ಮೋದಿ ಸರ್ಕಾರದ ಕ್ಯಾಬಿನೆಟ್ ಸಚಿವರಾಗಿ ನಡ್ಡಾ ಪ್ರಮಾಣವಚನ ; ಮುಂದಿನ ಬಿಜೆಪಿ ಅಧ್ಯಕ್ಷ ಯಾರು? ಚರ್ಚೆಗೆ ಬಂದ 6 ಸಂಭವನೀಯ ಹೆಸರುಗಳು

ನವದೆಹಲಿ : ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನರೇಂದ್ರ ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಡ್ಡಾ ಅವರು ಜೂನ್ ಮುಕ್ತಾಯದ ವರೆಗೆ ಪಕ್ಷದ ಮುಖ್ಯಸ್ಥರಾಗಿರುತ್ತಾರೆ ಎಂಬ ತನ್ನ ಹಿಂದಿನ ಘೋಷಣೆಗೆ ಬಿಜೆಪಿ ಅಂಟಿಕೊಂಡಿರುವುದನ್ನು ಇದು ಸ್ಪಷ್ಟಪಡಿಸುತ್ತದೆ. ಅವರ ಅಧಿಕಾರಾವಧಿಯು 2023 ರ ಜನವರಿಯಲ್ಲಿ ಕೊನೆಗೊಂಡಿತು ಆದರೆ ಲೋಕಸಭೆ ಚುನಾವಣೆಯ … Continued

ನನ್ನ 18 ವರ್ಷದ ಸಾರ್ವಜನಿಕ ಸೇವೆ ಈ ರೀತಿ ಅಂತ್ಯವಾಗ್ತದೆ ಎಂದು ನಿರೀಕ್ಷಿಸಿರಲಿಲ್ಲ: ಮಾಜಿ ಸಚಿವ ರಾಜೀವ ಚಂದ್ರಶೇಖರ

ತಿರುವನಂತಪುರಂ : ತಮ್ಮ 18 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆ ಅಂತ್ಯಗೊಂಡಿದೆ ಎಂದು ಕೇಂದ್ರದ ಮಾಜಿ ರಾಜ್ಯ ಸಚಿವ ರಾಜೀವ ಚಂದ್ರಶೇಖರ ಭಾನುವಾರ ಹೇಳಿದ್ದಾರೆ. ಕಳೆದ ಮೋದಿ ಸರ್ಕಾರದಲ್ಲಿ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವರಾಗಿದ್ದ ರಾಜೀವ ಚಂದ್ರಶೇಖರ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ … Continued

ವೀಡಿಯೊ..| ಬಿಜೆಪಿಗೆ ಜಯ : ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲೇ ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿ…!

ತ್ರಿಶೂರ್‌ : ಶುಕ್ರವಾರ (ಜೂನ್ 7) ಕೇರಳದ ತ್ರಿಶೂರ್‌ನಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಕಚೇರಿಯೊಳಗೆ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ದೊಡ್ಡ ಹೊಡೆದಾಟ ನಡೆದಿದೆ. ತ್ರಿಶೂರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಸೋಲಿನ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾಗ ಈ ಘಟನೆ ನಡೆದಿದೆ. ಈ ಹಿಂದೆ, ಸಿಪಿಐ(ಎಂ) ಮತ್ತು ಕಾಂಗ್ರೆಸ್ “ಬಿಜೆಪಿ ಈ … Continued

ಈ ಸಲದ ಚುನಾವಣೆಯಲ್ಲಿ ಬಿಜೆಪಿ ಗೆದ್ದಷ್ಟು ಸ್ಥಾನಗಳನ್ನು ಮೂರು ಚುನಾವಣೆ ಸೇರಿಸಿದ್ರೂ ಕಾಂಗ್ರೆಸ್ಸಿಗೆ ಗೆಲ್ಲಲು ಸಾಧ್ಯವಾಗಿಲ್ಲ : ಮೋದಿ ಲೇವಡಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಸ್ಥಾನಗಳಷ್ಟನ್ನು ಕಾಂಗ್ರೆಸ್‌ ಮೂರು ಚುನಾವಣೆಗಳನ್ನು ಸೇರಿಸಿದರೂ ಅದಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ 100 ಸ್ಥಾನಗಳ ಗಡಿ ದಾಟಲು ವಿಫಲವಾಗಿದ್ದು, ಕಳೆದ ಮೂರು ಚುನಾವಣೆಗಳಲ್ಲಿ ಗೆದ್ದಿದ್ದನ್ನು ಸೇರಿಸಿದರೂ ಅದು ಬಿಜೆಪಿ ಒಂದು ಚುನಾವಣೆಯಲ್ಲಿ ಗೆದ್ದಷ್ಟು ಸ್ಥಾನಗಳಷ್ಟು ಆಗುವುದಿಲ್ಲ ಎಂದು … Continued

