್ಲಿಟ್ಟುಕೊಂಡು ಈ ಕ್ರಮಕ್ಕೆ ಮುಂದಾಗಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, … Continued

ಬೆಂಗಳೂರು: ನಿವೃತ್ತ ಇಸ್ರೋ ನೌಕರನಿಂದ ಪತ್ನಿಯ ಹತ್ಯೆ

ಬೆಂಗಳೂರು: ಮಹಾನಗರದ ಕೆ.ಆರ್. ಪುರ ಸಮೀಪದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಘೋರ ಘಟನೆಯೊಂದು ನಡೆದಿದೆ. ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಟವೆಲ್‌ನಿಂದ ಬಿಗಿದು ಕೊಲೆ ಮಾಡಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು 65 ವರ್ಷದ ನಾಗೇಶ್ವರ ರಾವ್ ಎಂದು ಗುರುತಿಸಲಾಗಿದೆ. ಬುಧವಾರ … Continued

ವೀಡಿಯೊ..| ಬೆಂಗಳೂರು : ಬೆಂಕಿ ಹೊತ್ತಿಕೊಂಡು ಉರಿದ ಖಾಸಗಿ ಬಸ್‌

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್​ ದುರಂತ ಸಂಭವಿಸಿದೆ. ಮಹಾನಗರದ ಚಂದ್ರಲೇಔಟ್ ಬಿಎಂಟಿಸಿ ಡಿಪೋ (BMTC) ಬಳಿ ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಮ್ಮೆಗೆ ಹೊತ್ತಿ ಉರಿದಿದೆ ಎಂದು ವರದಿಯಾಗಿದೆ. ಈ ಘಟನೆ ಇಂದು, ಬುಧವಾರ 10:20ರ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಬೆಂಕಿಯಿಂದ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಹತ್ತಿಕೊಂಡಾಗ ಬಸ್‌ನಲ್ಲಿ … Continued

ಗ್ರಾಹಕರ 3.5 ಕೋಟಿ ರೂ. ಮೌಲ್ಯದ ಚಿನ್ನ ಅಡವಿಟ್ಟು ಬೆಟ್ಟಿಂಗ್ ಆಡಿದ್ದ ಬ್ಯಾಂಕ್ ಅಧಿಕಾರಿ ಬಂಧನ

ಬೆಂಗಳೂರು: ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿಟ್ಟಿದ್ದ ಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 2,780 ಗ್ರಾಂ ಚಿನ್ನಾಭರಣಗಳನ್ನು ಅಕ್ರಮವಾಗಿ ಅಡವಿಟ್ಟು ವಂಚಿಸಿದ ಆರೋಪದ ಮೇಲೆ ಬ್ಯಾಂಕ್ ಒಂದರ ಡೆಪ್ಯೂಟಿ ಮ್ಯಾನೇಜರ್ (ಉಪ ವ್ಯವಸ್ಥಾಪಕ) ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಫೆಬ್ರವರಿ 5 ರಂದು ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ … Continued

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎಂ. ಸತ್ಯವಾರ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೊಸಕೋಟೆ-ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೊದಲು ಕಾರು ಮುಂದೆ … Continued

ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ ಪೊಲೀಸರ ವಶಕ್ಕೆ

ಬೆಂಗಳೂರು : ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಿಜೆಪಿ ಶಾಸಕ ಬೈರತಿ ಬಸವರಾj ಅವರನ್ನು ಅಹಮದಾಬಾದ್‌ನಿಂದ ಆಗಮಿಸಿದ ಬೆನ್ನಲ್ಲೇ, ಗುರುವಾರ ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಟರ್ಮಿನಲ್-1ರಲ್ಲಿ ಅವರ ಆಗಮನಕ್ಕಾಗಿ ಕಾಯುತ್ತಿದ್ದ ಪೊಲೀಸ್ ತಂಡವು ಅವರನ್ನು ವಶಕ್ಕೆ ತೆಗೆದುಕೊಂಡಿದೆ. ಕೆ.ಆರ್. ಪುರಂ ಶಾಸಕರನ್ನು ಸಂಜೆ 7 ಗಂಟೆ ಸುಮಾರಿಗೆ ಕ್ರಿಮಿನಲ್ … Continued

ವೀಡಿಯೊ..| ಬೆಂಗಳೂರು : ರಸ್ತೆ ಜಗಳ ; ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಎಸ್‌ಯುವಿ ಚಾಲಕ…!

ಬೆಂಗಳೂರು: ರಾಜಧಾನಿಯ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road) ಬೆಚ್ಚಿಬೀಳಿಸುವಂತಹ ‘ರೋಡ್ ರೇಜ್’ (Road Rage) ಘಟನೆಯೊಂದು ನಡೆದಿದೆ. ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಇದ್ದಾಗಲೇ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋಗಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಳೆ ವಿಮಾನ ನಿಲ್ದಾಣ … Continued

ಬೆಂಗಳೂರು: ಸ್ಕೂಟರ್ ಮೇಲೆ ಶಾಲಾ ಬಸ್ ಹರಿದು ಇಬ್ಬರು ಪುಟಾಣಿಗಳು ಸಾವು

ಬೆಂಗಳೂರು : ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ಬೆಂಗಳೂರಿನ ಥಣಿಸಂದ್ರ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ವರ್ಷಾ (2 ವರ್ಷ) ಹಾಗೂ ಬಾನು (4 ವರ್ಷ) ಬುಧವಾರ ಬೆಳಿಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ ಎಂಬವರು ಮ್ಮ ಸ್ಕೂಟರ್‌ನಲ್ಲಿ ತನ್ನ ಮಗಳಾದ … Continued