ದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯ

ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಅಶೋಕಧಾಮ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಂತಹ ಘಟನೆಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪವಿತ್ರ ಶ್ರಾವಣ ಮಾಸದ ಸೋಮವಾರದ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ಶಿವನ ದರ್ಶನ ಹಾಗೂ ಪೂಜೆ ಸಲ್ಲಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಜಿಲ್ಲಾಧಿಕಾರಿ … Continued

ಬೀದರ ಎಟಿಎಂ ದರೋಡೆ ಪ್ರಕರಣ ; 19 ತಿಂಗಳ ಬಳಿಕ ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ

ಬೀದರ: ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿದ್ದ ಬೀದರ ಎಟಿಎಂ ದರೋಡೆ ಹಾಗೂ ವ್ಯಾನ್ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 19 ತಿಂಗಳ ನಂತರ ಪೊಲೀಸರು ಕೊನೆಗೂ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ್ದಾರೆ. ದರೋಡೆ ಮತ್ತು ಕೊಲೆ ಪ್ರಕರಣದ ಆರೋಪಿಗಳಾದ ಬಿಹಾರದ ವೈಶಾಲಿ ಜಿಲ್ಲೆಯ ಫತೇಪುರ್ ಫುಲ್ವಾರಿಯಾ ನಿವಾಸಿ ಅಮನ್ ಕುಮಾರ ಮತ್ತು ಬಿಹಾರದ … Continued

ಬಂಕಿಪುರದಲ್ಲಿ ಪ್ರಶಾಂತ ಕಿಶೋರ ಐತಿಹಾಸಿಕ ಗೆಲುವು : ಬಿಜೆಪಿ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಅದರ ಭದ್ರಕೋಟೆ ಭೇದಿಸಿದ್ದು ಹೇಗೆ ?

ಭಾರತದ ಅತ್ಯಂತ ಬೇಡಿಕೆಯ ರಾಜಕೀಯ ತಂತ್ರಜ್ಞರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಜನ ಸುರಾಜ್ ಸಂಸ್ಥಾಪಕ ಪ್ರಶಾಂತ ಕಿಶೋರ ಅವರು, ಇದೀಗ ರಾಜಕೀಯ ರಣತಂತ್ರ ರೂಪಿಸುವ ವ್ಯಕ್ತಿಯಿಂದ ನೇರವಾಗಿ ಚುನಾವಣಾ ಕಣಕ್ಕಿಳಿದು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಜೆಪಿಯು ಸುಮಾರು ಮೂರು ದಶಕಗಳಿಂದ ತನ್ನ ಭದ್ರಕೋಟೆಯಾಗಿ ಉಳಿಸಿಕೊಂಡಿದ್ದ ಬಂಕಿಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ ಪ್ರಶಾಂತ ಕಿಶೋರ, ಬಿಜೆಪಿ ರಾಷ್ಟ್ರೀಯ … Continued

ವಿಡಿಯೋ | ಭತ್ತದ ಗದ್ದೆಗೆ ಬಂದ ಬೃಹತ್‌ ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಪೊಲೀಸ್ ಠಾಣೆಗೆ ತಂದ ರೈತ….!

ಸುಪೌಲ್ (ಬಿಹಾರ): ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ರೈತರೊಬ್ಬರು ಸುಮಾರು ಐದು ಅಡಿಗಳಷ್ಟು ಉದ್ದದ ಜೀವಂತ ಮೊಸಳೆಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿರುವ ಅಪರೂಪದ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಭತ್ತದ ಗದ್ದೆಯಲ್ಲಿ ಕಾಣಿಸಿಕೊಂಡ ಈ ಮೊಸಳೆಯನ್ನು ಸ್ಥಳೀಯರು ಅತ್ಯಂತ ಧೈರ್ಯ ತೋರಿ ಯಾವುದೇ ಅಪಾಯವಾಗದಂತೆ ರಕ್ಷಿಸಿ, ನಂತರ … Continued

ಊಟ ಬಡಿಸಲು ತಡವಾಗಿದ್ದಕ್ಕೆ ಅತ್ತಿಗೆ ತಲೆಯನ್ನೇ ಕತ್ತರಿಸಿ ಮರಕ್ಕೆ ನೇತು ಹಾಕಿದ ಮೈದುನ !

