ಬಿಹಾರದಲ್ಲಿ ಹೀನಾಯ ಸೋಲಿನ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ತೀವ್ರ ; ಕಾಂಗ್ರೆಸ್‌ ನಾಯಕತ್ವದ ಮುಂದೆ ದೊಡ್ಡ ಸವಾಲು…

ಬಿಹಾರದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ ನಂತರ ‘ಇಂಡಿಯಾ’ (INDIA) ಮೈತ್ರಿಕೂಟವು ಅತ್ಯಂತ ಗಂಭೀರವಾದ ಆಂತರಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮೈತ್ರಿಕೂಟದ ಹಲವಾರು ಪ್ರಾದೇಶಿಕ ಅಂಗಪಕ್ಷಗಳು ಕಾಂಗ್ರೆಸ್ ನೇತೃತ್ವದ ಈ ಮೈತ್ರಿಕೂಟದ ಕಾರ್ಯತಂತ್ರ, ನಾಯಕತ್ವ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಬಹಿರಂಗವಾಗಿ ಪ್ರಶ್ನೆಗಳನ್ನು ಎತ್ತುತ್ತಿವೆ. ಇವು ಆರಂಭದಲ್ಲಿ ಅಸಮಾಧಾನದ ಸಣ್ಣ ಮಾತುಗಳಾಗಿದ್ದವು, ಆದರೆ ಬಿಹಾರದ ಚುನಾವಣೆಯಲ್ಲಿ ಮಹಾಘಟಬಂಧನದ ಹೀನಾಯ ಸೋಲಿನ … Continued

‘ಕೊಳಕು ಮೂತ್ರಪಿಂಡ, ನಿಂದನೆ, ದೌರ್ಜನ್ಯ….’: ಕುಟುಂಬದ ಜೊತೆ ಸಂಬಂಧ ಕಡಿದುಕೊಂಡ ಲಾಲು ಪುತ್ರಿಯಿಂದ ಆಘಾತಕಾರಿ ಆರೋಪಗಳು…!

ನವದೆಹಲಿ: ತನ್ನ ಕುಟುಂಬ ಮತ್ತು ರಾಷ್ಟ್ರೀಯ ಜನತಾ ದಳ (RJD) ಪಕ್ಷದೊಂದಿಗಿನ ಸಂಬಂಧವನ್ನು ಕಡಿದುಕೊಂಡ ಒಂದು ದಿನದ ನಂತರ, ಆರ್‌ಜೆಡಿ (RJD) ಮುಖ್ಯಸ್ಥ ಲಾಲು ಪ್ರಸಾದ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ಮೇಲೆ ವಿನಾಕಾರಣ ಅವಮಾನ, ನಿಂದನೆ ಮತ್ತು “ಕೊಳೆತ ಕಿಡ್ನಿ” ಎಂದು ಕರೆಯುವಂತಹ ಕೆಟ್ಟ ವರ್ತನೆ ತೋರಲಾಗಿದೆ ಎಂದು ಗಂಭೀರ ಆರೋಪ … Continued

ಬಿಹಾರ ಚುನಾವಣೆ : ರೋಚಕ ಗೆಲುವು ಕಂಡ 5 ಕ್ಷೇತ್ರಗಳು ; ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು…!

ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (NDA) ಇದು ಒಂದು ಮಹತ್ವದ ದಿನವಾಗಿದೆ. ರಾಜ್ಯದ ಒಟ್ಟು 243 ಸ್ಥಾನಗಳ ಪೈಕಿ ಎನ್‌ಡಿ ಮೈತ್ರಿಕೂಟವು 202 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ ಅಥವಾ ಗೆಲುವು ಸಾಧಿಸಿದೆ. ಆದಾಗ್ಯೂ, ಕೆಲವು ಅಭ್ಯರ್ಥಿಗಳಿಗೆ ಸ್ಪರ್ಧೆಯು ಕೊನೆಯ ಕ್ಷಣದವರೆಗೂ ರೋಚಕವಾಗಿತ್ತು. ಸಂದೇಶ್ (Sandesh) ಕ್ಷೇತ್ರದ ಸ್ಪರ್ಧೆಯು ಬಿಹಾರದಲ್ಲಿ ಅತ್ಯಂತ ರೋಚಕವಾಗಿತ್ತು. ಯಾಕೆಂದರೆ, ಅಲ್ಲಿ ಜೆಡಿ(ಯು) ಅಭ್ಯರ್ಥಿ … Continued

