ಕೆಜಿಎಫ್‌-2 ಹಾಡು ಬಳಕೆ ಆರೋಪ : ರಾಹುಲ್‌ ಗಾಂಧಿ ವಿರುದ್ಧದ ಎಫ್‌ಐಆರ್‌ ವಜಾ ಮಾಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಭಾರತ್ ಜೋಡೋ ಯಾತ್ರೆಯ ಪ್ರಚಾರದ ವೀಡಿಯೊಕ್ಕೆ ಕೆಜಿಎಫ್‌-2 ಕನ್ನಡ ಸಿನಿಮಾದ ಮುದ್ರಿತ ಸಂಗೀತವನ್ನು ಬಳಕೆ ಮಾಡುವ ಮೂಲಕ ಕೃತಿಚೌರ್ಯ ಎಸಗಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್‌ ಸಂಸ್ಥೆಯು ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಜೈರಾಮ ರಮೇಶ ಮತ್ತು ಸುಪ್ರಿಯಾ ಶ್ರೀನಾಥೆ ಅವರ ವಿರುದ್ಧ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ದಾಖಲಿಸಿರುವ ಎಫ್‌ಐಆರ್‌ ವಜಾ ಮಾಡಲು … Continued

ಕೆಜಿಎಫ್‌ 2 ಹಾಡು ಬಳಕೆ : ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲು ; ರಾಹುಲ್‌ ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಕೃತಿ ಸ್ವಾಮ್ಯ ಉಲ್ಲಂಘಿಸಿ ಕಾಂಗ್ರೆಸ್‌ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಳಸಿರುವ ಕೆಜಿಎಫ್‌-2 ಸಿನಿಮಾದ ಮುದ್ರಿತ ಸಂಗೀತವನ್ನು ತೆಗೆದುಹಾಕಲು ನಿರ್ದೇಶಿಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು ಪಾಲಿಸಿಲ್ಲ ಎಂದು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಪಕ್ಷದ ಮುಖಂಡರಿಗೆ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಕಾಂಗ್ರೆಸ್‌ … Continued

ಭಾರತ ಜೋಡೋ ಯಾತ್ರೆ’: ರಸ್ತೆಯಲ್ಲೇ ಪುಷ್- ಅಪ್ ಮಾಡಿದ ರಾಹುಲ್ ಗಾಂಧಿ, ಡಿಕೆಶಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ವಿವಿಧ ಚಟುವಟಿಕೆಗಳಲ್ಲಿ ತೊಡಗಿರುವ ವಿಡಿಯೋಗಳು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ರಸ್ತೆಯಲ್ಲಿ ಪುಷ್-ಅಪ್‌ ಮಾಡಿರುವ ಫೋಟೋ ವೈರಲ್ ಆಗಿದೆ. ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಸೇರಿದಂತೆ ಅನೇಕರು ಪುಷ್-ಅಪ್‌ … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ-ಸಿದ್ದರಾಮಯ್ಯ ರನ್ನಿಂಗ್‌ ರೇಸ್‌ | ವೀಕ್ಷಿಸಿ

ಮಂಡ್ಯ: ಇಳಿ ವಯಸ್ಸಿನಲ್ಲಿಯೂ ಉತ್ಸಾಹ ಭರಿತವಾಗಿಯೇ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ಭಾರತ್‌ ಜೋಡೋ ಯಾತ್ರೆಯಲ್ಲಿ ರನ್ನಿಂಗ್‌ ಮಾಡಿದ್ದಾರೆ…! ಈ ದೃಶ್ಯಾವಳಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಟ್ವೀಟ್‌ ಮಾಡಿದೆ.ಜಗ್ಗದ, ಕುಗ್ಗದ ಉತ್ಸಾಹ ನಮ್ಮದು, ನುಗ್ಗುವುದೊಂದೇ ದ್ಯೇಯ ನಮ್ಮದು, ನಡೆದಷ್ಟೂ ನೂರ್ಮಡಿಯಾಗುತ್ತಿರುವ … Continued

ಪ್ರಜಾಪ್ರಭುತ್ವದ ಸಂಸ್ಥೆಗಳು ವಿಪಕ್ಷಗಳಿಗೆ ಬಂದ್, ಪಾದಯಾತ್ರೆ ಬಿಟ್ಟು ಬೇರೆ ಮಾರ್ಗವೇ ಇರಲಿಲ್ಲ: ಗುಂಡ್ಲುಪೇಟೆ ಸಮಾವೇಶದಲ್ಲಿ ರಾಹುಲ್‌ ಗಾಂಧಿ

ಚಾಮರಾಜನಗರ: ಪ್ರಜಾಪ್ರಭುತ್ವದ ಹಲವು ಸಂಸ್ಥೆಗಳನ್ನು ವಿಪಕ್ಷಗಳಿಗೆ ಬಂದ್ ಮಾಡಲಾಗಿದೆ. ಎಲ್ಲವೂ ಸರ್ಕಾರ ಹಿಡಿತದಲ್ಲಿಟ್ಟುಕೊಂಡು ತನಗೆ ಬೇಕಾದಂತೆ ಕುಣಿಸುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಬಿಡುತ್ತಿಲ್ಲ ಹೀಗಾಗಿ ಯಾತ್ರೆಯೊಂದೇ ಮಾರ್ಗವಾಗಿದೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು. ಇಂದು, ಶುಕ್ರವಾರ ತಮಿಳುನಾಡು ಮೂಲಕ ಕರ್ನಾಟಕವನ್ನು ಪ್ರವೇಶಿಸಿದ ನಂತರ ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ ಜೋಡೋ ಪಾದಯಾತ್ರೆ … Continued

ನಿಮಗೆ ತಮಿಳು ಹುಡುಗಿಯನ್ನೇ ಮದುವೆ ಮಾಡಿಕೊಡಲು ಸಿದ್ಧ: ಮಹಿಳೆ ಮಾತಿಗೆ ನಾಚಿನೀರಾದ ರಾಹುಲ್ ಗಾಂಧಿ

ನವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಕಾಂಗ್ರೆಸ್‌ನ ‘ಭಾರತ್‌ ಜೋಡೋ ಯಾತ್ರೆ’ ಅನೇಕ ತಮಾಷೆಯ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದೆ. ತಮಿಳುನಾಡಿನಲ್ಲಿ ಸಂಚರಿಸಿದ ಯಾತ್ರೆಯುದ್ದಕ್ಕೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜನರೊಂದಿಗೆ ಸಂವಾದ ನಡೆಸಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್ ಅವರು ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ತಮಾಷೆಯ ವಿದ್ಯಮಾನದ ಬಗ್ಗೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. … Continued