ಬೆಳಗಾವಿ ಪಾಲಿಕೆ ಮೇಯರ್‌, ಉಪಪೇಯರ್‌ ಸ್ಥಾನಕ್ಕೆ ಚುನಾವಣೆ : ಎರಡರಲ್ಲೂ ಬಿಜೆಪಿ ಗೆಲುವು

ಬೆಳಗಾವಿ: ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಯಲ್ಲಿ ಬಿಜೆಪಿಯ ಸವಿತಾ ಕಾಂಬಳೆ ಮೇಯರ್ ಆಗಿ ಮತ್ತು ಆನಂದ ಚವ್ಹಾಣ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಎರಡೂ ಸ್ಥಾನಗಳಲ್ಲಿಯೂ ಬಿಜೆಪಿ ಜಯಗಳಿಸಿದೆ. ಐದು ವರ್ಷದ ಬಳಿಕ ಪಾಲಿಕೆಯಲ್ಲಿ ಕನ್ನಡ ಭಾಷಿಕ ಸದಸ್ಯೆ ಮೇಯರ್ ಆಗಿ ಆಯ್ಕೆಯಾಗಿರುವುದು ಆಗಿರುವುದು ವಿಶೇಷವಾಗಿದೆ. … Continued

ಮಂಗಳೂರು ಶಾಲಾ ವಿವಾದ : ಇಬ್ಬರು ಬಿಜೆಪಿ ಶಾಸಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ನಗರದ ವೆಲೆನ್ಸಿಯಾ ಸಂತ ಜೆರೋಸಾ ಶಾಲಾ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆ ವೇಳೆ ಶಾಲಾ ಮಂಡಳಿಗೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಮೇಲೆ ಇಬ್ಬರು ಶಾಸಕರು ಹಾಗೂ ಇತರರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ … Continued

ವೀಡಿಯೊ..| ಪೊಲೀಸರ ಜೊತೆ ಘರ್ಷಣೆಯಲ್ಲಿ ಗಾಯಗೊಂಡ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ : ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಿಂದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ ಅವರು ಗಾಯಗೊಂಡಿದ್ದಾರೆ. ಮಜುಂದಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ವರದಿಯಾಗಿದೆ. ವರದಿಯ ಪ್ರಕಾರ, ಪೊಲೀಸ್ ಸಿಬ್ಬಂದಿ ಮಜುಂದಾರ್ ಅವರನ್ನು ಅವರನ್ನು ಅವರಿದ್ದ ಹೋಟೆಲ್‌ಗೆ ಕರೆದುಕೊಂಡು … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಲಾಲಬಹದ್ದೂರ ಶಾಸ್ತ್ರೀ ಮೊಮ್ಮಗ..

ನವದೆಹಲಿ: ಮಾಜಿ ಪ್ರಧಾನಿ ಲಾಲಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಹೊಡೆತವಾಗಿ, ಶಾಸ್ತ್ರಿ ಇಂದು, ಬುಧವಾರ ಮುಂಜಾನೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ತೊರೆದ ಕೆಲವು ಗಂಟೆಗಳ ನಂತರ ಅವರು ಭಾರತೀಯ ಜನತಾ … Continued

ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ಬಿಡುಗಡೆ ; ಜೆಪಿ ನಡ್ಡಾ, ಅಶೋಕ ಚವಾಣ ಸ್ಪರ್ಧೆ-ಶಿವಸೇನೆಯಿಂದ ಮಿಲಿಂದ್‌ ದಿಯೋರಾ ಕಣಕ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ತೊರೆದು ಒಂದು ದಿನದ ಮೊದಲು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಮವಾಗಿ ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಸ್ತುತ … Continued

ಕಾಂಗ್ರೆಸ್ ತೊರೆದ ಮರುದಿನವೇ ಬಿಜೆಪಿ ಸೇರಿದ ಅಶೋಕ ಚವಾಣ ; ನಾಳೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..?

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇಂದು, ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚವಾಣ ಅವರು ಫೆಬ್ರವರಿ 14 ರಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಆಘಾತ ನೀಡಿದ ಚವಾಣ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಪ್ರಾಥಮಿಕ … Continued

ವೀಡಿಯೊ…| ಮೋದಿಪರ ಘೋಷಣೆ ಕೂಗುತ್ತಿದ್ದವರ ಜೊತೆ ಹಸ್ತಲಾಘವ ಮಾಡಿದ ರಾಹುಲ್ ಗಾಂಧಿ : ವೀಕ್ಷಿಸಿ

ಛತ್ತೀಸ್‌ಗಢ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದ ಜನಸಮೂಹದತ್ತ ನಡೆದು ಅವರ ಕೈಕುಲುಕಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಪಕ್ಷವು “ಪ್ರೀತಿಯಲ್ಲಿ ದೊಡ್ಡ ಶಕ್ತಿ ಇದೆ” ಎಂದು ಹೇಳಿಕೆ ನೀಡಿದೆ. ಕಳೆದ ವಾರ ಒಡಿಶಾದ ಕೊರ್ಬಾದಿಂದ ಧೋಡಿಪಾರಾ ಮೂಲಕ ಕಟ್ಘೋರಾ ಮಾರ್ಗದಲ್ಲಿ ರಾಹುಲ್ ಗಾಂಧಿ … Continued

ಬಜೆಟ್‌ ಅಧಿವೇಶನ : ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಪಾಲ್ಗೊಂಡ ಬಿಜೆಪಿ ಸದಸ್ಯರು

ಬೆಂಗಳೂರು: ಸೋಮವಾರದಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವೇ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಆಗಮಿಸಿದ್ದು ವಿಶೇಷವಾಗಿತ್ತು. ಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದರು. ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ ಚರ್ಚೆ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ: ಪಕ್ಷಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ ಚವಾಣ ರಾಜೀನಾಮೆ ; 10-12 ಶಾಸಕರೊಂದಿಗೆ ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವನೆಗೆ ತಿಂಗಳುಗಳ ಮೊದಲು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಂಸದ ಅಶೋಕ ಚವಾಣ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಮೂಲಗಳ … Continued

2022-23ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಕಾಂಗ್ರೆಸ್ ಪಡೆದದ್ದಕ್ಕಿಂತ 7 ಪಟ್ಟು ಹೆಚ್ಚು ಹಣ ಪಡೆದ ಬಿಜೆಪಿ : ಅದು ಪಡೆದ ಹಣ ಎಷ್ಟೆಂದರೆ…

ನವದೆಹಲಿ : ಆಡಳಿತಾರೂಢ ಬಿಜೆಪಿಯು 2022-23ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಸುಮಾರು ₹ 1300 ಕೋಟಿಗಳನ್ನು ಸ್ವೀಕರಿಸಿದೆ, ಇದು ಅದೇ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಕಾಂಗ್ರೆಸ್ ಪಡೆದಿದ್ದಕ್ಕಿಂತ ಏಳು ಪಟ್ಟು ಹೆಚ್ಚು. 2022-23ರ ಹಣಕಾಸು ವರ್ಷದಲ್ಲಿ ಬಿಜೆಪಿಯ ಒಟ್ಟು ದೇಣಿಗೆ ₹ 2120 ಕೋಟಿಗಳಷ್ಟಿದ್ದು, ಇದರಲ್ಲಿ ಶೇ 61 ರಷ್ಟು ಚುನಾವಣಾ ಬಾಂಡ್‌ಗಳಿಂದ ಬಂದಿದೆ … Continued