ವೀಡಿಯೊಗಳು : ಪೇಟ ಧರಿಸಿ ಐತಿಹಾಸಿಕ ಪಾಟ್ನಾ ಗುರುದ್ವಾರದಲ್ಲಿ ಭಕ್ತರಿಗೆ ಊಟ ಬಡಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಮೇ 13) ಪಾಟ್ನಾದ ಐತಿಹಾಸಿಕ ತಖತ್ ಶ್ರೀ ಹರಿಮಂದಿರ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದರು ಮತ್ತು ಸಾಮೂಹಿಕ ಭೋಜನದಲ್ಲಿ ಸಿಖ್ ಭಕ್ತರಿಗೆ ಊಟ ಬಡಿಸಿದ್ದಾರೆ. ಕೇಸರಿ ಪೇಟವನ್ನು ಧರಿಸಿ ಮತ್ತು ಖೀರ್ ಪಾತ್ರೆ ಹಿಡಿದು ಆಗಮಿಸಿದ ಪ್ರಧಾನಿ ಮೋದಿ ಶ್ರೀ ಗುರು ಗೋವಿಂದ ಸಿಂಗ್ ಅವರ … Continued

ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

ಪಾಟ್ನಾ : ಬಿಹಾರದ ಸಮಸ್ತಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಖರ್ಗೆ ಅವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೇಶ ರಾಥೋರ ಅವರು ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಚುನಾವಣಾಧಿಕಾರಿಗಳು ಗುರಿಯಾಗಿಸುತ್ತಿದ್ದಾರೆ. ಬಿಜೆಪಿ ನೇತೃತ್ವದ ಎನ್‍ಡಿಎ ನಾಯಕರಿಗೆ ಮಾತ್ರ ಮುಕ್ತವಾಗಿ … Continued

ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

ಪಾಟ್ನಾ : ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇಲ್ನೋಟಕ್ಕೆ, ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಂತೆ ತೋರುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಬೆಂಕಿಯನ್ನು ನಂದಿಸಲಾಗಿದೆ. ಮೃತರಲ್ಲಿ ಮೂವರು ಪುರುಷರು ಹಾಗೂ ಮೂವರು … Continued

ಲೋಕಸಭೆ ಚುನಾವಣೆ: ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ; ಆರ್‌ಜೆಡಿ 26, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಸ್ಪರ್ಧೆ

ನವದೆಹಲಿ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ಲೋಕಸಭೆ ಚುನಾವಣೆಗೆ ಶುಕ್ರವಾರ ತನ್ನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದೆ. ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ 26 ರಲ್ಲಿ ಆರ್‌ಜೆಡಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಒಂಬತ್ತು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಎಡಪಕ್ಷಗಳಿಗೆ ಐದು ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಕತಿಹಾರ್, ಕಿಶನ್‌ಗಂಜ್, ಪಾಟ್ನಾ ಸಾಹಿಬ್, ಸಸಾರಾಮ್, ಭಾಗಲ್ಪುರ, ಪಶ್ಚಿಮ ಚಂಪಾರಣ್, ಮುಜಾಫರಪುರ, … Continued

ಲೋಕಸಭೆ ಚುನಾವಣೆ : ಬಿಹಾರದಲ್ಲಿ ಎನ್‌ ಡಿ ಎ ಸೀಟು ಹಂಚಿಕೆ ಅಂತಿಮ ; ಈ ಬಾರಿ ಬಿಜೆಪಿಯೇ ದೊಡ್ಡಣ್ಣ…ಆ ಸ್ಥಾನ ಬಿಟ್ಟುಕೊಟ್ಟ ಜೆಡಿಯು…!

ನವದೆಹಲಿ: ಎನ್‌ಡಿಎ ಸೋಮವಾರ ಸಂಜೆ ಬಿಹಾರದಲ್ಲಿ ತನ್ನ ಸೀಟು ಹಂಚಿಕೆ ಸೂತ್ರವನ್ನು ಔಪಚಾರಿಕವಾಗಿ ಪ್ರಕಟಿಸಿದ್ದು, ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಅದನ್ನು ‘ದೊಡ್ಡಣ್ಣ’ನ ಸ್ಥಾನದಲ್ಲಿ ಇರಿಸಿದೆ. ಬಿಹಾರದಲ್ಲಿ ಈ ಹಿಂದೆ ಮೈತ್ರಿಕೂಟದಲ್ಲಿ ದೊಡ್ಡಣ್ಣನ ಸ್ಥಾನ ಪಡೆದಿದ್ದ ಮುಖ್ಯಮಂತ್ರಿ ನಿತೀಶಕುಮಾರ ಅವರ ಜೆಡಿಯು ಪಕ್ಷವು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಚಿರಾಗ ಪಾಸ್ವಾನ್ ಅವರ ಲೋಕ ಜನಶಕ್ತಿ … Continued

