ಚುನಾವಣೆಗೆ ಮೂರು ದಿನಗಳ ಮೊದಲು ಬಿಜೆಪಿ ನಾಯಕನ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನಕ್ಕೆ ಮೂರು ದಿನಗಳ ಮೊದಲು ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಿಜೆಪಿ ನಾಯಕ ರತನ್ ದುಬೆ ಅವರು ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದರು. ಜಿಲ್ಲೆಯ ಕೌಶಲನರ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. ರತನ್‌ ದುಬೆ ಅವರು ಜಿಲ್ಲಾ … Continued

ಈಗಲೂ ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸ್ತಾರೆ ಕೆಲವು ಜನಪ್ರತಿನಿಧಿಗಳು : ಬಿಜೆಪಿ ನಾಯಕನ ಅಸಮಾಧಾನ

ಬಾರಾಬಂಕಿ (ಉತ್ತರ ಪ್ರದೇಶ) : ಶಾಸಕರು ಮತ್ತು ಸಂಸದರ ವಿರುದ್ಧ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಪ್ರತಿನಿಧಿಗಳಾದ ನಂತರವೂ ಕೆಲವರು ಅಧಿಕಾರಿಗಳನ್ನು “ಸರ್” ಎಂದು ಸಂಬೋಧಿಸುವ ಅಭ್ಯಾಸವನ್ನು ತೊಡೆದುಹಾಕಲಿಲ್ಲ ಎಂದು ಅವರು ಹೇಳಿದ್ದಾರೆ. ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು, ಕೆಲವು ನಾಯಕರು ಅಧಿಕಾರಿಗಳ … Continued

ಪ್ರಮೋದ ಮುತಾಲಿಕ್‌, ಯಶಪಾಲ್‌ ತಲೆ ಕಡಿದರೆ 20 ಲಕ್ಷ ರೂ.: ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಬೆದರಿಕೆ..!

ಉಡುಪಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹಾಗೂ ಯಶಪಾಲ್‌ ಸುವರ್ಣ ಅವರ ತಲೆ ಕಡಿದರೆ 20 ಲಕ್ಷ ರೂ.ಗಳನ್ನು ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಓಪನ್‌ ಬೆದರಿಕೆ ಹಾಕಿರುವ ಪೋಸ್ಟ್‌ ವೈರಲ್‌ ಆಗಿದೆ. ಈ ಕುರಿತು ಉಡುಪಿಯಲ್ಲಿ ದೂರು ದಾಖಲಾಗಿದೆ. ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ ರೂ., … Continued

ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ: ಬಿಜೆಪಿ ಮುಖಂಡನ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕ್ವಾರಿಯ ಮಾಲೀಕರಲ್ಲೊಬ್ಬನಾದ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದು, ನಾಗರಾಜ್ ಜೊತೆ ಬಾಂಬ್ ಸ್ಫೋಟಕಕಾರ ತಮಿಳುನಾಡು ಮೂಲದ ಗಣೇಶ್ ಎಂಬಾತನನ್ನೂ ಬಂಧಿಸಲಾಗಿದೆ. ಒಟ್ಟು ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು … Continued