ಭಾರತ್‌ ಬಂದ್‌: ಕರ್ನಾಟಕ ವಿವಿ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ: ರೈತ ಸಂಘಟನೆಗಳು ಸೋಮವಾರ ಭಾರತ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ಸೋಮವಾರ (27-09-2021) ನಡೆಸಬೇಕಿದ್ದ ಸ್ನಾತಕ ಮತ್ತು ಸ್ನಾತಕೋತ್ತರ, ವಿವಿಧ ಸೆಮಿಸ್ಟರ್ ವಿಷಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ನಂತರ ಪ್ರಕಟಿಸಲಾಗುವದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಚ್ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ ಬಂದ್‌: ಹಲವೆಡೆ ರೈಲು ಸಂಚಾರ, ಸಾರಿಗೆ ವ್ಯತ್ಯಯ

ನವ ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ನಾಲ್ಕು ತಿಂಗಳ ಆಂದೋಲನದ ಹಿನ್ನೆಲೆಯಲ್ಲಿ ಇಂದು ಭಾರತ್ ಬಂದ್ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದಲೇ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ದೆಹಲಿಯಿಂದ ಚಂಡೀಗಡ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಬೆಳಿಗ್ಗೆ ರದ್ದುಪಡಿಸಲಾಗಿದೆ. ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ … Continued

ನಾಳೆ ಭಾರತ್‌ ಬಂದ್‌: ಹರ್ಯಾಣಾ, ಪಂಜಾಬ್‌, ಪಶ್ಚಿಮ ಉತ್ತರ ಪ್ರದೇಶದಲ್ಲಿ ಹೆಚ್ಚು ಪರಿಣಾಮ

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿರೈತ ಸಂಘಗಳ ಒಕ್ಕೂಟವಾದ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮಾರ್ಚ್ 26, ಶುಕ್ರವಾರ ಭಾರತ್ ಬಂದ್‌ಗೆ ಕರೆ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಬಂದ್‌ ನಡೆಯಲಿದೆ ಎಂದು ತಿಳಿಸಿದೆ. ಭಾರತ್ ಬಂಧವನ್ನು ಸಂಪೂರ್ಣ ಯಶಸ್ವಿಗೊಳಿಸಬೇಕೆಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬುಧವಾರ ದೇಶದ … Continued