ಬಿಹಾರ ಚುನಾವಣೆ: ಇಂಡಿ ಬ್ಲಾಕ್‌ ನ ‘ಎಂವೈ’ ಸೂತ್ರಕ್ಕೆ ‘ಎಂವೈಇ’ ಸೂತ್ರ ಬಳಸಿ ಭರ್ಜರಿ ಗೆಲುವು ಸಾಧಿಸಿದ ಎನ್‌ಡಿಎ ; ಏನಿದು ಎಂವೈಇ..?

 ಪಾಟ್ನಾ: ಬಿಹಾರದ ರಾಜಕಾರಣದಲ್ಲಿ ಸುಮಾರು ಮೂರು ದಶಕಗಳ ಕಾಲ ಲಾಲು ಪ್ರಸಾದ ಯಾದವ್ ಅವರ ಆರ್‌ಜೆಡಿ ಪಕ್ಷದ ಏಳಿಗೆಗೆ ಶಕ್ತಿಯಾಗಿದ್ದ ‘ಎಂವೈ’ (ಮುಸ್ಲಿಂ-ಯಾದವ್) ಸಮೀಕರಣವು ಈಗ ಬದಲಾಗಿದೆ. 2025ರ ಬಿಹಾರ ಚುನಾವಣೆಯಲ್ಲಿ, ಹೊಸ ‘ಎಂವೈಇ’ (ಮಹಿಳೆ, ಯುವಜನತೆ ಮತ್ತು ಅತಿ ಹಿಂದುಳಿದ ವರ್ಗ-EBC) ಸಮೀಕರಣವು ಹೊರಹೊಮ್ಮಿದ್ದು, ಇದು ಈ ಸಲದ ಚುನಾವಣೆಯಲ್ಲಿ ಎನ್‌ಡಿಎಗೆ ಅಭೂತಪೂರ್ವ ಜಯ … Continued

ಬಿಹಾರ ಫಲಿತಾಂಶ ; ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಎನ್‌ ಡಿಎ ; ಇಂಡಿಯಾ ಬ್ಲಾಕ್‌ ಧೂಳೀಪಟ ; ಎಕ್ಸಿಟ್‌ ಪೋಲ್‌ಗಳೂ ತಲೆಕೆಳಗು

ಪಾಟ್ನಾ /ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದ್ದು, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA)ವು ತಾನು ನಿಗದಿಪಡಿಸಿದ್ದ ‘160 ಪಾರ್’ (160ಕ್ಕೂ ಹೆಚ್ಚು) ಗುರಿಯನ್ನು ಸಲೀಸಾಗಿ ದಾಟಿ, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಸಾಗುತ್ತಿದೆ.. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನಕ್ಕೆ (ಮಹಾ ಮೈತ್ರಿಕೂಟ) ತೀವ್ರ … Continued

ಬಿಹಾರ ವಿಧಾನಸಭಾ ಚುನಾವಣೆ : ರಾಘೋಪುರ ಕ್ಷೇತ್ರದಲ್ಲಿ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವಗೆ ಹಿನ್ನಡೆ

ಪಾಟ್ನಾ : ಬಿಹಾರದ ಚುನಾವಣೆಯಲ್ಲಿ ಬಹಳ ದೊಡ್ಡ ಬುಡಮೇಲು ಫಲಿತಾಂಶ ಆಗಲಿದೆಯೇ..? ಆರ್‌ಜೆಡಿ ಮುಖ್ಯಸ್ಥ ಹಾಗೂ ಮಹಾಘಟಬಂಧನದ ಮುಖ್ಯಮಂತ್ರಿ ಮುಖವಾಗಿದ್ದ ತೇಜಸ್ವಿ ಯಾದವ್ ಅವರು ರಾಘೋಪುರ ಕ್ಷೇತ್ರದಲ್ಲಿ ಬಿಜೆಪಿಯ ಸತೀಶಕುಮಾರ ಯಾದವ್ ಅವರ ವಿರುದ್ಧದ ಸ್ಪರ್ಧೆಯಲ್ಲಿ ಹಿಂದಿ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಬೆಳಿಗ್ಗೆ 11:10 ಕ್ಕೆ ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ರಾಘೋಪುರ ಸ್ಥಾನದಲ್ಲಿ … Continued

