ಲೋಕಸಭೆಗೆ ಈಗಲೇ ಚುನಾವಣೆ ನಡೆದರೆ ಅಧಿಕಾರ ಯಾರಿಗೆ : ಮೋದಿಗೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? : ಇಂಡಿಯಾ ಟುಡೇ ಮೂಡ್‌ ಆಫ್‌ ದಿ ನೇಶನ್‌ ಸರ್ವೆಯಲ್ಲಿ ಬಹಿರಂಗ

ನವದೆಹಲಿ; 2024 ರ ಲೋಕಸಭಾ ಚುನಾವಣೆಯನ್ನು ಸಮೀಪಿಸುತ್ತಿರುವಾಗ, ಮೂಡ್ ಆಫ್ ದಿ ನೇಷನ್ (Mood of the Nation) ಸಮೀಕ್ಷೆಯು ಈಗಲೇ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಹೇಳಿದೆ. ಆದಾಗ್ಯೂ, ಇದು … Continued

ಕರ್ನಾಟಕಕ್ಕೆ ಎಲ್ಲಿ ಹಣ ನೀಡಿಲ್ಲ ? ಎಲ್ಲಿ ಕಡಿಮೆ ಹಣ ಸಿಗ್ತಿದೆ..? : ಕರ್ನಾಟಕಕ್ಕೆ ಕೊಟ್ಟ ಹಣದ ಲೆಕ್ಕ ನೀಡಿ ಮರುಪ್ರಶ್ನಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ತೆರಿಗೆ ಹಂಚಿಕೆ ಮತ್ತು ಕೇಂದ್ರದ ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ದಿನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗದ ಶಿಫಾರಸುಗಳನ್ನು “ಕೊನೆಯ ಪದದವರೆಗೆ” ಅನುಸರಿಸಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ವಿತ್ತ ಸಚಿವರು ಅಂಕಿಅಂಶಗಳನ್ನು … Continued

ವೀಡಿಯೊ…| ಚಂಡೀಗಢ ಮೇಯರ್ ಚುನಾವಣೆ : ಮತಪತ್ರಗಳ ಮೇಲೆ ರಿಟರ್ನಿಂಗ್ ಆಫೀಸರ್ ಟಿಕ್ ಮಾಡುವ ಮತ್ತೊಂದು ವೀಡಿಯೊ ವೈರಲ್‌

ಚಂಡೀಗಢ : ಚಂಡೀಗಢದ ಮೇಯರ್ ಚುನಾವಣೆಯ ವಿವಾದದ ಮತ್ತೊಂದು ಟ್ವಿಸ್ಟ್‌ನಲ್ಲಿ, ಹೊಸ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ, ಇದರಲ್ಲಿ ಸಭಾಂಗಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಪ್ರಿಸೈಡಿಂಗ್ ಆಫೀಸರ್ ಅನಿಲ ಮಸಿಹ್ ಅವರು ಮತಪತ್ರಗಳಿಗೆ ಸಹಿ ಹಾಕುತ್ತಿರುವುದನ್ನು ಕಾಣಬಹುದಾಗಿದೆ. ಜನವರಿ 30 ರಂದು ನಡೆದ ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ವಿಜೇತರಾಗಿ ಹೊರಹೊಮ್ಮಿದ ಚುನಾವಣೆಯ ನ್ಯಾಯಸಮ್ಮತತೆಯ ಬಗ್ಗೆ ಪ್ರಶ್ನಿಸಿ … Continued

ಪ್ರಜಾಪ್ರಭುತ್ವವನ್ನು ಈ ರೀತಿ ಕಗ್ಗೊಲೆ ಮಾಡಲು ಬಿಡುವುದಿಲ್ಲ: ಚಂಡೀಗಢ ಮೇಯರ್ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್‌ ಸಿಡಿಮಿಡಿ

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿಯನ್ನು ಕಾನೂನುರೀತ್ಯಾ ವಿಚಾರಣೆಗೆ ಒಳಪಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಚುನಾವಣಾಧಿಕಾರಿಯು ಮತಪತ್ರ ವಿರೂಪಗೊಳಿಸುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ನ್ಯಾಯಾಲಯ ವಿಚಾರಣೆ ವೇಳೆ ಹೇಳಿತು. ಮೇಯರ್ ಚುನಾವಣೆಯಲ್ಲಿ ಸೋತ ಆಮ್ ಆದ್ಮಿ ಪಕ್ಷದ (ಎಎಪಿ) … Continued

