ವಿಧಾನ ಪರಿಷತ್ ಚುನಾವಣೆ: ನಿತೀಶ ಪುತ್ರ ನಿಶಾಂತಕುಮಾರಗೆ ಟಿಕೆಟ್‌ ನೀಡಿದ ಜೆಡಿಯು

ಪಾಟ್ನಾ: ಬಿಹಾರದ ಆಡಳಿತಾರೂಢ  ಅಂಗಪಕ್ಷವಾದ ಜನತಾ ದಳ (ಯುನೈಟೆಡ್) ಪಕ್ಷವು 2026ರ ಬಿಹಾರ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಹಾಗೂ ಒಂದು ಸ್ಥಾನದ ಉಪಚುನಾವಣೆಗೆ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಜೆಡಿಯು ಬಿಹಾರ ರಾಜ್ಯ ಘಟಕದ ಅಧ್ಯಕ್ಷ ಉಮೇಶ ಸಿಂಗ್ ಕುಶ್ವಾಹಾ ಅವರ ಸಹಿ ಇರುವ ಅಧಿಕೃತ ಅಧಿಸೂಚನೆಯ ಮೂಲಕ ಅಭ್ಯರ್ಥಿಗಳ ಹೆಸರನ್ನು … Continued

ಬಿಹಾರದಲ್ಲಿ ನಿತೀಶ ಆಡಳಿತ ಅಂತ್ಯ : ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಸಿಎಂ ಆಗಿ ಆಯ್ಕೆ..!

ಪಾಟ್ನಾ: ಬಿಹಾರ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಯ ನಾಯಕರೊಬ್ಬರು ಮುಖ್ಯಮಂತ್ರಿ ಪಟ್ಟಕ್ಕೇರುವುದು ಈಗ ಅಧಿಕೃತಗೊಂಡಿದೆ. ಬಿಜೆಪಿಯ ಹಿರಿಯ ನಾಯಕ ಸಾಮ್ರಾಟ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಮೂಲಗಳ ಪ್ರಕಾರ, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭವು ಬುಧವಾರ (ಏ.೧೫) ನಡೆಯುವ ಸಾಧ್ಯತೆಯಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಪಾಟ್ನಾಕ್ಕೆ ಭೇಟಿ … Continued

ನಳಂದಾ : ದೇವಸ್ಥಾನದಲ್ಲಿ ಕಾಲ್ತುಳಿತ, 8 ಮಹಿಳಾ ಭಕ್ತರ ಸಾವು, ಹಲವರಿಗೆ ಗಾಯ

ಪಾಟ್ನಾ: ಬಿಹಾರದ ನಳಂದಾ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಮಂಗಳವಾರ ನಡೆದ ಭೀಕರ ಕಾಲ್ತುಳಿತದಲ್ಲಿ ಎಂಟು ಮಂದಿ ಮಹಿಳಾ ಭಕ್ತರು ಸಾವಿಗೀಡಾಗಿದ್ದಾರೆ ಮತ್ತು ೧೨ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ದುರಂತವು ಬಿಹಾರ ಶರೀಫ್‌ನಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಮಘರಾ ಗ್ರಾಮದ ಮಾತಾ ಶೀತಲಾ ದೇವಸ್ಥಾನದಲ್ಲಿ ನಡೆದಿದೆ. ಚೈತ್ರ ಮಾಸದ ಕೊನೆಯ ಮಂಗಳವಾರವಾದ್ದರಿಂದ ದೇವಸ್ಥಾನದಲ್ಲಿ ಭಕ್ತರ ಭಾರೀ … Continued

ಬಿಹಾರದಲ್ಲಿ ಹೊಸ ನಾಯಕತ್ವಕ್ಕೆ ದಾರಿ: ಪರಿಷತ್ ಸದಸ್ಯತ್ವಕ್ಕೆ ನಿತೀಶಕುಮಾರ ರಾಜೀನಾಮೆ

ಪಾಟ್ನಾ: ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶಕುಮಾರ ಸೋಮವಾರ (ಮಾರ್ಚ್ 30) ತಮ್ಮ ಬಿಹಾರ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ತಿಂಗಳ ಆರಂಭದಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾರ್ಚ್ 16 ರಂದು ನಿತೀಶಕುಮಾರ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. … Continued

ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ : ಜೆಡಿಯು ಸೇರಲಿರುವ ನಿತೀಶ ಪುತ್ರ ನಿಶಾಂತ; ಮುಂದಿನ ಡಿಸಿಎಂ ?