ಪಾಟ್ನಾ : ಊಟ ಬಡಿಸಲು ತಡವಾಯಿತು ಎಂಬ ಕಾರಣಕ್ಕೆ ಮಹಿಳೆಯನ್ನು ಆಕೆಯ ಮೈದುನನೇ (ಗಂಡನ ಸಹೋದರ) ಕೊಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಿಹಾರದ ಜಹಾನಾಬಾದ್ ಜಿಲ್ಲೆಯ ಪರ್ಸಾಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯ ಚೈನ್‌ಪುರಾ ಇಮಾದ್‌ಪುರ ಗ್ರಾಮದಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ಮಹಿಳೆಯನ್ನು ಅನ್ಶುದೇವಿ … Continued

ವಿಡಿಯೊ | ವಿದ್ಯಾರ್ಥಿಗಳ ಮೇಲೆ ಎಕೆ-47ನಿಂದ ಗುಂಡು ಹಾರಿಸಿದ ಆರೋಪ: ಪೊಲೀಸ್ ಸಿಬ್ಬಂದಿ ಅಮಾನತು

ಪಾಟ್ನಾ : ಜುಲೈ 25ರಂದು ನಡೆದ ‘ಬಿಹಾರ ಬಂದ್‌ʼ ವೇಳೆ ಸಿವಾನ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ವೈರಲ್ ಆದ ವಿಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಬಿಹಾರ ಪೊಲೀಸ್ ಇಲಾಖೆಯು ಸಂಬಂಧಿತ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ರಾಜ್ಯವ್ಯಾಪಿ ನಡೆದ ಬಿಹಾರ ಬಂದ್ ವೇಳೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಲವು … Continued

ಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ; ಲಾಲುಪ್ರಸಾದ ಪುತ್ರ ತೇಜ್ ಪ್ರತಾಪ ಯಾದವ್ ಬಂಧನ

ಪಾಟ್ನಾ: ಜನಶಕ್ತಿ ಜನತಾದಳ (ಜೆಎಸ್‌ಜೆಡಿ) ಮುಖ್ಯಸ್ಥ ತೇಜ್ ಪ್ರತಾಪ ಯಾದವ್ ಅವರನ್ನು ಶನಿವಾರ ಸಂಜೆ ಪಾಟ್ನಾ ಪೊಲೀಸರು ಬಂಧಿಸಿದರು. ನೀಟ್ ಪತ್ರಿಕೆ ಸೋರಿಕೆ ಆರೋಪದ ಮೇಲೆ ಬಿಹಾರ ಬಂದ್‌ನ ಭಾಗವಾಗಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಅವರನ್ನು ಸ್ವಲ್ಪ ಸಮಯ ಬಂಧಿಸಿ ಬಿಡುಗಡೆ ಮಾಡಿದ ಗಂಟೆಗಳ ನಂತರ ಅವರನ್ನು ಶನಿವಾರ ಸಂಜೆ ಬಂಧಿಸಲಾಯಿತು. ತೇಜ್ ಪ್ರತಾಪ ಅವರು … Continued

ವಿಧಾನ ಪರಿಷತ್ ಚುನಾವಣೆ: ನಿತೀಶ ಪುತ್ರ ನಿಶಾಂತಕುಮಾರಗೆ ಟಿಕೆಟ್‌ ನೀಡಿದ ಜೆಡಿಯು

ಪಾಟ್ನಾ: ಬಿಹಾರದ ಆಡಳಿತಾರೂಢ  ಅಂಗಪಕ್ಷವಾದ ಜನತಾ ದಳ (ಯುನೈಟೆಡ್) ಪಕ್ಷವು 2026ರ ಬಿಹಾರ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಹಾಗೂ ಒಂದು ಸ್ಥಾನದ ಉಪಚುನಾವಣೆಗೆ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಜೆಡಿಯು ಬಿಹಾರ ರಾಜ್ಯ ಘಟಕದ ಅಧ್ಯಕ್ಷ ಉಮೇಶ ಸಿಂಗ್ ಕುಶ್ವಾಹಾ ಅವರ ಸಹಿ ಇರುವ ಅಧಿಕೃತ ಅಧಿಸೂಚನೆಯ ಮೂಲಕ ಅಭ್ಯರ್ಥಿಗಳ ಹೆಸರನ್ನು … Continued

ಬಿಹಾರದಲ್ಲಿ ನಿತೀಶ ಆಡಳಿತ ಅಂತ್ಯ : ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಸಿಎಂ ಆಗಿ ಆಯ್ಕೆ..!

ಪಾಟ್ನಾ: ಬಿಹಾರ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಯ ನಾಯಕರೊಬ್ಬರು ಮುಖ್ಯಮಂತ್ರಿ ಪಟ್ಟಕ್ಕೇರುವುದು ಈಗ ಅಧಿಕೃತಗೊಂಡಿದೆ. ಬಿಜೆಪಿಯ ಹಿರಿಯ ನಾಯಕ ಸಾಮ್ರಾಟ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಮೂಲಗಳ ಪ್ರಕಾರ, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭವು ಬುಧವಾರ (ಏ.೧೫) ನಡೆಯುವ ಸಾಧ್ಯತೆಯಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಪಾಟ್ನಾಕ್ಕೆ ಭೇಟಿ … Continued