ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ: ಪಕ್ಷಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ ಚವಾಣ ರಾಜೀನಾಮೆ ; 10-12 ಶಾಸಕರೊಂದಿಗೆ ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವನೆಗೆ ತಿಂಗಳುಗಳ ಮೊದಲು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಂಸದ ಅಶೋಕ ಚವಾಣ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಮೂಲಗಳ … Continued

2022-23ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಕಾಂಗ್ರೆಸ್ ಪಡೆದದ್ದಕ್ಕಿಂತ 7 ಪಟ್ಟು ಹೆಚ್ಚು ಹಣ ಪಡೆದ ಬಿಜೆಪಿ : ಅದು ಪಡೆದ ಹಣ ಎಷ್ಟೆಂದರೆ…

ನವದೆಹಲಿ : ಆಡಳಿತಾರೂಢ ಬಿಜೆಪಿಯು 2022-23ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಸುಮಾರು ₹ 1300 ಕೋಟಿಗಳನ್ನು ಸ್ವೀಕರಿಸಿದೆ, ಇದು ಅದೇ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಕಾಂಗ್ರೆಸ್ ಪಡೆದಿದ್ದಕ್ಕಿಂತ ಏಳು ಪಟ್ಟು ಹೆಚ್ಚು. 2022-23ರ ಹಣಕಾಸು ವರ್ಷದಲ್ಲಿ ಬಿಜೆಪಿಯ ಒಟ್ಟು ದೇಣಿಗೆ ₹ 2120 ಕೋಟಿಗಳಷ್ಟಿದ್ದು, ಇದರಲ್ಲಿ ಶೇ 61 ರಷ್ಟು ಚುನಾವಣಾ ಬಾಂಡ್‌ಗಳಿಂದ ಬಂದಿದೆ … Continued

ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ … Continued

ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ : ಬಿಜೆಪಿ-ಆರ್‌ಎಲ್‌ಡಿ ಮೈತ್ರಿ ಅಂತಿಮ; ಉತ್ತರ ಪ್ರದೇಶದ ೨ ಲೋಕಸಭಾ ಕ್ಷೇತ್ರದಲ್ಲಿ ಆರ್‌ಎಲ್‌ಡಿ ಸ್ಪರ್ಧೆ-ಮೂಲಗಳು

ಲಕ್ನೋ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ರಾಷ್ಟ್ರೀಯ ಲೋಕದಳ (RLD) ಹೆಜ್ಜೆ ಹಾಕಲಿದೆ ಎಂದು ವರದಿಗಳು ತಿಳಿಸಿವೆ. ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲಿದ್ದು, ಭಾರತೀಯ ಜನತಾ ಪಕ್ಷವು (ಬಿಜೆಪಿ) ಆರ್‌ಎಲ್‌ಡಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. 2+1 ಸೂತ್ರವನ್ನು ಎರಡೂ ಪಕ್ಷಗಳು ಒಪ್ಪಿಕೊಂಡಿವೆ ಎಂದು ವರದಿಗಳು ತಿಳಿಸಿವೆ. 2+1 ಸೂತ್ರ   ಉಭಯ ಪಕ್ಷಗಳು … Continued

ಲೋಕಸಭೆಗೆ ಈಗಲೇ ಚುನಾವಣೆ ನಡೆದರೆ ಅಧಿಕಾರ ಯಾರಿಗೆ : ಮೋದಿಗೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? : ಇಂಡಿಯಾ ಟುಡೇ ಮೂಡ್‌ ಆಫ್‌ ದಿ ನೇಶನ್‌ ಸರ್ವೆಯಲ್ಲಿ ಬಹಿರಂಗ

ನವದೆಹಲಿ; 2024 ರ ಲೋಕಸಭಾ ಚುನಾವಣೆಯನ್ನು ಸಮೀಪಿಸುತ್ತಿರುವಾಗ, ಮೂಡ್ ಆಫ್ ದಿ ನೇಷನ್ (Mood of the Nation) ಸಮೀಕ್ಷೆಯು ಈಗಲೇ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಹೇಳಿದೆ. ಆದಾಗ್ಯೂ, ಇದು … Continued

