ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ

ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು. “ನನ್ನ ಇತ್ತೀಚಿನ ಸಂದರ್ಶನಗಳಲ್ಲಿ … Continued

ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿರುವ ವಕೀಲ ದೇವರಾಜೇ ಗೌಡ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಶ್ಲೀಲ ವೀಡಿಯೊಗಳಿರುವ ಪೆನ್‌‌ಡ್ರೈವ್ ಹಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಸೂಚನೆಯಂತೆ ಮಾಡಿದ್ದೇನೆ ಎಂದು ಹೇಳಿದರೆ 100 ಕೋಟಿ ರೂಪಾಯಿ ಕೊಡುವುದಾಗಿ … Continued

ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

ನವದೆಹಲಿ: ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಕುಮಾರ ಅವರು ಶುಕ್ರವಾರ ಮುಂಬರುವ ಲೋಕಸಭೆ ಚುನಾವಣೆ 2024 ರ ಪ್ರಚಾರ ಮಾಡುತ್ತಿದ್ದಾಗ ಯುವಕನೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ ಈ ಸಂಬಂಧ ಇಬ್ಬರು ಆರೋಪಿಗಳನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಕನ್ನಯ್ಯಕುಮಾರ ಅವರಿಗೆ ಕಪಾಳಮೋಕ್ಷ … Continued

ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

ನವದೆಹಲಿ:  ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯಕ್ಕೆ ಹೋಲಿಸಿದರೆ ಈಗ ಏಕೆ ಪತ್ರಿಕಾಗೋಷ್ಠಿಗಳನ್ನು ನಡೆಸುವುದಿಲ್ಲ ಮತ್ತು ಏಕೆ ಪತ್ರಿಕಾ ಸಂದರ್ಶನಗಳನ್ನು ನೀಡುವುದಿಲ್ಲ ಎಂದು ಕೇಳಿದ ಪ್ರಶ್ನೆಗೆ ಪ್ರಧಾನಿ ಮೋದಿFront-lead  ಉತ್ತರಿಸಿದ್ದಾರೆ. ಮಾಧ್ಯಮಗಳ ಸ್ವರೂಪ ಬದಲಾಗಿದೆ ಮತ್ತು ಮಾಧ್ಯಮಗಳು ಈಗ ತಟಸ್ಥ ನಿಲುವಿನ ಸಂಸ್ಥೆಯಾಗಿ ಉಳಿದಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರು ತಾವು ಏಕೆ ಪತ್ರಿಕಾಗೋಷ್ಠಿಯನ್ನು ನಡೆಸುವುದಿಲ್ಲ … Continued

ಬಿಜೆಪಿ 300ರ ಆಸುಪಾಸು ಸ್ಥಾನ ಪಡೆಯಬಹದು; ಬಿಜೆಪಿ ಸಂಖ್ಯೆ ಕುಸಿಯುವ ಗ್ರೌಂಡ್ ರಿಯಾಲಿಟಿ ನನಗೆ ಕಾಣುತ್ತಿಲ್ಲ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ :  ರಾಜಕೀಯ ವಿಶ್ಲೇಷಕ ಪ್ರಶಾಂತ ಕಿಶೋರ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300ರ ಆಸುಪಾಸು ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ ಗೆಲ್ಲುವುದರಲ್ಲಿ ಯಾವುದೇ ಅರ್ಥಪೂರ್ಣ ಕುಸಿತದ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ. “ಎಲ್ಲ ಟೀಕೆಗಳು ಮತ್ತು ಚರ್ಚೆಗಳ ನಂತರ, ಭಾರತದ … Continued

ಬಿಜೆಪಿ ಹಿರಿಯ ನಾಯಕ- ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ನಿಧನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ಅವರು ಸೋಮವಾರ ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್‌)ಯಲ್ಲಿ ನಿಧನರಾದರು. 72 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಒಂದು ಕಾಲದಲ್ಲಿ ಬಿಹಾರದಲ್ಲಿ ಬಿಜೆಪಿಯ ಚಿರಪರಿಚಿತ ಮುಖವಾಗಿದ್ದ ಧೀಮಂತ … Continued

ವಿಧಾನ ಪರಿಷತ್ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್‌

ಉಡುಪಿ : ವಿಧಾನ ಪರಿಷತ್‌ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ತೀರ್ಮಾನಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ಕರಂಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪರಿಷತ್ತಿನ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ನೀಡಲಾಗಿದೆ. ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ … Continued

ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ಭಾರತ ಬಣ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಶುದ್ಧೀಕರಿಸಲಾಗುತ್ತದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಶುಕ್ರವಾರ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿದ ನಾನಾ ಪಟೋಲೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೇರಿದರೆ, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಶುದ್ಧೀಕರಿಸಲಾಗುತ್ತದೆ. ಅಲ್ಲಿರುವುದು … Continued

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 1 ರಂದು ಹಾಸನದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗೌಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಇತ್ತೀಚೆಗೆ ಅವರು ಪ್ರಜ್ವಲ್ ರೇವಣ್ಣ ಅವರ … Continued