ಬಿಜೆಪಿ ಸೇರಿದ ಪಶ್ಚಿಮ ಬಂಗಾಳದ ಹಿರಿಯ ನಾಯಕ ದಿನೇಶ ತ್ರಿವೇದಿ

ನವ ದೆಹಲಿ: ಪಶ್ಚಿಮ ಬಂಗಾಳ ಚುನಾವಣೆಗೆ ಕೆಲವೇ ದಿನಗಳಿರುವಾಗ ಮತ್ತೊಂದು ಮತ್ತೊಂದು ಶಾಕ್‌ ಆಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಹಾಗೂ ರೈಲ್ವೆ ಖಾತೆ ಮಾಜಿ ಸಚಿವ ದಿನೇಶ್ ತ್ರಿವೇದಿ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಹಿರಿಯ ನಾಯಕ ದಿನೇಶ್ ತ್ರಿವೇದಿ ದೆಹಲಿಯಲ್ಲಿ ಶನಿವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. … Continued

ರಾಸಲೀಲೆ ಸಿಡಿ ವಿಚಾರ: ಸಿಎಂ, ಬಿಜೆಪಿ ನಾಯಕರ ಬಳಿಯೇ ಪ್ರತಿಕ್ರಿಯೆ ಕೇಳಿ: ಎಚ್‌ಡಿಕೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ವಿಚಾರದ ಆರೋಪ ಕುರಿತು ತಾನು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಲೀಲೆ ಸಿಡಿ ಆರೋಪದ ವಿಚಾರದ ಬಗ್ಗೆ ಚರ್ಚೆ ಮಾಡುವುದು ಶೋಭೆ ತರುವುದಿಲ್ಲ. ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ ಎಂದರು. ಆದರೆ ರಾಜಕೀಯ ವ್ಯಕ್ತಿಗಳ ಈ ರೀತಿಯ … Continued

ಚುನಾವಣಾ ಫಲಿತಾಂಶಕ್ಕೆ ಮೊದಲೇ ದೀದಿ ಬಿಟ್ಟುಹೋದ್ರಾ ಪ್ರಶಾಂತ್: ಬಿಜೆಪಿ ವ್ಯಂಗ್ಯ

ನವ ದೆಹಲಿ: ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಪ್ರಧಾನ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ. ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ “ಪ್ರಶಾಂತ್ ಅವರು ಕಾಂಗ್ರೆಸ್ ಸೇರಲು “ದೀದಿ”ಯನ್ನು ಈಗಲೇ ಬಿಟ್ಟು ಹೋಗಿದ್ದಾರೆ” ಎಂದು ವ್ಯಂಗ್ಯ ಮಾಡಿದೆ. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, … Continued

ಬಿಜೆಪಿ ಭ್ರಷ್ಟಾಚಾರದ ಪರ ನಿಂತಿದೆ: ಸ್ಟಾಲಿನ್‌

ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಭ್ರಷ್ಟಾಚಾರದ ಪರ ನಿಂತಿದೆ ಎಂದು ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್‌ ಆರೋಪಿಸಿದರು. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪನ್ನೀರಸೆಲ್ವಂ ಕಮೀಶನ್‌, ಕಲೆಕ್ಷನ್‌, ಕರಪ್ಷನ್‌ ಮಾಡುವ ಮೂಲಕ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಬಿಜೆಪಿ ಇಂಥವರನ್ನು ಬೆಂಬಲಿಸುತ್ತಿದೆ ಎಂದರು. ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ರವಿವಾರದಿಂದ ಆರಂಭಗೊಂಡಿದೆ. … Continued

ಇಂದು ಎಐಎಡಿಎಂಕೆ ಮಿತ್ರ ಪಕ್ಷಗಳ ಸೀಟುಗಳ ಹಂಚಿಕೆ ಅಂತಿಮ..?

ಎಐಎಡಿಎಂಕೆ ಸೋಮವಾರ ಸಂಜೆ ಬಿಜೆಪಿ ಸೇರಿದಂತೆ ತನ್ನ ಮಿತ್ರ ಪಕ್ಷಗಳ ಜೊತೆ ಸೀಟು ಹಂಚಿಕೆ ಅಂತಿಮಗೊಳಿಸುವ ನಿರೀಕ್ಷೆಯಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 25-30 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲು ಪ್ರಯತ್ನಿಸಿವೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ನಡುವೆ ಭಾನುವಾರ ತಡರಾತ್ರಿ ನಡೆದ … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ:ಬಿಕೆಯು ಮುಖಂಡ ನರೇಶ ಟಿಕಾಯಿತ್‌ ಘೋಷಣೆ