ಬಿಹಾರ ಚುನಾವಣಾ ಫಲಿತಾಂಶ : ಭಾರೀ ಗೆಲುವಿನತ್ತ ಎನ್‌ ಡಿಎ, ಮಹಾಘಟಬಂಧನಕ್ಕೆ ಹಿನ್ನಡೆ

ಪಾಟ್ನಾ : ಬಿಹಾರದ ಬಹು ನಿರೀಕ್ಷಿತ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಭಾರೀ ಮುನ್ನಡೆ ಸಾಧಿಸಿದೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ (Mahagathbandhan) ಹಿನ್ನಡೆಯಲ್ಲಿದೆ. ಬಿಹಾರದಲ್ಲಿ ಬಹುತೇಕ ಎಲ್ಲಾ ಚುನಾವಣಾ ಸಮೀಕ್ಷೆಗಳು (Exit Polls) ಎನ್‌ಡಿಎಗೆ ಸ್ಪಷ್ಟ ಮುನ್ನಡೆ … Continued

ಬಿಹಾರ ವಿಧಾನಸಭಾ ಚುನಾವಣೆ : ಮೊದಲ ಹಂತದಲ್ಲಿ ದಾಖಲೆ ಮತದಾನ, ಲಾಭ ಯಾರಿಗೆ..?

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ (ನವೆಂಬರ್‌ 6) ಮುಕ್ತಾಯಗೊಂಡಿದ್ದು, ಶೇ. 64.66 ರಷ್ಟು ಮತದಾನ ನಡೆದಿದೆ. ಈ ಮತದಾನದ ಪ್ರಮಾಣವು ಬಿಹಾರದ ಚುನಾವಣಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಪ್ರಸ್ತುತ ಮತದಾನದ ಪ್ರಮಾಣವು ಈ ಹಿಂದೆ 2000ರ ವಿಧಾನಸಭಾ ಚುನಾವಣೆಯಲ್ಲಿ ದಾಖಲಾಗಿದ್ದ ಶೇ. 62.57 ರ ಹಿಂದಿನ ದಾಖಲೆಯನ್ನು … Continued

ವೀಡಿಯೊ…| ಬಿಹಾರದ ಚುನಾವಣಾ ಪ್ರಚಾರದ ವೇಳೆ ಕೆರೆಗೆ ಜಿಗಿದು ಮೀನು ಹಿಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಕಾವೇರುತ್ತಿದ್ದು, ಆಡಳಿತಾರೂಢ ಎನ್‌ಡಿಎ ಮತ್ತು ಮಹಾಘಟಬಂಧನ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಬಲ್ಲ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್‌ 6 ಮತ್ತು 2ನೇ ಹಂತದ ಮತದಾನ ನವೆಂಬರ್‌ 11ರಂದು ನಡೆಯಲಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯುವ ನಾನಾ ಕಸರತ್ತಿನಲ್ಲಿ ನಿರತವಾಗಿವೆ. ಈ ಮಧ್ಯೆ ಬೇಗುಸರಾಯ್‌ನ (Begusarai) ಕೊಳವೊಂದಕ್ಕೆ ಹಾರಿದ … Continued

ಬಿಹಾರ ಚುನಾವಣೆ | 2 ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ : ಪ್ರಶಾಂತ ಕಿಶೋರಗೆ ಚುನಾವಣಾ ಆಯೋಗ ನೋಟಿಸ್‌

ನವದೆಹಲಿ: ಬಿಹಾರ ಮತ್ತು ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರ ಗುರುತಿನ ಕಾರ್ಡ್‌ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ ಕಿಶೋರ ಅವರಿಗೆ ನೋಟಿಸ್ ಜಾರಿ ಮಾಡಿದೆ. ಪಶ್ಚಿಮ ಬಂಗಾಳ ಮತ್ತು ಬಿಹಾರದ ಮತದಾರರ ಪಟ್ಟಿಯಲ್ಲಿ ಪ್ರಶಾಂತ ಕಿಶೋರ ಅವರ ಹೆಸರು ಕಾಣಿಸಿಕೊಂಡಿದೆ. ಬಿಹಾರ ವಿಧಾನಸಭಾ … Continued