ಸಿಂಹ ಯಾವಾಗಲೂ ಸಿಂಹವೇ : 2026ರ ಚುನಾವಣೆಯಲ್ಲಿ ಡಿಎಂಕೆ, ಬಿಜೆಪಿ ಜೊತೆ ಮೈತ್ರಿಯಿಲ್ಲ ಎಂದು ಘೋಷಿಸಿದ ತಮಿಳು ನಟ ವಿಜಯ

ಮಧುರೈ : “ಸಿಂಹ ಯಾವಾಗಲೂ ಸಿಂಹವೇ,” ಎಂದು ನಟ ವಿಜಯ್ ಗುರುವಾರ ಮಧುರೈನಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಾ ಘರ್ಜಿಸಿದ್ದಾರೆ. ತಮ್ಮ ಪಕ್ಷದ ಟಿವಿಕೆಯ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪಕ್ಷದ ಸಾವಿರಾರು ಬೆಂಬಲಿಗರ ಮುಂದೆ ಅವರು ಘರ್ಜಿಸಿದ್ದಾರೆ. ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬೆಂಬಲಿಗರನ್ನು ಒಟ್ಟುಗೂಡಿಸಲು ಪ್ರಯತ್ನಿಸುವ ಬಹುದೊಡ್ಡ ಸಮಾವೇಶದಲ್ಲಿ ಮಾತನಾಡಿದ್ದಾರೆ. ಸಾಂಕೇತಿಕತೆ … Continued

‘ಜನ ಸುನವಾಯಿ’ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ; ಆರೋಪಿ ಬಂಧನ

ನವದೆಹಲಿ : ಇಂದು, ಬುಧವಾರ ಬೆಳಿಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನಿವಾಸದಲ್ಲಿ ನಡೆದ ಸಾರ್ವಜನಿಕ ಅಹವಾಲು ಆಲಿಕೆ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಯಿತು. 40 ರ ಹರೆಯದ ವ್ಯಕ್ತಿಯೊಬ್ಬರು ‘ಜನಸುನವಾಯಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕ ಸಭೆಯಲ್ಲಿ ಕುಂದುಕೊರತೆ ಹೇಳಿಕೊಳ್ಳುವವನ ವೇಷದಲ್ಲಿ ಬಂದಿದ್ದ ದಾಳಿಕೋರನನ್ನು ಮುಖ್ಯಮಂತ್ರಿಯವರ ಭದ್ರತಾ … Continued

ಗಂಭೀರ ಕ್ರಿಮಿನಲ್ ಕೇಸಲ್ಲಿ ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ : ಲೋಕಸಭೆಯಲ್ಲಿ ಇಂದು 3 ಮಸೂದೆಗಳ ಮಂಡನೆ; ಏನಿದು ಮಸೂದೆ..?

ನವದೆಹಲಿ: ಪ್ರಧಾನಿ, ರಾಜ್ಯಗಳ ಮುಖ್ಯಮಂತ್ರಿಗಳು ಅಥವಾ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಸಚಿವರು ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟರೆ ಅಥವಾ ಬಂಧನಕ್ಕೊಳಗಾಗಿದ್ದರೆ ಅವರನ್ನು ಹುದ್ದೆಯಿಂದ ಪದಚ್ಯುತಗೊಳಿಸುವ ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಬುಧವಾರ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಸ್ತಾವಿತ ನಿಬಂಧನೆಗಳ ಅಡಿಯಲ್ಲಿ, ಗಂಭೀರ ಅಪರಾಧದ (ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ … Continued

ಉಪರಾಷ್ಟ್ರಪತಿ ಚುನಾವಣೆ ; ಇದು ಸಿ.ಪಿ. ರಾಧಾಕೃಷ್ಣನ್ vs ಸುದರ್ಶನ ರೆಡ್ಡಿ

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸರ್ವಾನುಮತದ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳನ್ನು ಒಗ್ಗೂಡಿಸುವ ಸರ್ಕಾರದ ಪ್ರಯತ್ನಗಳು ವಿಫಲವಾಗಿವೆ. ಈಗ ಉಪರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಯ ಸಿಪಿ ರಾಧಾಕೃಷ್ಣನ್ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ … Continued

ಎನ್‌ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಹೆಸರು ಘೋಷಣೆ

ನವದೆಹಲಿ : ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಮತ್ತು ತಮಿಳುನಾಡಿನ ಬಿಜೆಪಿಯ ಉನ್ನತ ನಾಯಕರಲ್ಲಿ ಒಬ್ಬರಾಗಿದ್ದ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಭಾನುವಾರ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಆಯ್ಕೆಯನ್ನು ಅಂತಿಮಗೊಳಿಸಲು ಕರೆಯಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಅಕ್ಟೋಬರ್ 20, 1957 … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಇವರೇ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳು…

