ಜನಾಂಗೀಯ ಕಾಮೆಂಟ್‌ ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್‌ ಪಿತ್ರೋಡಾ

ನವದೆಹಲಿ : ಲೋಕಸಭೆ ಚುನಾವಣೆ ವೇಳೆ ತಮ್ಮ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಂವಹನ ಉಸ್ತುವಾರಿ ಜೈರಾಮ ರಮೇಶ ಅವರು ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ” ಸ್ಯಾಮ್ ಪಿತ್ರೋಡಾ … Continued

ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು : ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , .ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಬೆಂಗಳೂರಿನ … Continued

ವೀಡಿಯೊ..| ದಕ್ಷಿಣ ಭಾರತದವರು ಆಫ್ರಿಕನ್ನರಂತೆ, ಪೂರ್ವ ಭಾರತದವರು ಚೀನಿಗಳಂತೆ ಕಾಣ್ತಾರೆ….: ಭಾರೀ ವಿವಾದ ಸೃಷ್ಟಿಸಿದ ಪಿತ್ರೋಡಾ ಹೇಳಿಕೆ ; ಕಾಂಗ್ರೆಸ್ಸಿಗೆ ಮುಜುಗರ

ನವದೆಹಲಿ : ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ(Sam Pitroda) ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘‘ಪೂರ್ವ ಭಾರತದವರು, ಚೀನೀಯರಂತೆಯೂ ದಕ್ಷಿಣ ಭಾರತದವರು ಆಫ್ರಿಕನ್ನರಂತೆಯೂ ಹಾಗೂ ಪಶ್ಚಿಮ ಭಾರತದವರು ಅರಬ್ಬರಂತೆಯೂ ಕಾಣುತ್ತಾರೆ’’ ಎಂದು ಆಂಗ್ಲ ಪತ್ರಿಕೆ ದಿ ಸ್ಟೇಟ್ಸ್‌ಮನ್‌ಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿರುವುದು ಈಗ ಲೋಕಸಭಾ ಚುನಾವಣೆ ಮಧ್ಯೆ ಭಾರೀ ವಿವಾದ ಸೃಷ್ಟಿಸಿದೆ. … Continued

ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವೀಡಿಯೊವನ್ನು ‘ತಕ್ಷಣ’ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಗೆ ಸೂಚನೆ ನೀಡಿದೆ. ಈ ಸಂಬಂಧ ‘X’ ನ ನೋಡಲ್ ಅಧಿಕಾರಿಗೆ ಚುನಾವಣಾ ಆಯೋಗವು ಬರೆದ ಪತ್ರದಲ್ಲಿ, ಕರ್ನಾಟಕ ಬಿಜೆಪಿ ಘಟಕ ಮಾಡಿರುವ ಪೋಸ್ಟ್ … Continued

ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

ಚಂಡೀಗಢ: ಲೋಕಸಭೆ ಚುನಾವಣೆಯ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ಹರಿಯಾಣದ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ಮೂವರು ಸ್ವತಂತ್ರ ಶಾಸಕರು ಬೆಂಬಲ ಹಿಂಪಡೆದಿರುವುದಾಗಿ ಇಂದು ಮಂಗಳವಾರ ಪ್ರಕಟಿಸಿದ್ದಾರೆ. ಮೂವರು ಶಾಸಕರಾದ ಸೋಂಬೀರ್ ಸಾಂಗ್ವಾನ್, ರಣಧೀರ ಗೊಲ್ಲೆನ್ ಮತ್ತು ಧರಂಪಾಲ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. … Continued

26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

ಮುಂಬೈ : 26/11ರ ಮುಂಬೈ ದಾಳಿ ವೇಳೆ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಭಯೋತ್ಪಾದಕ ಅಜ್ಮಲ್ ಕಸಬ್ ಕೊಂದಿಲ್ಲ, ಆದರೆ ಆರ್‌ಎಸ್‌ಎಸ್-ಸಂಯೋಜಿತ ಪೋಲೀಸ್ ಅಧಿಕಾರಿಯೊಬ್ಬರು ಅವರನ್ನು ಹತ್ಯೆ ಮಾಡಿದ್ದಾರೆ ಮತ್ತು ವಕೀಲ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ, ಅವರು ಸತ್ಯವನ್ನು ಹತ್ತಿಕ್ಕಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರು ಹೇಳಿಕೆ ನೀಡಿರುವುದು … Continued

ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

ನವದೆಹಲಿ: ಲೋಕಸಭೆ ಚುನಾವಣೆಗೆ ಎಎಪಿ ಜೊತೆಗಿನ ಕಾಂಗ್ರೆಸ್‌ ಪಕ್ಷದ ಮೈತ್ರಿ ಮಾಡಿಕೊಂಡಿದ್ದನ್ನು ವಿರೋಧಿಸಿ ಕೆಲದಿನಗಳ ಹಿಂದೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಔಪಚಾರಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚದೇವ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ವೀಡಿಯೊ…| ‘ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ’ ಎಂದ ಕಾಂಗ್ರೆಸ್‌ ಹಿರಿಯ ನಾಯಕ…! ಟಿಎಂಸಿ ಕೆಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಬುಧವಾರ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ಬಹರಂಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued