ಕಲಬುರಗಿ ಪಾಲಿಕೆ ಅಧಿಕಾರಕ್ಕೆ ಬಿಜೆಪಿ-ಕಾಂಗ್ರೆಸ್‌ ಕಸರತ್ತು: ಎಚ್‌ಡಿಕೆ ಜೊತೆ ಬೊಮ್ಮಾಯಿ, ದೇವೇಗೌಡರ ಜೊತೆ ಖರ್ಗೆ ಮಾತುಕತೆ- ಆದ್ರೆ ಗುಟ್ಟುಬಿಟ್ಟುಕೊಡದ ಜೆಡಿಎಸ್‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಒಟ್ಟು 55 ಸದಸ್ಯರ ಬಲ ಹೊಂದಿದ್ದು, ಆದರೆ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಹಾಂಗ್ರೆಸ್‌ ಹಾಗೂ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಹೀಗಾಗಿ ಕೇಔಲ ನಾಲ್ಕು ಸ್ಥಾನಗಳನ್ನು ಗೆದ್ದಿದ್ದರೂ ಜೆಡಿಎಸ್‌ಗೆ ಈಗ ಎಲ್ಲಿಲ್ಲದ ಮಹತ್ವ ಬಂದಿದೆ. ಕಾಂಗ್ರೆಸ್ 27 ವಾರ್ಡ್‌ಗಳಲ್ಲಿ, ಬಿಜೆಪಿ 23 ಮತ್ತು ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆದ್ದರೆ ಒಂದು … Continued

ಮಹಾ ಸಿಎಂ ಉದ್ಧವಗೆ ಕಪಾಳಮೋಕ್ಷ ಕಾಮೆಂಟ್‌: ಮುಂಬೈನಲ್ಲಿ ಬಿಜೆಪಿ-ಶಿವಸೇನಾ ಕಾರ್ಯಕರ್ತರ ಘರ್ಷಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಬಗ್ಗೆ ಕೇಂದ್ರ ಸಚಿವ ನಾರಾಯಣ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಮಂಗಳವಾರ ಮುಂಬೈನಲ್ಲಿ ಆಕ್ರೋಶಗೊಂಡ ಶಿವಸೇನಾ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ  ನಡೆದಿದೆ.ಪೊಲೀಸರು ಜನರನ್ನು ಚದುರಿಸಲು ಲಾಠಿ ಬೀಸಿದ್ದಾರೆ. ಸೇನಾ ಕಾರ್ಯಕರ್ತರು ಮುಂಬೈನ ಕೇಂದ್ರ ಸಚಿವರ ಮನೆಗೆ ತೆರಳುತ್ತಿದ್ದಾಗ ಘರ್ಷಣೆ ನಡೆಯಿತು. ದೊಡ್ಡ … Continued

ಕೇಂದ್ರ ಸಚಿವರಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ: ಕೋವಿಡ್‌ ನಿಯಮ ಗಾಳಿಗೆ ತೂರಿದ ಬಿಜೆಪಿ ..!

ಯಾದಗಿರಿ: ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರ ಸ್ವಾಗತಕ್ಕೆ ಮುಗಿಬಿದ್ದಿದ್ದಲ್ಲದೆ ಅವರ ಸ್ವಾಗತಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ಅತಿರೇಕದ ವರ್ತನೆ ತೋರಿದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿರುವ ಕಾರಣ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continued

ಯತ್ನಾಳ ಕುರಿತ ಗೊಂದಲ ಬಗೆಹರಿಸದ ಅರುಣ ಸಿಂಗ್‌ ಹೇಳಿಕೆ

ಬೆಳಗಾವಿ :ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಪಕ್ಷದಿಂದ ಹೊರ ಹಾಕಿದರೆ ಅವರು ಸ್ವತಂತ್ರರಾಗುತ್ತಾರೆ. ಕೆಲವು ವಿಷಯಗಳನ್ನು ಮಾಧ್ಯಮದವರ ಮುಂದೆ ಹೇಳಲು ಆಗುವುದಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಲ್ಲಿ ಜೀರೋ. ಅವರ ಹೆಸರು ಇಲ್ಲಿ ಪ್ರಸ್ತಾಪ ಬೇಡ ಎಂದು ಪಕ್ಷ ವಿರೋಧಿ … Continued

ಸಿ.ಟಿ.ರವಿಗೆ ಪ್ರತ್ಯುತ್ತರ: ಬಿಜೆಪಿ ವಂಶಪಾರಂಪರ್ಯ ರಾಜಕಾರಣದ ಲಿಸ್ಟ್ ಕೊಟ್ಟು ಜಾಲಾಡಿದ ಕಾಂಗ್ರೆಸ್..!

ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ಮೂರು ಕ್ಷೇತ್ರಗಳ ಉಪಚುನಾವಣೆ ಸಮಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಟ್ವಿಟ್ಟರ್‌ ವಾರ್‌ ಜೋರಾಗಿಯೇ ನಡೆಯುತ್ತಿದೆ. ಉಪ ಚುನಾವಣೆ, ಸಿಡಿ ಪ್ರಕರಣ, ಸಾರಿಗೆ ನೌಕರರ ಮುಷ್ಕರ ಮುಂತಾದ ವಿಚಾರಗಳಲ್ಲಿ ಟ್ವಟ್ಟರ್‌ನಲ್ಲಿ ತೀವ್ರ ವಾಗ್ಯದ್ಧಕ್ಕೆ ಕಾರಣವಾಗಿದ್ದ ಬಿಜೆಪಿ-ಕಾಂಗ್ರೆಸ್‌ನ ಸಮರ ಈಗ ವಂಶಪಾರಂಪರ್ಯ ಆಡಳಿತದತ್ತ ತಿರುಗಿದೆ. ಕಾಂಗ್ರೆಸ್‌ನಲ್ಲಿರುವುದು ವಂಶ ಪಾರಂಪರ್ಯದ ರಾಜಕಾರಣ. ಅದನ್ನು ಬಿಟ್ಟು … Continued

ಬಿಜೆಪಿಗೆ ಬೆಂಬಲಿಸುವುದಾಗಿ ಹೇಳಿದ ಕಾಂಗ್ರೆಸ್‌ನ ಲಖನ್‌‌ ಜಾರಕಿಹೊಳಿ..!