ಲೋಕಸಭೆ ಚುನಾವಣೆ : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪಶ್ಚಿಮ ಬಂಗಾಳದ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ಸೂಚನೆ ನೀಡಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗವು ಆದೇಶಿಸಿದೆ. ಹೆಚ್ಚುವರಿಯಾಗಿ, ಚುನಾವಣಾ ಸಮಿತಿಯು … Continued

ವೀಡಿಯೊ..| ಆರೋಪಿಗಳನ್ನು ಕೋರ್ಟ್‌ಗೆ ಕರೆದೊಯ್ಯುವಾಗ ಪೆಟ್ರೋಲ್‌ ಖಾಲಿ : ಆರೋಪಿಗಳಿಂದ ಅರ್ಧ ಕಿಮೀ ವಾಹನ ತಳ್ಳಿಸಿದ ಪೊಲೀಸರು…!

ಒಂದು ವಿಲಕ್ಷಣ ಘಟನೆಯಲ್ಲಿ, ವಾಹನದಲ್ಲಿ ಇಂಧನ ಖಾಲಿಯಾದ ನಂತರ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ನಾಲ್ವರು ಆರೋಪಿಗಳು ಪೊಲೀಸ್ ವ್ಯಾನ್ ಅನ್ನು ನ್ಯಾಯಾಲಯದ ವರೆಗೂ ತಳ್ಳಿದ್ದಾರೆ ಎಂದು ವರದಿಯಾಗಿದೆ. ಕೈದಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ವಾಹನದಲ್ಲಿ ಇಂಧನ ಖಾಲಿಯಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದ್ದು, ವೀಡಿಯೊದಲ್ಲಿ, ನಾಲ್ವರು ಆರೋಪಿಗಳು  … Continued

ನೂತನ ಮೈತ್ರಿಕೂಟ ಸರ್ಕಾರದ ಬಿಹಾರ ಸಿಎಂ ಆಗಿ 9 ನೇ ಬಾರಿಗೆ ನಿತೀಶಕುಮಾರ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಬಿಹಾರದ ನೂತನ ಮೈತ್ರಿಕೂಟದ ಸರ್ಕಾರದ ಮುಖ್ಯಮಂತ್ರಿಯಾಗಿ ಭಾನುವಾರ 9ನೇ ಬಾರಿಗೆ ನಿತೀಶಕುಮಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ ಜೊತೆಗೆ ಜನತಾ ದಳ (ಯುನೈಟೆಡ್) ನಾಯಕರಾದ ವಿಜಯಕುಮಾರ ಚೌಧರಿ, ಬಿಜೇಂದ್ರ ಪ್ರಸಾದ ಯಾದವ್ ಮತ್ತು ಶ್ರವೋನಕುಮಾರ ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ನಾಯಕರಾದ ಸಾಮ್ರಾಟ ಚೌಧರಿ, ಡಾ ಪ್ರೇಮಕುಮಾರ ಮತ್ತು … Continued

ನಿತೀಶ ಸಂಪುಟದಲ್ಲಿ ಬಿಜೆಪಿಯ ಸಾಮ್ರಾಟ ಚೌಧರಿ, ವಿಜಯ ಸಿನ್ಹಾ ಬಿಹಾರದ ನೂತನ ಉಪಮುಖ್ಯಮಂತ್ರಿಗಳು…!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಭಾನುವಾರ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗೆ ಸೇರಿಕೊಂಡು ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟವು ಈಗ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ … Continued

ಬಿಹಾರದಲ್ಲಿ ರಾಜಕೀಯ ಬೆಳವಣಿಗೆ :ಸಿಎಂ ಸ್ಥಾನಕ್ಕೆ ನಿತೀಶಕುಮಾರ ರಾಜೀನಾಮೆ, ಇಂದು ಸಂಜೆ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ..!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶಕುಮಾರ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿನ ಎಲ್ಲಾ ವದಂತಿಗಳಿಗೆ ತೆರೆಬಿದ್ದಿದೆ. ಅವರು ಇಂದು, ಭಾನುವಾರ ಸಂಜೆ ಅಥವಾ ನಾಳೆ ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇಂದು, ಭಾನುವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ … Continued