ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ಹುಬ್ಬಳ್ಳಿ: ವಿಧಾನ ಪರಿಷತ್‌ ಬಿಜೆಪಿ‌ ಸದಸ್ಯ ಕೆ.ಪಿ.ನಂಜುಂಡಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿನ‌ ಸಭಾಪತಿಯವರ ಗೃಹ ಕಚೇರಿಗೆ ಆಗಮಿಸಿದ ಕೆ.ಪಿ.ನಂಜುಂಡಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ. ಅವರು ಬುಧವಾರ (ಏಪ್ರಿಲ್‌  24) ಬೆಳಿಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯಿಂದ ನನ್ನನ್ನು ಉಚ್ಚಾಟಿಸಿರುವುದಕ್ಕೆ ಹೆದರುವುದಿಲ್ಲ ಎಂದು ಕೆ.ಎಸ್‌.ಈಶ್ವರಪ್ಪ ಸೋಮವಾರ ಹೇಳಿದ್ದಾರೆ. ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ನನ್ನನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂಬ ವಿಷಯ ಮಾಧ್ಯಮಗಳ ಮೂಲಕವೇ ನನಗೆ ಗೊತ್ತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.ನಾನು ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆ. ಅದರಂತೆ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ … Continued

ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ…!

ಸೂರತ್‌ : ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾಧಿಕಾರಿ ಅನರ್ಹಗೊಳಿಸಿದ್ದರಿಂದ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ನಂತರ ಗುಜರಾತಿನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಎರಡು ವಾರಗಳ ಮೊದಲು ಮುಖೇಶ ದಲಾಲ್ ಅವರನ್ನು ವಿಜಯಿ ಎಂದು ಘೋಷಿಸಲಾಯಿತು. … Continued

ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

ಬೆಂಗಳೂರು: ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸೋಮವಾರ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಸಂಜೆ ರಾಜ್ಯ ಬಿಜೆಪಿ ಘಟಕದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ನೀವು ಶಿವಮೊಗ್ಗದಿಂದ ಸ್ಪರ್ಧೆ ಮಾಡಿರುವುದು ಪಕ್ಷದ ಮುಜುಗರಕ್ಕೆ ಕಾರಣವಾಗಿದೆ. ಇದು ಪಕ್ಷದ ಶಿಸ್ತು … Continued

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ : ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ರಾಜ್ಯಾದ್ಯಂತ ಕಾನೂಣು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಳೆ ಸೋಮವಾರ (ಏಪ್ರಿಲ್ 22) ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿರುವ ಅವರು, ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ. ಇದನ್ನು ಪೋಲಿಸರು … Continued