ಶಿವಮೊಗ್ಗ : ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ ; ಬಿಜೆಪಿ ನಾಯಕ ಭಾನುಪ್ರಕಾಶ ನಿಧನ

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಗೋಪಿ ಸರ್ಕಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನೆ ಕಾರ್ಯಕ್ರಮದ ನಂತರ ಭಾನುಪ್ರಕಾಶ ಅವರಿಗೆ ಹೃದಯಾಘಾತವಾಗಿದೆ. ಅವರು ಅಲ್ಲಿಯೇ … Continued

ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಜೊತೆಗಿನ ಮೋದಿ ಭೇಟಿ ಅಣಕಿಸಿದ ಕಾಂಗ್ರೆಸ್; ಭಾರೀ ಆಕ್ರೋಶದ ನಂತರ ಕ್ರೈಸ್ತರ ಕ್ಷಮೆಯಾಚನೆ

ನವದೆಹಲಿ : ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ವ್ಯಂಗ್ಯಾತ್ಮಕ ಪೋಸ್ಟ್ ಮಾಡಿದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕೇರಳ ಕಾಂಗ್ರೆಸ್‌ ಘಟಕವು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಿದೆ. ಅಳಿಸಲಾದ … Continued

ಉಪ ಸಭಾಪತಿ ಹುದ್ದೆ ನೀಡದಿದ್ರೆ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳಿಂದ ಸ್ಪರ್ಧೆ..?

ನವದೆಹಲಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿ ಸಚಿವ ಸಂಪುಟದ ರಚನೆಯೂ ಆಗಿದೆ. ಎನ್‌ಡಿಎ ಒಕ್ಕೂಟದ ಮುಂದೆ ಈಗ ಲೋಕಸಭೆ ಸ್ಪೀಕರ್ ಆಯ್ಕೆಯ ಸವಾಲಿದೆ. ಸರ್ಕಾರ ರಚನೆಯಾಗುವ ಮುನ್ನ ಜೆಡಿಯು ಮತ್ತು ಟಿಡಿಪಿ ಪಕ್ಷಗಳು ಸ್ಪೀಕರ್ ಹುದ್ದೆಗ ಪಟ್ಟು ಹಿಡಿದಿದೆ ಎಂದು ವರದಿಯಾಗಿತ್ತು. ಆ ವಿಷಯ ಸದ್ಯಕ್ಕೆ ತಣ್ಣಗಾಗಿದ್ದು ಎನ್‌ಡಿಎಯಿಂದ … Continued

ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’, ಮಾರ್ಕ್ಸ್‌ವಾದಿ ನಾಯಕನನ್ನು ತಮ್ಮ ʼರಾಜಕೀಯ ಗುರುʼ ಎಂದು ಬಣ್ಣಿಸಿದ ಕೇಂದ್ರದ ಬಿಜೆಪಿ ಸಚಿವ..!

ತ್ರಿಶೂರ್ : ಕೇಂದ್ರ ಸಚಿವ ಮತ್ತು ತ್ರಿಶೂರ್ ಸಂಸದ ಹಾಗೂ ನಟ ಸುರೇಶ ಗೋಪಿ ಅವರು ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ “ಭಾರತದ ಮಾತೆ”‌ ಇದ್ದಂತೆ ಮತ್ತು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ “ಧೈರ್ಯಶಾಲಿ ಆಡಳಿತಗಾರ” ಎಂದು ಬಣ್ಣಿಸಿದ್ದಾರೆ. ಕೇರಳದ  ಮಾರ್ಕ್ಸ್‌ವಾದಿ ಹಿರಿಯ ಇ.ಕೆ. ನಾಯನಾರ್ ತಮ್ಮ “ರಾಜಕೀಯ ಗುರುಗಳು” ಎಂದು … Continued

‘ಬಿಜೆಪಿ ದುರಹಂಕಾರ’ ಹೇಳಿಕೆಯ ಕೋಲಾಹಲದ ನಂತರ ಯೂ-ಟರ್ನ್ ಹೊಡೆದ ಆರ್‌ ಎಸ್‌ ಎಸ್ ನಾಯಕ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಆರ್‌ಎಸ್‌ಎಸ್‌ ಪ್ರಮುಖ ಇಂದ್ರೇಶಕುಮಾರ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಭಗವಾನ್‌ ರಾಮನ ಮಹಿಮೆ ಮರುಸ್ಥಾಪನೆಯ ಗುರಿಯ ಹೊಂದಿದ್ದವರು ಅಧಿಕಾರಕ್ಕೆ ಬಂದಿದ್ದಾರೆ. ಭಗವಾನ್‌ ರಾಮನನ್ನು ವಿರೋಧಿಸಿದವರು ಸೋತಿದ್ದಾರೆ ಎಂದು ಹೇಳಿದ್ದಾರೆ. . ಜೈಪುರ ಬಳಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ … Continued