ಲಕ್ನೋ: ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಮೋದಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ನರೇಶ್ ಟಿಕಾಯಿತ್‌ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸುವುದಾಗಿ ಗುರುವಾರ ಪ್ರಕಟಿಸಿದರು. ಕಿಸಾನ್ ಮಹಾಪಂಚಾಯತ ಸಮಾವೇಶಕ್ಕೆ ಬಸಿತ್‌ಗೆ ಹೋಗುವ ದಾರಿಯಲ್ಲಿ, ಭಗವಾನ್ ರಾಮ್ ಲಲ್ಲಾ ಮತ್ತು ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಲು … Continued

ಬಿಜೆಪಿ ಸೇರಿದ ಬಂಗಾಳ ನಟಿ ಪಾಯಲ್‌ ಸರ್ಕಾರ್‌

ಕೋಲ್ಕತ್ತ: ಬಂಗಾಳಿ ನಟಿ ಪಾಯಲ್‌ ಸರ್ಕಾರ್‌ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ ರಾಜ್ಯ ಪಕ್ಷದ ಮುಖ್ಯಸ್ಥ ದಿಲೀಪ್ ಘೋಷ್ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತಿಯಲ್ಲಿ ಕೇಸರಿ ಪಕ್ಷಕ್ಕೆ ಸೇರಿಕೊಂಡರು. ಕಳೆದ ವಾರ ಜನಪ್ರಿಯ ಬಂಗಾಳಿ ನಟ ಯಶ್ ದಾಸ್‌ಗುಪ್ತಾ ಅವರು ಬಿಜೆಪಿಗೆ ಸೇರಿದರು. ೨ ದಿನಗಳ ಹಿಂದೆ ಮಾಜಿ ಕ್ರಿಕೆಟಿಗ … Continued

ಬಸವಕಲ್ಯಾಣ ಉಪಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ

ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಯವರಾದ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ಟಿಕೇಟ್‌ ಆಕಾಂಕ್ಷಿಗಳ ಹಾಗೂ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವರಾದ ಪ್ರಭು ಚೌವ್ಹಾಣ, ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದ ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ಶಾಸಕರಾದ … Continued

೧೫೦೦ ಸಮಾವೇಶಗಳು, ೧೫,೦೦೦ ವಾಟ್ಸಾಪ್‌ ಗ್ರುಪ್‌ಗಳು: ಪಶ್ಚಿಮ ಬಂಗಾಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ…!

ನವ ದೆಹಲಿ: ಮುಂಬರುವ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ 1,500 ಕ್ಕೂ ಹೆಚ್ಚು ಬೃಹತ್‌ ಸಮಾವೇಶಗಳು, 15,000 ವಾಟ್ಸಾಪ್ ಗುಂಪುಗಳು ಮತ್ತು ಪಕ್ಷದ ಪ್ರಮುಖ ಮುಖಂಡರು ಶಿಬಿರ ನಡೆಸಲು ಬಿಜೆಪಿ ತಯಾರಿ ನಡೆಸುತ್ತಿದೆ. ಪಶ್ಚಿಮ ಬಂಗಾಳದ ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರ ಪ್ರಕಾರ, ಮತದಾರರನ್ನು ತಲುಪಲು ಕನಿಷ್ಠ 1,500 ದೊಡ್ಡ ಮತ್ತು ಸಣ್ಣ ಸಮಾವೇಶಗಳನ್ನು ನಡೆಸುವಂತೆ ಬಿಜೆಪಿ ಕೇಂದ್ರ … Continued

ಗುಜರಾತ್‌ ಪುರಸಭೆ ಚುನಾವಣೆ: ೬ರಲ್ಲೂ ಬಿಜೆಪಿ ಜಯ, ಸೂರತ್‌ನಲ್ಲಿ ಪ್ರತಿಪಕ್ಷವಾಗಿ ಎಎಪಿ

ಎಲ್ಲಾ ಆರು ಗುಜರಾತ್ ಪುರಸಭೆಗಳಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡಿಂಡಿದೆ.   ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯದಲ್ಲಿ ತನ್ನ ಮೊದಲ ಸ್ಪರ್ಧೆಯಲ್ಲಿ 27 ಸ್ಥಾನಗಳನ್ನು ಗೆದ್ದಿದೆ. ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ 21 ಸ್ಥಾನಗಳಲ್ಲಿ ಸ್ಪರ್ಧಿಸಿದ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್-ಮುಸ್ಲೀಮೀನ್, ಏಳು ಸ್ಥಾನಗಳನ್ನು ಗೆದ್ದಿದೆ, ಅವುಗಳನ್ನು ಕಾಂಗ್ರೆಸ್‌ನಿಂದ ವಶಪಡಿಸಿಕೊಂಡಿದೆ. ಕಾಂಗ್ರೆಸ್ ನಿಂದ. ಫೆಬ್ರವರಿ 21 ರಂದು ಅಹಮದಾಬಾದ್, ಸೂರತ್, … Continued