ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ಬಿಜೆಪಿ ನಾಯಕಿ- ನಟಿ ಖುಷ್ಬು ರಾಜೀನಾಮೆ

ಚೆನ್ನೈ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಖ್ಯಾತ ನಟಿ ಖುಷ್ಬು ಸುಂದರ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜೂನ್ 28 ರಿಂದ ಜಾರಿಗೆ ಬರುವಂತೆ ನಟಿ ಖುಷ್ಬು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಇದು ಹಠಾತ್ ನಿರ್ಧಾರವಲ್ಲ. ನಾನು ಅದರ ಬಗ್ಗೆ ಸ್ವಲ್ಪ ಸಮಯ … Continued

ಸ್ಥಳೀಯ ಸಂಸ್ಥೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ : ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಕ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಏಳು ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಪಿ.ರಾಜೀವ : ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, … Continued

ವೀಡಿಯೊ..| ವೈದ್ಯ ವಿದ್ಯಾರ್ಥಿನಿ ಕೊಲೆಯಾದ ಸ್ಥಳದಲ್ಲಿ ಕಾಮಗಾರಿ; ವೀಡಿಯೊ ಹಂಚಿಕೊಂಡು ಇದು ಸಾಕ್ಷ್ಯ ನಾಶದ ಯತ್ನ ಎಂದು ಆರೋಪಿಸಿದ ಬಿಜೆಪಿ

ಕೋಲ್ಕತ್ತಾ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಹೊಸ ರಾಜಕೀಯ ವಿವಾದ ಭುಗಿಲೆದ್ದಿದ್ದು, ಎಡ ಗುಂಪುಗಳು ಮತ್ತು ಬಿಜೆಪಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಘಟನೆಗೆ ಸಂಬಂಧಿಸಿದ ಸಾಕ್ಷ್ಯ ನಾಶಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿವೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆರ್‌ಜಿ ಕರ್ ವೈದ್ಯಕೀಯ … Continued

ಬೆಳಗಾವಿ ಬಳಿಯ ರೆಸಾರ್ಟ್‌ನಲ್ಲಿ ಬಿಜೆಪಿ ಅತೃಪ್ತ ನಾಯಕರ ಸಭೆ…!

ಬೆಳಗಾವಿ: ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದ ಬಳಿಯ ರೆಸಾರ್ಟ್‌ನಲ್ಲಿ ಬಿಜೆಪಿ ಅತೃಪ್ತ ನಾಯಕರು ಭಾನುವಾರ ಸಭೆ ನಡೆಸಿದರು. ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಂಸದರಾದ ಜಿ.ಎಂ.ಸಿದ್ಧೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಪ್ರತಾಪ ಸಿಂಹ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ಮತ್ತಿತರರು ಪಾಲ್ಗೊಂಡಿದ್ದರು. ಆದರೆ, ಮುಡಾ ಹಗರಣ ವಿರೋಧಿಸಿ ಬಿಜೆಪಿ … Continued

ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ; ಕುಮಾರಸ್ವಾಮಿ, ಯಡಿಯೂರಪ್ಪನವರಿಂದ ಚಾಲನೆ

ಬೆಂಗಳೂರು : ಬಿಜೆಪಿ- ಜೆಡಿಎಸ್ ಜಂಟಿಯಾಗಿ ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಭ್ರಷ್ಟ, ಹಗರಣಗಳ … Continued

ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು. ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ … Continued

ಮಾನನಷ್ಟ ಮೊಕದ್ದಮೆ: ಖ್ಯಾತ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮನ್ಸ್

ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ಹೈಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ತಮಗೆ ಮಧ್ಯಂತರ ಪರಿಹಾರ ದೊರಕಿಸಿಕೊಡುವಂತೆ ನಖುವಾ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ರಾಠಿ ಅವರಿಗೆ ನೋಟಿಸ್‌ ನೀಡಿದೆ. ಆಗಸ್ಟ್ 6 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ನಖುವಾ ಪರವಾಗಿ ವಕೀಲರಾದ ರಾಘವ ಅವಸ್ಥಿ ಮತ್ತು ಮುಖೇಶ ಶರ್ಮಾ … Continued

ವಿಧಾನ ಪರಿಷತ್ತಿನ ವಿಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ ಮಾಡಿದ ಬಿಜೆಪಿ

ಬೆಂಗಳೂರು: ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ವಿಧಾನ ಪರಿಷತ್ತಿನ ವಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ. ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಈಗ ಬಿಜೆಪಿಯು ವಿಪಕ್ಷ ನಾಯಕನ ಸ್ಥಾನಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಿದೆ. ವಿಪಕ್ಷ … Continued

ಮುಡಾ ಸೈಟ್ ಹಂಚಿಕೆ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್​. ರಮೇಶ ಶನಿವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎನ್.ಆರ್​. ರಮೇಶ್ ಅವರು 400ಕ್ಕೂ ಹೆಚ್ಚು … Continued

ವಿಧಾನಸಭೆ ಉಪಚುನಾವಣೆ ಫಲಿತಾಂಶ: ಬಹುತೇಕ ಆಡಳಿತ ಪಕ್ಷಕ್ಕೆ ಮಣೆ ; ಇಂಡಿಯಾ ಮೈತ್ರಿಕೂಟ 10, ಬಿಜೆಪಿ 2 ಸ್ಥಾನಗಳಲ್ಲಿ ಜಯ

ನವದೆಹಲಿ: ಜುಲೈ 10 ರಂದು ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಮತದಾರರು ಆಡಳಿತಾರೂಢ ಪಕ್ಷಗಳಿಗೆ ಮಣೆ ಹಾಕಿದ್ದಾರೆ. ಏಳು ರಾಜ್ಯಗಳ 13 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಪಕ್ಷ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. … Continued