ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ; ವರದಿ

ನವದೆಹಲಿ: ಚುನಾವಣೆ (Election) ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ದೇಶಾದ್ಯಂತ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಲು ನಿರ್ಣಯಿಸಿರುವ “ಒಂದು ರಾಷ್ಟ್ರ ಒಂದು ಚುನಾವಣೆ” (One Nation One Election) ಮಸೂದೆಗೆ ಇಂದು ಗುರುವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಸೂದೆಗಳನ್ನು … Continued

2024ರಲ್ಲಿ ಗೂಗಲ್‌ ನಲ್ಲಿ ಭಾರತೀಯರು ಅತಿಹೆಚ್ಚು ಸರ್ಚ್‌ ಮಾಡಿದ ವಿಷಯಗಳೇನು ಗೊತ್ತೆ..? ಇಲ್ಲಿದೆ ಪಟ್ಟಿ

ನವದೆಹಲಿ: 2024 ರ ವರ್ಷ ಮುಗಿದು ೨೦೨೫ಕ್ಕೆ ಕಾಲಿಡುವ ಹಂತದಲ್ಲಿದ್ದೇವೆ. ಈ ವರ್ಷ ಜನರು ಯಾವ ಯಾವ ವಿಷಯಗಳನ್ನು ಹೆಚ್ಚಾಗಿ ತಿಳಿದುಕೊಳ್ಳಲು ಇಷ್ಟಪಟ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ (Google) ಸರ್ಚ್ ಇಂಜಿನ್ ವಾರ್ಷಿಕವಾಗಿ ತನ್ನ ವಿಶೇಷ “ಇಯರ್ ಇನ್ ಸರ್ಚ್” ವರದಿಯಲ್ಲಿ ವಿವಿಧ ಥೀಮ್‌ಗಳಲ್ಲಿ ಹೆಚ್ಚು ಹುಡುಕಲಾದ ವಿಷಯಗಳ ಪಟ್ಟಿಯನ್ನು ಮಾಡುತ್ತದೆ. ಬಿಡುಗಡೆಯಾದ 2024 ರ … Continued

ಯಾರೋ ಹೇಳಿದಾಕ್ಷಣ ವಿಜೇಯೆಂದ್ರ ಬದಲಾವಣೆ ಮಾಡಲು ಆಗದು : ರಾಧಾಮೋಹನ ಅಗರ್ವಾಲ್

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಕಂಡುಬಂದಿಲ್ಲ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸದ್ಯಕ್ಕೆ ಬದಲಾವಣೆ ಮಾಡುವ ಯಾವುದೇ ವಿಚಾರ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನದಾಸ ಅಗರ್ವಾಲ್ ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದ ಬಳಿಕ ಮಾಧ್ಯಮಗಳ ಜತೆ … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಯತ್ನಾಳಗೆ ಶಾಕ್ ನೀಡಿದ ಬಿಜೆಪಿ ; ಪಕ್ಷದ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ನಾಯಕತ್ವಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಬಿಜೆಪಿ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಬಸವರಾಜ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ಜಾರಿ … Continued

ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು. ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು … Continued

ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ … Continued

ಮಹಾರಾಷ್ಟ್ರ | ಸರ್ಕಾರ ರಚನೆಗೆ ಮುಂದುವರಿದ ಬಿಕ್ಕಟ್ಟು : ಆದ್ರೆ ಸಚಿವ ಸಂಪುಟದ ಪ್ರಮಾಣ ವಚನದ ದಿನಾಂಕ ಪ್ರಕಟಿಸಿದ ಬಿಜೆಪಿ…!

ಮುಂಬೈ: ಮಹಾರಾಷ್ಟ್ರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಬಿಜೆಪಿ ಪ್ರಕಟಿಸಿದೆ. ಆದರೆ ಮುಖ್ಯಮಂತ್ರಿ ಹೆದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಐಕಾನಿಕ್ ಆಜಾದ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಮಾಣ … Continued

ಪ್ರಧಾನಿ ಮೋದಿ ಏನೇ ನಿರ್ಧರಿಸಿದರೂ….”: ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆ ಬಗ್ಗೆ ಶಿವಸೇನೆ ನಾಯಕ ಏಕನಾಥ ಶಿಂಧೆ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಏಕನಾಥ ಶಿಂಧೆ ಅವರು ಚುನಾವಣಾ ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ತಮ್ಮ ನಿಲುವನ್ನು ಸಡಿಲಿಸಿದ್ದು, ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇನೆ ಎಂದು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬುಧವಾರ ಹೇಳಿದ್ದಾರೆ. “ಪ್ರಧಾನಿ ಮೋದಿಯವರಿಗೆ ನಾನು ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದೇನೆ. ಅವರು … Continued

ಕರ್ನಾಟಕದ ಉಪಚುನಾವಣೆ : ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು, ಮತ್ತೆ ಸೋತ ನಿಖಿಲ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚನ್ನಪಟ್ಟಣದ ಜಿದ್ದಾಜಿದ್ದಿ ಕಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರು ಜೆಡಿಎಸ್‌ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ ಕುಮಾರಸ್ವಾಮಿ ವಿರುದ್ಧ 25,515 ಮತಗಳ ಅಂತರದಿಂದ ಭರ್ಜರಿ ಗೆಲುವು … Continued