ಪರಿಷತ್​ ಪದವೀಧರ-ಶಿಕ್ಷಕರ ಕ್ಷೇತ್ರಗಳ ಚುನಾವಣೆ:: 3ರಲ್ಲಿ ಕಾಂಗ್ರೆಸ್, 3ರಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಗೆಲುವು ; ಕಾಂಗ್ರೆಸ್ಸಿಗೆ ಲಾಭ, ಬಿಜೆಪಿಗೆ ನಷ್ಟ

ಬೆಂಗಳೂರು : ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳು ಸೇರಿದಂತೆ ಒಟ್ಟು ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ೩ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು ವ್ಯಾಪ್ತಿಯ ಒಂದು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡು ಬಿಜೆಪಿ ಹಿನ್ನಡೆ ಅನುಭವಿಸಿದೆ. ಇಲ್ಲಿ ಕಾಂಗ್ರೆಸ್ … Continued

ಎನ್‌ ಡಿ ಎ ನಾಯಕನಾಗಿ ಮೋದಿ ಆಯ್ಕೆ : ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಧಾನಿಯಾಗಿ ಜೂನ್‌ 9ರಂದು ಪದಗ್ರಹಣ

ನವದೆಹಲಿ: ಹೊಸದಾಗಿ ಚುನಾಯಿತರಾದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಸದರು ಶುಕ್ರವಾರ ನರೇಂದ್ರ ಮೋದಿಯವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಮತ್ತು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರನ್ನು ಪ್ರಧಾನಿಗೆ ಹುದ್ದೆಗೆ ಸರ್ವಾನುಮತದಿಂದ ಅನುಮೋದಿಸಿದರು. ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರ ನಾಯಕರನ್ನಾಗಿ   ಅಧಿಕೃತವಾಗಿ … Continued

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ … Continued

ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ: ವಿಶೇಷ ನ್ಯಾಯಾಲಯದ ಮುಂದೆ ರಾಹುಲ್‌ ಗಾಂಧಿ ಇಂದು ಹಾಜರು

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಸಂಬಂಧ ತಮ್ಮ ವಿರುದ್ಧ ಹೂಡಲಾಗಿರುವ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ (ಜೂನ್‌ 7ಕ್ಕೆ) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ಅವರ ಮುಂದೆ ಖುದ್ದಾಗಿ ಹಾಜರಾಗಲಿದ್ದಾರೆ. ಬಿಜೆಪಿ ವಿಧಾನ ಪರಿಷತ್‌ ಕೇಶವ ಪ್ರಸಾದ ಹೂಡಿರುವ ಮಾನಹಾನಿ … Continued

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಭರ್ಜರಿ ಗೆಲುವು

ಮೈಸೂರು : ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಜೆಡಿಎಸ್-ಬಿಜೆಪಿ ಅಭ್ಯರ್ಥಿ ಜೆಡಿಎಸ್‌ನ ಭೋಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಮೊದಲ ಪ್ರಾಶಸ್ತ್ಯ ಮತದಲ್ಲೇ ಭೋಜೇಗೌಡ ಅವರು 5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು ಚಲಾವಣೆ ಆಗಿದ್ದು 19479 ಮತಗಳು 18,658 ಮತಗಳು ಸಿಂಧು … Continued

ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗೆ ಗೆಲುವು, ಕಾಂಗ್ರೆಸ್ಸಿಗೆ ಸೋಲು

ಮೈಸೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮತ ಎಣಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಸೋಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿ ವಿವೇಕಾನಂದ ಮೊದಲ ಗೆಲುವು ಸಾಧಿಸಿದ್ದಾರೆ. ಅವರು 4622 ಮತಗಳಿಂದ ಗೆದ್ದಿದ್ದಾರೆ. ಮರಿತಿಬ್ಬೇಗೌಡರು … Continued