ಕರ್ನಾಟಕಕ್ಕೆ ಎಲ್ಲಿ ಹಣ ನೀಡಿಲ್ಲ ? ಎಲ್ಲಿ ಕಡಿಮೆ ಹಣ ಸಿಗ್ತಿದೆ..? : ಕರ್ನಾಟಕಕ್ಕೆ ಕೊಟ್ಟ ಹಣದ ಲೆಕ್ಕ ನೀಡಿ ಮರುಪ್ರಶ್ನಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ತೆರಿಗೆ ಹಂಚಿಕೆ ಮತ್ತು ಕೇಂದ್ರದ ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ದಿನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗದ ಶಿಫಾರಸುಗಳನ್ನು “ಕೊನೆಯ ಪದದವರೆಗೆ” ಅನುಸರಿಸಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ವಿತ್ತ ಸಚಿವರು ಅಂಕಿಅಂಶಗಳನ್ನು … Continued

ವೀಡಿಯೊ…| ಚಂಡೀಗಢ ಮೇಯರ್ ಚುನಾವಣೆ : ಮತಪತ್ರಗಳ ಮೇಲೆ ರಿಟರ್ನಿಂಗ್ ಆಫೀಸರ್ ಟಿಕ್ ಮಾಡುವ ಮತ್ತೊಂದು ವೀಡಿಯೊ ವೈರಲ್‌

ಚಂಡೀಗಢ : ಚಂಡೀಗಢದ ಮೇಯರ್ ಚುನಾವಣೆಯ ವಿವಾದದ ಮತ್ತೊಂದು ಟ್ವಿಸ್ಟ್‌ನಲ್ಲಿ, ಹೊಸ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ, ಇದರಲ್ಲಿ ಸಭಾಂಗಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಪ್ರಿಸೈಡಿಂಗ್ ಆಫೀಸರ್ ಅನಿಲ ಮಸಿಹ್ ಅವರು ಮತಪತ್ರಗಳಿಗೆ ಸಹಿ ಹಾಕುತ್ತಿರುವುದನ್ನು ಕಾಣಬಹುದಾಗಿದೆ. ಜನವರಿ 30 ರಂದು ನಡೆದ ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ವಿಜೇತರಾಗಿ ಹೊರಹೊಮ್ಮಿದ ಚುನಾವಣೆಯ ನ್ಯಾಯಸಮ್ಮತತೆಯ ಬಗ್ಗೆ ಪ್ರಶ್ನಿಸಿ … Continued

ಪ್ರಜಾಪ್ರಭುತ್ವವನ್ನು ಈ ರೀತಿ ಕಗ್ಗೊಲೆ ಮಾಡಲು ಬಿಡುವುದಿಲ್ಲ: ಚಂಡೀಗಢ ಮೇಯರ್ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್‌ ಸಿಡಿಮಿಡಿ

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿಯನ್ನು ಕಾನೂನುರೀತ್ಯಾ ವಿಚಾರಣೆಗೆ ಒಳಪಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಚುನಾವಣಾಧಿಕಾರಿಯು ಮತಪತ್ರ ವಿರೂಪಗೊಳಿಸುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ನ್ಯಾಯಾಲಯ ವಿಚಾರಣೆ ವೇಳೆ ಹೇಳಿತು. ಮೇಯರ್ ಚುನಾವಣೆಯಲ್ಲಿ ಸೋತ ಆಮ್ ಆದ್ಮಿ ಪಕ್ಷದ (ಎಎಪಿ) … Continued

ಯುಪಿಎ ಸರ್ಕಾರ V/S ಮೋದಿ ಸರ್ಕಾರ : ಕೇಂದ್ರದ ಅನುದಾನದ ಲೆಕ್ಕ ನೀಡಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಜೆಪಿ

ಬೆಂಗಳೂರು: ತೆರಿಗೆ ರೂಪದಲ್ಲಿ ಕರ್ನಾಟಕದಿಂದ ಹಣ ಸಂಗ್ರಹವಾದರೂ ಮೋದಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಹಣ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸುದ್ದಿಗೋಷ್ಠಿಯಲ್ಲಿ ಆರೋಪಿದ ಬೆನ್ನಲ್ಲೇ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್‌ ಸರ್ಕಾರ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ ಎಂದು ರಾಜ್ಯ ಬಿಜೆಪಿ … Continued

ಅಯೋಧ್ಯೆ ರಾಮಮಂದಿರ ಕುರಿತು ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ ಅಯ್ಯರ್ ಪುತ್ರಿ ವಿರುದ್ಧ ದೂರು ದಾಖಲು

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠೆ’ ಖಂಡಿಸಿ ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ವಿರುದ್ಧ ದೂರು ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ನಾಯಕರಾದ ಅಜಯ ಅಗರ್ವಾಲ್ ಅವರು ದೆಹಲಿಯ ಸೈಬರ್ ಕ್ರೈಂ ಪೊಲೀಸ್ … Continued