ಭಾರತಕ್ಕೆ ಬಂದ ರಷ್ಯಾ ಅಧ್ಯಕ್ಷ ಪುತಿನ್‌ ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ ; ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯನ್ ಭಾಷೆಯಲ್ಲಿರುವ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ತಮ್ಮ ನಾಲ್ಕು ವರ್ಷಗಳಲ್ಲಿನ ಮೊದಲ ಭಾರತ ಭೇಟಿಗಾಗಿ ಗುರುವಾರ ಸಂಜೆ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ … Continued

ವೀಡಿಯೊ…| ಅಹಮದಾಬಾದ್‌ ವಿಮಾನ ದುರಂತ ; ಇಡೀ ವಿಮಾನವೇ ಸುಟ್ಟು ಕರಕಲಾದ್ರೂ ಭಗವದ್ಗೀತೆ ಪುಸ್ತಕಕ್ಕೆ ಏನೂ ಆಗಿಲ್ಲ…!

ಅಹಮದಾಬಾದ್‌ : ಗುಜರಾತಿನ ಅಹಮದಾಬಾದ್‌ನಲ್ಲಿ 265 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ಫ್ಲೈಟ್ 171 ವಿಮಾನ ಅಪಘಾತದಲ್ಲಿ ಉಂಟಾದ ಬೆಂಕಿಯಲ್ಲಿ ಧಗಧಗಿಸಿ ಹೋದ ವಿಮಾನದ ಅವಶೇಷಗಳಲ್ಲಿ ಭಗವದ್ಗೀತೆಯ ಪುಸ್ತಕ ಸುಡದೆ ಹಾಗೆಯೇ ಇರುವುದು ಕಂಡುಬಂದಿದೆ. ತೀವ್ರ ತೆರನಾದ ಬೆಂಕಿಯ ಜ್ವಾಲೆಯ ಹೊರತಾಗಿಯೂ, ಪವಿತ್ರ ಗ್ರಂಥವು ಹಾನಿಗೊಳಗಾಗದೆ ಉಳಿದಿದೆ. ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೋಗುತ್ತಿದ್ದ ಏರ್‌ … Continued

ಭಗವದ್ಗೀತೆ, ಭರತನ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆ ; ಭಾರತಕ್ಕೆ ಹೆಮ್ಮೆಯ ಕ್ಷಣ ಎಂದ ಮೋದಿ

ನವದೆಹಲಿ : ಹಿಂದೂ ಧರ್ಮಗ್ರಂಥವಾದ ಶ್ರೀಮದ್ ಭಗವದ್ಗೀತೆ ಮತ್ತು ಪ್ರದರ್ಶನ ಕಲೆಗಳ ಕುರಿತಾದ ಭಾರತೀಯ ಗ್ರಂಥವಾದ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆಯಾಗಿದೆ. ಈ ಸುದ್ದಿಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಚಿಕೊಂಡಿದ್ದಾರೆ. ಅವರು ಎಕ್ಸ್‌ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಶ್ರೀಮದ್ ಭಗವದ್ಗೀತೆ … Continued

ವೀಡಿಯೊ…| ಅಮೆರಿಕದ ಎಫ್‌ಬಿಐ ನಿರ್ದೇಶಕರಾಗಿ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಕಾಶ್ ಪಟೇಲ್

ಭಾರತೀಯ ಮೂಲದ ಕಾಶ್ ಪಟೇಲ್ ಅವರು ಶುಕ್ರವಾರ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಬೈಬಲ್ ಬದಲಿಗೆ, ಪಟೇಲ್ ಅವರು ಅಟಾರ್ನಿ ಜನರಲ್ ಪಾಮ್ ಬೋಂಡಿ ಅವರಿಂದ ಪವಿತ್ರ ಹಿಂದೂ ಧರ್ಮಗ್ರಂಥವಾದ ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. “ಗೀತೆಯ … Continued

ಶಾಲೆಗಳಲ್ಲಿ ‘ಭಗವದ್ಗೀತೆ’ ಬೋಧನೆ ಪರಿಣಾಮಕಾರಿ ಅನುಷ್ಠಾನ : ಗುಜರಾತ್ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಗಾಂಧಿನಗರ : ಶಾಲೆಗಳಲ್ಲಿ ಭಗವದ್ಗೀತೆ ಕಲಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರದ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ಗುಜರಾತ್ ವಿಧಾನಸಭೆಯು ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಆಮ್ ಆದ್ಮಿ ಪಕ್ಷವು (ಎಎಪಿ) ನಿರ್ಣಯವನ್ನು ಸ್ವಾಗತಿಸಿ ಅದಕ್ಕೆ ತನ್ನ ಬೆಂಬಲವನ್ನು ನೀಡಿದರೆ, ಕಾಂಗ್ರೆಸ್ ಸದಸ್ಯರು ಆರಂಭದಲ್ಲಿ ಪ್ರತಿಭಟನೆ ಮಾಡಿದರು. … Continued