ರಾಜ್ಯಸಭೆ ಚುನಾವಣೆ : ಕರ್ನಾಟಕದ 4 ಸ್ಥಾನಗಳಲ್ಲಿ ಕಾಂಗ್ರೆಸ್‌ 3, ಬಿಜೆಪಿ 1ರಲ್ಲಿ ಗೆಲುವು

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದ್ದು. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಲ್ಲಿ ಕಾಂಗ್ರೆಸ್ಸಿನ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಅವರು ಸೋತಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳಾದ ಅಜಯ ಮಾಕನ್ -47 ಮತಗಳು, ನಾಸೀರ್ ಹುಸೇನ್ – 47 … Continued

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ…!

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಐದನೇ ಅಭ್ಯರ್ಥಿಗೆ ಬಿಜೆಪಿ ಶಾಸಕ ಎಸ್‌. ಟಿ. ಸೋಮಶೇಖರ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಶಾಕ್‌ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ ಎಂಬುದನ್ನು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ. ಮತದಾನ ಮಾಡಿದ ನಂತರ ಮಾಧ್ಯಮಗಳ … Continued

‘ತಪ್ಪು ಮಾಡಿದ್ದೇನೆ….’: ವೀಡಿಯೊ ರಿಟ್ವೀಟ್ ಮಾಡಿದ್ದಕ್ಕೆ ಸುಪ್ರೀಂ ಕೋರ್ಟಿನಲ್ಲಿ ಅರವಿಂದ ಕೇಜ್ರಿವಾಲ್ ತಪ್ಪೊಪ್ಪಿಗೆ

ನವದೆಹಲಿ: ಯೂ ಟ್ಯೂಬರ್ ಧ್ರುವ ರಾಥಿ ಅವರು ಪೋಸ್ಟ್ ಮಾಡಿದ ಮಾನಹಾನಿಕರ ವೀಡಿಯೊವನ್ನು ಮರುಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. “ನಾನು ರಿಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ನಾನು ಹೇಳಬಲ್ಲೆ” ಎಂದು ಅವರು ಹೇಳಿದರು. ಕೇಜ್ರಿವಾಲ್ ಪರ ಹಿರಿಯ ವಕೀಲ … Continued

ಅರುಣಾಚಲ ಪ್ರದೇಶ : ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಕಾಂಗ್ರೆಸ್, ಎನ್‌ಪಿಪಿಯ ನಾಲ್ವರು ಶಾಸಕರು

ಅಗರ್ತಲಾ : ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ವಿಪಕ್ಷವಾದ ಕಾಂಗ್ರೆಸ್‌ನ ಇಬ್ಬರು ಶಾಸಕರು ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಯ ಇಬ್ಬರು ಶಾಸಕರು ಮುಖ್ಯಮಂತ್ರಿ ಪೆಮಾ ಖಂಡು ಅವರ ಸಮ್ಮುಖದಲ್ಲಿ ಆಡಳಿತಾರೂಢ ಬಿಜೆಪಿ ಸೇರಿದ್ದಾರೆ. ಇಟಾನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಶಾಸಕರಾದ ನಿನೊಂಗ್ ಎರಿಂಗ್, ವಾಂಗ್ಲಿಂಗ್ ಲೋವಾಂಗ್‌ಡಾಂಗ್ ಮತ್ತು … Continued

ಬಿಎಸ್‌ಪಿಗೆ ರಾಜೀನಾಮೆ ನೀಡಿದ ಸಂಸದ : ಬಿಜೆಪಿಗೆ ಸೇರ್ಪಡೆ

ನವದೆಹಲಿ: ಸಾರ್ವತ್ರಿಕ ಚುನಾವಣೆಗೆ ಮುನ್ನ ಮತ್ತೊಂದು ದೊಡ್ಡ ಪಕ್ಷಾಂತರದಲ್ಲಿ ಲೋಕಸಭೆ ಸಂಸದ ರಿತೇಶ ಪಾಂಡೆ ಅವರು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 42 ವರ್ಷದ ರಿತೇಶ ಪಾಂಡೆ ಅವರು ಉತ್ತರ ಪ್ರದೇಶದ ಅಂಬೇಡ್ಕರ ನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ತಂದೆ ರಾಕೇಶ ಪಾಂಡೆ ಉತ್ತರ ಪ್ರದೇಶ ವಿಧಾನಸಭೆಯಲ್ಲಿ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ತಮಿಳುನಾಡಿನ ಶಾಸಕಿ…!

ಚೆನ್ನೈ: ಮೂರು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ತಮಿಳುನಾಡಿನ ಎಸ್. ವಿಜಯಧರಣಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಸ್. ವಿಜಯಧರಣಿ ಅವರು ದೆಹಲಿಯಲ್ಲಿ ಕೇಂದ್ರ ಸಚಿವ ಎಲ್. ಮುರುಗನ್ ಮತ್ತು ತಮಿಳುನಾಡು ಚುನಾವಣಾ ಉಸ್ತುವಾರಿ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ ಮೆನನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ತಮ್ಮ ಈ ಕ್ರಮವು ದಕ್ಷಿಣ ರಾಜ್ಯದಲ್ಲಿ ಪ್ರಧಾನಿ … Continued

23 ಸಂಸದರ ಆಸ್ತಿ 15 ವರ್ಷಗಳಲ್ಲಿ ಸರಾಸರಿ 1,045%ರಷ್ಟು ಏರಿಕೆ : ಕರ್ನಾಟಕದ ಯಾವ ಸಂಸದರ ಆಸ್ತಿಯಲ್ಲಿ ಏರಿಕೆ ?

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕಳೆದ ಇಪ್ಪತ್ತು ವರ್ಷಗಳಲ್ಲಿ ಆಸ್ತಿ ಹೆಚ್ಚಿಸಿಕೊಂಡ ಸಂಸದರ ಪಟ್ಟಿ ಬಹಿರಂಗವಾಗಿದೆ. ವರದಿಯೊಂದರ ಪ್ರಕಾರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು 35.18 ಕೋಟಿ ರೂ.ಗಳಿಂದ 402.79 ಕೋಟಿರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಅಸೋಸಿಯೇಷನ್‌ … Continued

ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್‌ನಲ್ಲಿ ತಿರಸ್ಕೃತ; ಸರ್ಕಾರಕ್ಕೆ ಭಾರೀ ಮುಖಭಂಗ

ಬೆಂಗಳೂರು : ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ವಿಧಾನ ಪರಿಷತ್‌ನಲ್ಲಿ … Continued

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ‘40% ಕಮಿಷನ್’ ಆರೋಪದ ಪ್ರಕರಣ : ನ್ಯಾಯಾಲಯದಿಂದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಶಿವಕುಮಾರಗೆ ಸಮನ್ಸ್ ಜಾರಿ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರರ ವಿರುದ್ಧ “40 ಪರ್ಸೆಂಟ್ ಕಮಿಷನ್” ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ. ಮಾತ್ರವಲ್ಲದೇ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ. ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, … Continued

ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾದ ಮುದ್ದಹನುಮೇಗೌಡ : ಅಸಮಾಧಾನ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್ಸಿಗೆ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಸಚಿವರಾದ ಕೆ.ಎನ್‌. ರಾಜಣ್ಣ, ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಡಾ.ರಂಗನಾಥ್‌, ಕೆ.ವೈ.ನಂಜೇಗೌಡ … Continued