ವೀಡಿಯೊ..| ದುರಹಂಕಾರಿಯಾದವರನ್ನು ಶ್ರೀರಾಮನೇ 241ಕ್ಕೆ ನಿಲ್ಲಿಸಿದ್ದಾನೆ : ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ನಾಯಕನ ವಾಗ್ದಾಳಿ

ಜೈಪುರ: ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದಿಂದ ಟೀಕೆಗೆ ಒಳಗಾಗಿದೆ, ಆರೆಸ್ಸೆಸ್ ನಾಯಕ ಇಂದ್ರೇಶಕುಮಾರ ಅವರು ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವಾದ ಬಿಜೆಪಿಯ ಇತ್ತೀಚಿನ ಕಳಪೆ ಪ್ರದರ್ಶನವನ್ನು “ದುರಹಂಕಾರ” ಎಂದು ಟೀಕಿಸಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶಕುಮಾರ ಅವರು, “ಶ್ರೀರಾಮನ ಭಕ್ತರು ಕ್ರಮೇಣ ದುರಹಂಕಾರಿಯಾದರು. … Continued

ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನಚರಣ ಮಾಝಿ ಪ್ರಮಾಣ ವಚನ : ಸಚಿವರ ಪಟ್ಟಿ

ಭುವನೇಶ್ವರ : ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮೋಹನ ಚರಣ ಮಾಝಿ ಅವರು ಬುಧವಾರ ಸಂಜೆ ಜನತಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ರಘುಬರದಾಸ ಅವರು ಅಧಿಕಾರಿಯಾಗಿ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ, ಬಿಜೆಪಿ ಪಕ್ಷದಿಂದ … Continued

ಒಡಿಶಾದಲ್ಲಿ ಸಿಎಂ ಸ್ಥಾನಕ್ಕೆ ಬಿಜೆಪಿಯಿಂದ ಅಚ್ಚರಿ ಆಯ್ಕೆ ; ಬುಡಕಟ್ಟು ನಾಯಕ ಮೋಹನ್ ಮಾಝಿ ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿ

ಭುವನೇಶ್ವರ (ಒಡಿಶಾ): ಅಚ್ಚರಿಯ ಆಯ್ಕೆಯಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಶಾಸಕ ಮತ್ತು ಪಕ್ಷದ ಬುಡಕಟ್ಟು ಮುಖವಾದ 52 ವರ್ಷದ ಮೋಹನ ಚರಣ ಮಾಂಝಿ ಅವರನ್ನು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಅಲ್ಲದೆ ಪಕ್ಷವು ಕೆ.ವಿ. ಸಿಂಗ್ ದೇವ್‌ ಮತ್ತು ಪ್ರವತಿ ಪರಿದಾ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ … Continued

ಪ್ರಧಾನಿ ಮೋದಿ ಸಂಪುಟಕ್ಕೆ ಸುರೇಶ ಗೋಪಿ ರಾಜೀನಾಮೆ? ಕೇರಳ ಸಂಸದ ಹೇಳಿದ್ದೇನು..?

ನವದೆಹಲಿ: ಕೇಂದ್ರ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ ಗೋಪಿ ಅವರು ತಾನು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಧ್ಯಮ ವರದಿಯಾಗಿದ್ದನ್ನು ತಳ್ಳಿಹಾಕಿದ್ದಾರೆ ಹಾಗೂ ಅದು ತಪ್ಪು ಸುದ್ದಿ ಎಂದು ಹೇಳಿದ್ದಾರೆ. ಕೆಲ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ತಳ್ಳಿಹಾಕಿರುವ ಸುರೇಶ ಗೋಪಿ, ಸೋಮವಾರ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, … Continued

ಬಿಜೆಪಿಯ ಅಚ್ಚರಿಯ ಆಯ್ಕೆ ; ಮೋದಿ 3.0 ಸರ್ಕಾರದಲ್ಲಿ ಮಂತ್ರಿಯಾದ ಬಿಜೆಪಿಯ ಅಲ್ಪಸಂಖ್ಯಾತ ಮುಖ ಈ ಜಾರ್ಜ್ ಕುರಿಯನ್ ಯಾರು..?

ವಕೀಲ ಮತ್ತು ಕೇರಳ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪ್ರಧಾನ ಕಾರ್ಯದರ್ಶಿಯಾಗಿರುವ ಜಾರ್ಜ್ ಕುರಿಯನ್ ಅವರು, ಅಚ್ಚರಿಯ ರೀತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ತ್ರಿಶೂರ್ ಸಂಸದ ಸುರೇಶ ಗೋಪಿ ಅವರನ್ನು ಹೊರತುಪಡಿಸಿ ಕೇರಳದಿಂದ ಎರಡನೇ ಸಚಿವರಾಗಿ ಸಚಿವ ಸಂಪುಟ ಸೇರಿದ್ದಾರೆ. ಸಮಾಜವಾದಿಗಳ ಒಂದು ಬಣವು 1980 … Continued