ಬೆಳಗಾವಿ: ಸಚಿವತ್ರಯರಾದ ಜಗದೀಶ ಶೆಟ್ಟರ, ಉಮೇಶ ಕತ್ತಿ ಹಾಗೂ ಬೈರತಿ ಬಸವರಾಜ ರಮೇಶ ಜಾರಕಿಹೊಳಿ ಸೋದರ ಲಖನ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವಂತೆ ಕೋರಿದರು. ಗೋಕಾಕದ ಅವರ ನಿವಾಸಕ್ಕೆ ತೆರಳಿದ ಸಚಿವರು, ಲಖನ್‌ ಜಾರಕಿಹೊಳಿ ಅವರೊಂದಿಗೆ ಕೆಲ ಹೊತ್ತು ಗುಪ್ತವಾಗಿ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ … Continued

ಬಿಜೆಪಿ ಅಭ್ಯರ್ಥಿ, ನಟಿ ಪಾಯಲ್‌ ಸರ್ಕಾರ್‌ ಮೇಲೆ ಟಿಎಂಸಿ ಕಾರ್ಯಕರ್ತರ ಹಲ್ಲೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ಠಾಕೂರಪೂರದಲ್ಲಿ ಬಿಜೆಪಿ ಅಭ್ಯರ್ಥಿ ಪಾಯಲ್‌ ಸರ್ಕಾರ ಹಾಗೂ ಅವರ ಬೆಂಬಲಿಗರ ಮೇಲೆ ಟಿಎಂಸಿ ಕಾರ್ಯಕರ್ತರು ಭಾನುವಾರ ಹಲ್ಲೆ ನಡೆಸಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಬೆಹಲಾದ ಠಾಕೂರ್‌ಪುಕೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಾಯಲ್‌ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ. ಪಾಯೆಲ್ ಸರ್ಕಾರ್ ಅವರ … Continued

ಆಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಮತಯಂತ್ರಗಳು!!

ನವದೆಹಲಿ: ಆಸ್ಸಾಂ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಬಿಜೆಪಿ ಅಭ್ಯರ್ಥಿ ಕೃಷ್ಣೆಂದು ಪೌಲ್‌ ಅವರಿಗೆ ಸೇರಿದ ಕಾರಿನಲ್ಲಿ ಇವಿಎಂ ಯಂತ್ರಗಳು ಪತ್ತೆಯಾಗಿವೆ. ಘಟನೆ ಬಳಿಕ ಉಥರಕಾಂಡಿ ಕ್ಷೇತ್ರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಈ ಕುರಿತು ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ … Continued

೨೦೨೪ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಮೋದಿ ವಿರುದ್ಧ ದೀದಿ ಸ್ಪರ್ಧೆ: ಟಿಎಂಸಿ

ಕೋಲ್ಕತ್ತ: ನಂದಿಗ್ರಾಮ ಕ್ಷೇತ್ರದಲ್ಲಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಗೆಲ್ಲುವುದು ಖಚಿತವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೀದಿ ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಟಿಎಂಸಿ ತಿಳಿಸಿದೆ. ನಂದಿಗ್ರಾಮದಲ್ಲಿ ಸೋಲುವ ಮಾತೇ ಇಲ್ಲ. ಬೇರೆ ಕ್ಷೇತ್ರದಲ್ಲಿ ಅವರು ಸ್ಪರ್ಧಿಸುವ ಅವಶ್ಯಕತೆಯಿಲ್ಲ. ಮಮತಾ ಬ್ಯಾನರ್ಜಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಿಂದ ಸೆಣೆಸಲಿದ್ದು, ಮೋದಿಯವರು ಸುರಕ್ಷಿತ ಕ್ಷೇತ್ರ … Continued

ಕಾಶ್ಮೀರದ ಬಿಜೆಪಿ ಮುಖಂಡನ ನಿವಾಸದ ಮೇಲೆ ಗುಂಡಿನ ದಾಳಿ

ಕಾಶ್ಮೀರ: ಉತ್ತರ ಕಾಶ್ಮೀರದ ಬಿಜೆಪಿ ಮುಖಂಡ ಅನ್ವರ್‌ ಖಾನ್‌ ನಿವಾಸದ ಮೇಲೆ ಭಯೋತ್ಪಾದಕರ ಗುಂಪು ಗುಂಡಿನ  ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ಬಿಜೆಪಿ ಉತ್ತರ ಕಾಶ್ಮೀರ ಅಭಿಯಾನದ ನೇತೃತ್ವ ವಹಿಸಿದ್ದ ಅನ್ವರ್‌ ಖಾನ್‌ ನಿವಾಸದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅವರು ಮನೆಯಲ್ಲಿರಲಿಲ್ಲ. ಅನ್ವರ್‌ ಖಾನ್‌ ಬಾರಾಮುಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಕುಪ್ವಾರಾ … Continued