ಜೀವ ಬೆದರಿಕೆ, ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್​ ವಶಕ್ಕೆ

ಬೆಂಗಳೂರು : ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದ್ದು, ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದಾಗ ಮೊಬೈಲ್ ಫೋನ್ ಲೊಕೇಷನ್ ಆಧಾರದ ಮೇಲೆ … Continued

ಗುತ್ತಿಗೆದಾರನಿಗೆ ಜೀವ ಬೆದರಿಕೆ ಆರೋಪ: ಶಾಸಕ ಮುನಿರತ್ನ ವಿರುದ್ಧ 2 ಎಫ್ಐಆರ್ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಆರ್‌ಐ ದಾಖಲಾಗಿವೆ ಎಂದು ತಿಳಿದುಬಂದಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಶಾಸಕ ಮುನಿರತ್ನ ಎ1 … Continued

ಬಿಜೆಪಿ ಶಾಸಕ ಸುರೇಶಕುಮಾರ ಆಸ್ಪತ್ರೆಗೆ ದಾಖಲು

ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶಕುಮಾರ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ಸುರೇಶಕುಮಾರ ಅವರನ್ನು ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಕಳೆದ ತಿಂಗಳು … Continued

ತ್ಯಾಜ್ಯ ನದಿಗೆ ಬಿಡುಗಡೆ ಆರೋಪ : ಶಾಸಕ ಯತ್ನಾಳ ಒಡೆತನದ ಕಾರ್ಖಾನೆ ವಿರುದ್ಧದ ದೂರು ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಸಂಸ್ಕರಣೆ ಮಾಡದೆ ತ್ಯಾಜ್ಯವನ್ನು ನದಿಗೆ ಬಿಡುಗಡೆ ಮಾಡುವ ಮೂಲಕ ಜಲ ಮತ್ತು ಪರಿಸರ ಕಾಯಿದೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮೆಸರ್ಸ್‌ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್‌ … Continued

ಮುಡಾ ಹಗರಣ: ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ … Continued

ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಲ್ಲದೆ, ಬೆದರಿಕೆ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಮರಳುಗಾರಿಗೆ ಸಂಬಂಧ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ‌ ಮುಖಂಡನ ಪರ ಯಾವುದೇ ಅನುಮತಿ … Continued

ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಕಲ್ಲು ಕ್ವಾರಿ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ ಶೆಟ್ಟಿ ಅವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ … Continued

ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಬಿಜೆಪಿ ಶಾಸಕನಿಗೆ 25 ವರ್ಷಗಳ ಜೈಲು ಶಿಕ್ಷೆ

ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹೊತ್ತಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಒಂಬತ್ತು ವರ್ಷಗಳ ಬಳಿಕ 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ವಿಧಾನಸಭೆಯಿಂದ ಅನರ್ಹತೆಯಾಗುವ ಭೀತಿ ಎದುರಿಸುತ್ತಿದ್ದಾರೆ. ಈ ಅಪರಾಧವು 2014 ರಲ್ಲಿ ನಡೆದಿದ್ದು, ದೂರು ದಾಖಲಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಶಾಸಕರು ಕುಟುಂಬಕ್ಕೆ ಒತ್ತಡ ಮತ್ತು … Continued