ಬೆಂಗಳೂರು | ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನ ಯುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭರತನಾಟ್ಯ ಹಾಗೂ ಸಂಗೀತ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್ ನಲ್ಲಿ ಮದುವೆ ನಡೆದಿದ್ದು, ಸಂಸದ ತೇಜಸ್ವಿ ಸೂರ್ಯ, ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ ಅವರು ಗುರುವಾರ ಬೆಳಿಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. … Continued

ರಾಷ್ಟ್ರಪತಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆ

ನವದೆಹಲಿ : ಬಿಜೆಪಿ ಸಂಸದರ ಗುಂಪು ಸೋಮವಾರ (ಫೆಬ್ರವರಿ 3) ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ವಿರುದ್ಧ ಸಂಸತ್ತಿನ ವಿಶೇಷ ಹಕ್ಕು ಚ್ಯುತಿ ನಿರ್ಣಯ ಮಂಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವಹೇಳನಕಾರಿ ಮತ್ತು ನಿಂದೆಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ವಿಶೇಷ ಹಕ್ಕು ಚ್ಯುತಿ  … Continued

ವೀಡಿಯೊ…| ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ…

ಬಿಜೆಪಿ ಸಂಸದ ಎಟೆಲಾ ರಾಜೇಂದರ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೋಚಾರಂನಲ್ಲಿ ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡುತ್ತಿರುವ ವೀಡಿಯೊ ಈಗ ವಿವಾದದ ಕೇಂದ್ರಬಿಂದುವಾಗಿದೆ. ಈ ಪ್ರದೇಶದಲ್ಲಿ ಬಡವರ ಜಮೀನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಬ್ರೋಕರ್‌ ಒಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು ವಿವರಿಸಿದ … Continued

ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ನಿಗೂಢ ಸಾವು: ಪೊಲೀಸರಿಂದ ಆತ್ಮಹತ್ಯೆ ಶಂಕೆ

ನವ ದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟಿದ್ದಾರೆ. ರಾಮ್ ಸ್ವರೂಪ್ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅವರ ಮರಣದ ಹಿನ್ನೆಲೆಯಲ್ಲಿ … Continued

ಕೊವಿಡ್‌ಗೆ ಮತ್ತೊಬ್ಬ ಬಿಜೆಪಿ ಸಂಸದ ಸಾವು

ಭೋಪಾಲ್: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಅವರು ಗುರುಗ್ರಾಮ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 69 ವರ್ಷ ವಯಸ್ಸಿಯ ಚೌಹಾಣ್ ಅವರು ಈ ಕ್ಷೇತ್ರದಿಂದ ಆರು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಕೋವಿಡ್-19 ಪಾಸಿಟಿವ್ ಸೋಂಕಿನಿಂದ ಗುರುಗ್ರಾಮ್‍ದ ಮೇದಾಂತ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ರಾತ್ರಿ ತೀವ್ರ ಉಸಿರಾಟ ತೊಂದರೆಯುಂಟಾಗಿ … Continued

ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜನರು ತಕ್ಕ ಪಾಠ ಕಲಿಸ್ತಾರೆ:ಶ್ರೀನಿವಾಸ ಪ್ರಸಾದ ಎಚ್ಚರಿಕೆ

ಮೈಸೂರು: ಚುನಾವಣೆಗೆ ಇನ್ನೂ ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತುಕೊಂಡರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ ಅವರು ಸಿಎಂ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸದೇ ಟೀಕೆ ಮಾಡಿದರು. ಅಧಿಕಾರದ ಅಮಲನ್ನು ತಲೆಗೇರಿಸಿಕೊಂಡರೆ ಜನರು ಪಾಠ ಕಲಿಸುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ದುಡಿಯುವವರು ಕೆಲವರಾದರೆ, ಸ್ವಾರ್ಥಕ್ಕಾಗಿ ಮಾಡಿಕೊಳ್ಳುವವರು … Continued