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆಗಳು ಆರಂಭವಾಗಿದೆ. ಮೂಲಗಳ ಪ್ರಕಾರ, ಗುಜರಾತ್ ರಾಜ್ಯಪಾಲ ಆಚಾರ್ಯ … Continued

ನಾಗಾಲ್ಯಾಂಡ್ ರಾಜ್ಯಪಾಲ ಎಲ್‌. ಗಣೇಶನ್ ನಿಧನ

ಕೊಹಿಮಾ/ಚೆನ್ನೈ : ನಾಗಾಲ್ಯಾಂಡ್ ರಾಜ್ಯಪಾಲ ಎಲ್‌. ಗಣೇಶನ್ ಶುಕ್ರವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಕೊಹಿಮಾದ ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಆರೆಸ್ಸೆಸ್ ಮೂಲದವರಾದ ತಮಿಳುನಾಡಿನ ಖ್ಯಾತ ಬಿಜೆಪಿ ನಾಯಕ ಗಣೇಶನ್ ಅವರು 2021 ಮತ್ತು 2025 ರ ನಡುವೆ ಮಣಿಪುರ, ಪಶ್ಚಿಮ ಬಂಗಾಳ ಮತ್ತು ನಾಗಾಲ್ಯಾಂಡ್ … Continued

ಸೋನಿಯಾ ಗಾಂಧಿ ಭಾರತದ ಪೌರತ್ವ ಪಡೆಯುವ ಮೊದಲೇ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಿತ್ತು : ಬಿಜೆಪಿಯ ದೊಡ್ಡ ಆರೋಪ

ನವದೆಹಲಿ: ಮತಗಳ್ಳತನ ಮಾಡಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ‘ಕೈಜೋಡಿಸಿದೆ’ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳಿಗೆ ತಿರುಗೇಟು ನೀಡಿರುವ ಬಿಜೆಪಿ, ಸೋನಿಯಾ ಗಾಂಧಿ ಭಾರತದ ಪ್ರಜೆಯಾಗುವ ಮೊದಲೇ ಅಕ್ರಮವಾಗಿ ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು ಎಂದು ಹೇಳಿದೆ. ಸೋನಿತಾ ಗಾಂಧಿ ಭಾರತದ ಪ್ರಜೆಯಾಗುವ ಮೊದಲು 1980 ರಿಂದ 1982 ರವರೆಗೆ ಅವರ ಹೆಸರು ಮತದಾರರ … Continued

ವಿಜಯಪುರ ಮಹಾನಗರ ಪಾಲಿಕೆ ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ

ವಿಜಯಪುರ: ಗುಮ್ಮಟ ನಗರ ಎಂದೇ ಖ್ಯಾತಿ ಪಡೆದ ವಿಜಯಪುರ ಮಹಾನಗರ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಸೇರಿದೆ. ಬಿಜೆಪಿ ಸದಸ್ಯರಾದ ಎಂ.ಎಸ್. ಕರಡಿ ಮೇಯರ್ ಹಾಗೂ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಜನವರಿ, ಫೆಬ್ರುವರಿಯಲ್ಲಿ ನಡೆದ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮೇಯರ್ ಹಾಗೂ ಉಪ ಮೇಯರ್ … Continued

2020ರ ರೈತ ಪ್ರತಿಭಟನೆ ವೇಳೆ ಅರುಣ ಜೇಟ್ಲಿ ಮೂಲಕ ಬೆದರಿಸಲಾಗಿತ್ತು ಎಂದು ಆರೋಪಿಸಿ ಮುಜುಗರಕ್ಕೀಡಾದ ರಾಹುಲ್ ಗಾಂಧಿ ; ಯಾಕೆಂದರೆ….

ನವದೆಹಲಿ: ಆಗಸ್ಟ್ 2019 ರಲ್ಲಿ ನಿಧನರಾದ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರ ಮೇಲೆ ವಿಚಿತ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಕಾನೂನುಗಳನ್ನು ತಾನು ವಿರೋಧಿಸುವುದನ್ನು ನಿಲ್ಲಿಸಲು ಸರ್ಕಾರವು ಅವರನ್ನು ಬೆದರಿಕೆ ಹಾಕಲು ಕಳುಹಿಸಿತ್ತು ಎಂದು ಶನಿವಾರ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಅರುಣ ಜೇಟ್ಲಿ ದೀರ್ಘಕಾಲದ ಅನಾರೋಗ್ಯದ ನಂತರ ನವದೆಹಲಿಯ ಏಮ್ಸ್‌ನಲ್ಲಿ … Continued