ಯುಪಿಎ ಸರ್ಕಾರ V/S ಮೋದಿ ಸರ್ಕಾರ : ಕೇಂದ್ರದ ಅನುದಾನದ ಲೆಕ್ಕ ನೀಡಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಜೆಪಿ

ಬೆಂಗಳೂರು: ತೆರಿಗೆ ರೂಪದಲ್ಲಿ ಕರ್ನಾಟಕದಿಂದ ಹಣ ಸಂಗ್ರಹವಾದರೂ ಮೋದಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಹಣ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸುದ್ದಿಗೋಷ್ಠಿಯಲ್ಲಿ ಆರೋಪಿದ ಬೆನ್ನಲ್ಲೇ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್‌ ಸರ್ಕಾರ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ ಎಂದು ರಾಜ್ಯ ಬಿಜೆಪಿ … Continued

ಅಯೋಧ್ಯೆ ರಾಮಮಂದಿರ ಕುರಿತು ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ ಅಯ್ಯರ್ ಪುತ್ರಿ ವಿರುದ್ಧ ದೂರು ದಾಖಲು

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠೆ’ ಖಂಡಿಸಿ ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ವಿರುದ್ಧ ದೂರು ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ನಾಯಕರಾದ ಅಜಯ ಅಗರ್ವಾಲ್ ಅವರು ದೆಹಲಿಯ ಸೈಬರ್ ಕ್ರೈಂ ಪೊಲೀಸ್ … Continued

ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued

ವೀಡಿಯೊ…| ಬಿಜೆಪಿ 400 ಸ್ಥಾನ ಗೆಲ್ಲಲಿದೆ : ರಾಜ್ಯಸಭೆಯಲ್ಲಿ ಹೀಗೆಂದು ಭವಿಷ್ಯ ನುಡಿದ ಮಲ್ಲಿಕಾರ್ಜುನ್ ಖರ್ಗೆ…!

ನವದೆಹಲಿ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣವು ಆಡಳಿತ ಪಕ್ಷದ ಸಾಲಿನಲ್ಲಿ ಭಾರೀ ಖುಷಿಗೆ ಕಾರಣವಾದ ಪ್ರಸಂಗವು ರಾಜ್ಯಸಭೆಯಲ್ಲಿ ನಡೆದಿದೆ. ಖರ್ಗೆ ಅವರ ಮಾತಿಗೆ ಆಡಳಿತ ಪಕ್ಷದ ಸಂಸದರೆಲ್ಲರೂ ಬೆಂಚ್‌ ಗುದ್ದಿ ಸ್ವಾಗತಿಸಿದ ಅಪರೂಪದ ವಿದ್ಯಮಾನ ಇದಾಗಿದೆ. ಆಡಳಿತಾರೂಢ ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಅಬ್ ತೋ 400 ಪಾರ್’ ಹೋ … Continued

ಹಿಂದಿ ಭಾಷಿಕ ರಾಜ್ಯಗಳಲ್ಲಿ ಕಾಂಗ್ರೆಸ್‌ 40 ಸ್ಥಾನ ಗೆಲ್ಲುವುದು ಅನುಮಾನ: ಮಮತಾ ಬ್ಯಾನರ್ಜಿ

ಕೋಲ್ಕತ್ತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ 40 ಸ್ಥಾನಗಳನ್ನು ಪಡೆಯುವ ಬಗ್ಗೆ ಅನುಮಾನವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಉಳಿಸಿಕೊಂಡಿರುವ ಬಾಕಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಂಗಾಳದ ಮೂಲಕ ಸಂಚರಿಸುವ ಭಾರತ … Continued

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ; ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರ-ಮೊಮ್ಮಗನಿಗೆ ಗಾಯ

ಜೈಪುರ: ಮಂಗಳವಾರ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಕೇಂದ್ರ ಸಚಿವ ಜಸ್ವಂತ ಸಿಂಗ್‌ ಪುತ್ರ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. 59 ವರ್ಷದ ಮಾನವೇಂದ್ರ ಸಿಂಗ್‌ ಕೂಡ ಕಾರಿನಲ್ಲಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಮಯದಲ್ಲಿ ಮಾನವೇಂದ್ರ ಸಿಂಗ್ … Continued