ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ಪ್ರಧಾನಿ ಮೋದಿ-ಬಿಜೆಪಿ ಉನ್ನತ ನಾಯಕರ ಮಹತ್ವದ ಸಭೆ ; ಶೀಘ್ರವೇ ಕೇಂದ್ರ ಸಂಪುಟ-ಪಕ್ಷದ ಸಂಘಟನೆಯ ಪುನರ್ರಚನೆ ?

ನವದೆಹಲಿ: ಬಹುನಿರೀಕ್ಷಿತ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಸಂಘಟನೆಯ ಪುನರ್ರಚನೆಗೆ ಶೀಘ್ರದಲ್ಲೇ ಅಂತಿಮ ರೂಪ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಈ ಸಂಬಂಧ ಬುಧವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. … Continued

ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ … Continued

ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮೂವರು ಟಿಎಂಸಿ ಮಾಜಿ ಸಂಸದರಿಗೆ ರಾಜ್ಯಸಭೆ ಟಿಕೆಟ್ ನೀಡಿದ ಬಿಜೆಪಿ

ನವದೆಹಲಿ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಗುರುವಾರ ಸಂಜೆ (ಜುಲೈ 9) ಬಿಜೆಪಿ ಸೇರ್ಪಡೆಯಾದ ಬೆನ್ನಿಗೇ ರಾಜ್ಯಸಭೆ ಮೂವರು ಮಾಜಿ ಸದಸ್ಯರಾದ ಸುಖೇಂದು ಶೇಖರ ರಾಯ್, ಸುಷ್ಮಿತಾ ದೇವ್ ಹಾಗೂ ಪ್ರಕಾಶ ಚಿಕ್ ಬರಾಯಿಕ್ ಅವರಿಗೆ ಜುಲೈ 24ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ಪಕ್ಷಾಂತರಕ್ಕೂ ಮುನ್ನವೇ ಈ ಮೂವರು … Continued

ವಿಡಿಯೋ | ರ್ಯಾಲಿ ಬಳಿಕ ಗದ್ದಲದ ನಡುವೆ ಜನರನ್ನು ನಿಯಂತ್ರಿಸುವಾಗ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಬರೂಯಿಪುರದಲ್ಲಿ 11 ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. ರ್ಯಾಲಿಯ ವೇಳೆ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ಮತ್ತು ಘರ್ಷಣೆ … Continued

ಟ್ರಸ್ಟ್ ಹೆಸರಲ್ಲಿ ‘ಜಮೀನು ಲೂಟಿ’: ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಗಂಭೀರ ಆರೋಪ

ಟ್ರಸ್ಟ್ ಹೆಸರಲ್ಲಿ ಖರ್ಗೆ ಕುಟುಂಬದಿಂದ ಕರ್ನಾಟಕದಲ್ಲಿ ‘ಭೂ ಕಬಳಿಕೆ’ : ಬಿಜೆಪಿ ಗಂಭೀರ ಆರೋಪ ನವದೆಹಲಿ : ಕಾಂಗೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ತಮ್ಮ “ಅಧಿಕಾರ ಮತ್ತು ಪ್ರಭಾವ”ವನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬುಧವಾರ ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued

ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಜಾರ್ಜ್ ಕುರಿಯನ್ ಅವರು ಮಂಗಳವಾರ (ಜೂನ್ 23) ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಮುಕ್ತಾಯವಾದ … Continued

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ : ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ; ಒಂದೇ ಒಂದು ಸ್ಥಾನ ಗೆಲ್ಲದ ವಿಪಕ್ಷಗಳು…!

ಮುಂಬೈ: ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಒಟ್ಟು ಘೋಷಣೆಯಾದ 17 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಮೈತ್ರಿಕೂಟವು ಕೌನ್ಸಿಲ್‌ನಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಜೂನ್ 18 ರಂದು 17 ಸ್ಥಾನಗಳಿಗೆ ಮತದಾನ ನಡೆದಿತ್ತು. ಆದರೆ, ಮತದಾನಕ್ಕೂ ಮುನ್ನವೇ ಮಹಾಯುತಿ ಮೈತ್ರಿಕೂಟದ ಆರು ಅಭ್ಯರ್ಥಿಗಳು ಅವಿರೋಧವಾಗಿ … Continued

ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ : ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್‌ ಬುಲಾವ್

ಬೆಂಗಳೂರು/ನವದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬಿಜೆಪಿ-ಜೆಡಿಎಸ್‌ ಪಕ್ಷಗಳ ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ವಿಚಾರ ಇದೀಗ ತೀವ್ರ ರಾಜಕೀಯ ಕದನಕ್ಕೆ ಕಾರಣವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಇತರೆ ಪ್ರಮುಖ ನಾಯಕರಿಗೆ … Continued

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸಂಭ್ರಮ ತಂದಿದ್ದರೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ತೀವ್ರ ಮುಜುಗರ ತಂದಿಟ್ಟಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಏಳು ಸ್ಥಾನಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಜಯಗಳಿಸಿದರೆ ಬಿಜೆಪಿ ಎರಡರಲ್ಲಿ ಜಯಗಳಿಸಿದೆ. ಆದರೆ, ಈ ಎಲ್ಲದರ ನಡುವೆ ವಿಪಕ್ಷಗಳ ಶಾಸಕರು ದೊಡ್ಡ ಮಟ್ಟದಲ್ಲಿ ‘ಕ್ರಾಸ್ ವೋಟಿಂಗ್’ (ಅಡ್ಡ … Continued