ಪಾಟ್ನಾ: ಬಿಹಾರದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ನಿತೀಶಕುಮಾರ ಅವರ ಪುತ್ರ ನಿಶಾಂತಕುಮಾರ ಅವರು ಶನಿವಾರ ಅಧಿಕೃತವಾಗಿ ಜನತಾ ದಳ (ಯುನೈಟೆಡ್) ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಅಷ್ಟೇ ಅಲ್ಲದೆ, ಅವರು ಬಿಹಾರದ ಮುಂದಿನ ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸಂಜಯ ಕುಮಾರ ಝಾ ಶುಕ್ರವಾರ ನಡೆದ ಪ್ರಮುಖ ಸಭೆಯಲ್ಲಿ ಸುಳಿವು ನೀಡಿದ್ದಾರೆ. ನಿತೀಶಕುಮಾರ ಅವರು … Continued

ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆ : ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸಿಎಂ ನಿತೀಶಕುಮಾರ…!

ಪಾಟ್ನಾ: ಬಿಹಾರದಲ್ಲಿ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ಜೆಡಿಯು (JD-U) ಅಧ್ಯಕ್ಷ ನಿತೀಶಕುಮಾರ ಅವರು ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸುಮಾರು ಎರಡು ದಶಕಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಂತರ, ಅವರು ಇಂದು, ಗುರುವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಸಕ್ರಿಯ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದಾರೆ. ಅವರು ರಾಜ್ಯಸಭೆಗೆ … Continued

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ ರಾಜೀನಾಮೆ ಸಾಧ್ಯತೆ : ಪುತ್ರನ ರಾಜಕೀಯ ಪ್ರವೇಶಕ್ಕೆ ತಯಾರಿ, ನಿಶಾಂತಗೆ ಉಪಮುಖ್ಯಮಂತ್ರಿ ಪಟ್ಟ ?

ನವದೆಹಲಿ: ಕಳೆದ ವರ್ಷ ಹತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿತೀಶಕುಮಾರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ವರದಿಯಾಗಿದೆ. ನಿತೀಶ ಅವರು ತಮ್ಮ ಮಗ ನಿಶಾಂತ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ನಡೆಯ ಭಾಗ ಇದು ಎಂದು ಹೇಳಲಾಗುತ್ತಿದೆ. ನಿತೀಶ ಅವರು ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಗೆ ಹಸ್ತಾಂತರಿಸಿ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ವರದಿಯಾಗಿದೆ. ನಿಶಾಂತ ಅವರ … Continued

ಮದುವೆ ನಡೆಯುತ್ತಿದ್ದಾಗಲೇ ಮದುಮಗಳ ಮೇಲೆ ಗುಂಡಿನ ದಾಳಿ

ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ, ‘ಜೈಮಾಲಾ’ ಕಾರ್ಯಕ್ರಮದ ವೇಳೆ ವಧುವಿನ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಪರಾರಿಯಾದ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯು ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೌಸಾ ನಗರ ಪಂಚಾಯತ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ವರನ ಕಡೆಯವರು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಿಂದ ಮೆರವಣಿಗೆಯೊಂದಿಗೆ … Continued

ಸ್ಟೇಜ್ ಕಾರ್ಯಕ್ರಮದ ವೇಳೆ ನರ್ತಕಿಗೆ ಬಲವಂತವಾಗಿ ನಾಣ್ಯ ನುಂಗಿಸಿದ ಕಿರಾತಕರು ; ಕಲಾವಿದೆಯ ಸ್ಥಿತಿ ಗಂಭೀರ

ಅರಾ (ಬಿಹಾರ): ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಬ್ಬರಿಗೆ ಪ್ರೇಕ್ಷಕರು ಬಲವಂತವಾಗಿ ನಾಣ್ಯಗಳನ್ನು ನುಂಗಿಸಿದ ಅಮಾನವೀಯ ಘಟನೆ ಬಿಹಾರದ ಭೋಜಪುರ ಜಿಲ್ಲೆಯ ಚಾಂದ್ವಾ ತೋಲಾ ಪ್ರದೇಶದಲ್ಲಿ ನಡೆದಿದೆ. ನಾಣ್ಯ ನುಂಗಿದ್ದರಿಂದ ನರ್ತಕಿಯ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಚಾಂದ್ವಾ ತೋಲಾದಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ … Continued