ಶಿರಸಿ | ಶಾಸಕರಿಗೆ ಅವಹೇಳನ ಮಾಡಿದ ಆರೋಪ ; ಅನಂತಮೂರ್ತಿ ಹೆಗಡೆ ವಿರುದ್ಧ ದೂರು

ಶಿರಸಿ ; ಬಿಜೆಪಿ ಮುಖಂಡ ಹಾಗೂ ಹೋರಾಟಗಾರ ಅನಂತಮೂರ್ತಿ ಹೆಗಡೆ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಅನಂತಮೂರ್ತಿ ಹೆಗಡೆ ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ಶಿರಸಿ ನಗರ ಸಭೆ ಸದಸ್ಯರಾದ ಪ್ರದೀಪ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ರಾಜ್ಯದ 224 ಶಾಸಕರಲ್ಲಿ ಹೆಚ್ಚು … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿಗೆ ಹಿನ್ನಡೆ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ; ಭವಿಷ್ಯ ನುಡಿದ ಬಹುತೇಕ ಎಕ್ಸಿಟ್‌ ಪೋಲ್‌ ಗಳು

ನವದೆಹಲಿ; 25 ವರ್ಷಗಳ ನಂತರ ಬಿಜೆಪಿಯು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಭವಿಷ್ಯ ನುಡಿದಿವೆ. ಆದರೆ ಅನೇಕ ಸಂದರ್ಭಗಳಲ್ಲಿ ಚುನಾವನೋತ್ತರ ಸಮೀಕ್ಷೆಗಳು ತಪ್ಪಾಗಿವೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಾದ್ಯಂತ ಬುಧವಾರ ನಡೆದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಿತು. … Continued

2024ರ ಲೋಕಸಭೆ ಚುನಾವಣೆಗೆ 1,737 ಕೋಟಿ ರೂಪಾಯಿ ಖರ್ಚು ಮಾಡಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಕ್ಷ(BJP)ವು 2024 ರ ಲೋಕಸಭೆ ಚುನಾವಣೆಗೆ 1,737.68 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವೆಚ್ಚದ ವರದಿಯಲ್ಲಿ ತಿಳಿಸಲಾಗಿದೆ. ಒಟ್ಟು ಮೊತ್ತದಲ್ಲಿ 884.45 ಕೋಟಿ ರೂ.ಗಳನ್ನು ಪಕ್ಷದ ಸಾಮಾನ್ಯ ಪ್ರಚಾರಕ್ಕಾಗಿ ಖರ್ಚು ಮಾಡಲಾಗಿದ್ದು, 853.23 ಕೋಟಿ ರೂ.ಗಳನ್ನು ಅಭ್ಯರ್ಥಿ ಸಂಬಂಧಿತ ವೆಚ್ಚಗಳಿಗಾಗಿ ವಿನಿಯೋಗಿಸಲಾಗಿದೆ ಎಂದು ಅದು … Continued

ಚಂಡೀಗಢ ಮೇಯರ್ ಚುನಾವಣೆ | ಬಿಜೆಪಿ ಅಭ್ಯರ್ಥಿಯ ಅಚ್ಚರಿಯ ಗೆಲುವು ; ಬಹುಮತ ಇದ್ರೂ ಮಂಡಿಯೂರಿದ ಎಎಪಿ-ಕಾಂಗ್ರೆಸ್‌ ಮೈತ್ರಿಕೂಟ…!

ಚಂಡೀಗಢ: ಎಎಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್‌ಪ್ರೀತ್ ಕೌರ್ ಬಬ್ಲಾ ಅವರು ಎಎಪಿಯ ಪ್ರೇಮ್ ಲತಾ ವಿರುದ್ಧ 19 -17 ಮತಗಳಿಂದ ಜಯಗಳಿಸಿದ್ದಾರೆ. ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಪೈಪೋಟಿ ಏರ್ಪಟ್ಟಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಅಸೆಂಬ್ಲಿ … Continued

ಕರ್ನಾಟಕದ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸದಾಗಿ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ; ಪಟ್ಟಿ ಬಿಡುಗಡೆ

ಬೆಂಗಳೂರು : ಕರ್ನಾಟಕದ 23 ಜಿಲ್ಲೆಗಳಿಗೆ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯ ಬಿಜೆಪಿಯು ಆಯ್ಕೆಯಾದ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಬಿಜೆಪಿಯ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದ್ದು, ಬುಧವಾರ ಆಯ್ಕೆಯಾದ ಜಿಲ್ಲಾಧ್ಯಕ್ಷರ ಹೆಸರುಗಳನ್ನು ಜಿಲ್ಲಾ … Continued

ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆ

ಶಿರಸಿ : ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಉತ್ತರ ಕನ್ನಡ ಜಿಲ್ಲೆ ಚುನಾವಣಾಧಿಕಾರಿ ಆರ್.ಕೆ. ಸಿದ್ದರಾಮಣ್ಣ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ದೀನದಯಾಳ ಭವನದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯವನ್ನು ಪಡೆದ ನಂತರ ಸಹಮತದಿಂದಲೇ ಎನ್ ಎಸ್ ಹೆಗಡೆ ಕರ್ಕಿ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ … Continued

ಇಂದು ರಾತ್ರಿ 8 ಗಂಟೆಯೊಳಗೆ ʼಯಮುನಾ ವಿಷ ಮಿಶ್ರಣʼದ ಬಗ್ಗೆ ಪುರಾವೆ ನೀಡಿ: ಕೇಜ್ರಿವಾಲಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಬಿಜೆಪಿ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ ಎಂಬ ಎಂದು ಗಂಭೀರ ಆರೋಪ ಮಾಡಿದ್ದು, ಈ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಸೂಚಿಸಿದೆ. ಬಿಜೆಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 8 ಗಂಟೆಯೊಳಗೆ ಸಾಕ್ಷ್ಯಾಧಾರಗಳನ್ನು ಪ್ರಸ್ತುಪಡಿಸುವಂತೆ ಸೂಚಿಸಿರುವ ಚುನಾವಣಾ ಆಯೋಗವು, ಇದು … Continued

ವೀಡಿಯೊ…| ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ…

ಬಿಜೆಪಿ ಸಂಸದ ಎಟೆಲಾ ರಾಜೇಂದರ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೋಚಾರಂನಲ್ಲಿ ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡುತ್ತಿರುವ ವೀಡಿಯೊ ಈಗ ವಿವಾದದ ಕೇಂದ್ರಬಿಂದುವಾಗಿದೆ. ಈ ಪ್ರದೇಶದಲ್ಲಿ ಬಡವರ ಜಮೀನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಬ್ರೋಕರ್‌ ಒಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು ವಿವರಿಸಿದ … Continued

ʼಇಂಡಿಯನ್‌ ಸ್ಟೇಟ್‌ ವಿರುದ್ಧ ಹೋರಾಟʼದ ಹೇಳಿಕೆ ; ರಾಹುಲ್‌ ಗಾಂಧಿ ವಿರುದ್ಧ ಎಫ್‌ ಐಆರ್ ದಾಖಲು

ಗುವಾಹತಿ: “ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ ಮತ್ತು ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ಸರ್ಕಾರ(Indian State)ದ ವಿರುದ್ಧವೇ ಹೋರಾಡುತ್ತಿದ್ದೇವೆ” ಎಂದು ಹೇಳಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಗುವಾಹತಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೊಂಜಿತ್ ಚೇಟಿಯಾ ಎಂಬವರು ಪನ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ವಿಪಕ್ಷದ ನಾಯಕನ ಸ್ಥಾನದಲ್ಲಿರುವ … Continued

ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued