ಪುದುಚೆರಿಯಲ್ಲಿ ಆಪರೇಶನ್‌ ಕಮಲ: ಸಿಎಂ ನಾರಾಯಣಸ್ವಾಮಿ ಆರೋಪ

ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಕಾಂಗ್ರೆಸ್‌-ಡಿಎಂಕೆ ಸಮ್ಮಿಶ್ರ ಸರಕಾರ ಅಲ್ಪಮತಕ್ಕೆ ಕುಸಿದಿರುವುದರಿಂದ ಬಿಜೆಪಿ ಆಪರೇಶನ್‌ ಕಮಲ ಮಾಡುತ್ತಿದೆ ಎಂದು ಮುಖ್ಯಮಂತ್ರಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ. ನಾರಾಯಣಸ್ವಾಮಿ ಅವರ ಆಪ್ತ ಎ. ಜಾನ್‌ಕುಮಾರ ರಾಜೀನಾಮೆಯೊಂದಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರ ಸಂಖ್ಯೆ ೧೦ಕ್ಕೆ ಕುಸಿದಿದೆ. ಈವರೆಗೆ ಕಾಂಗ್ರೆಸ್‌ನ ನಾಲ್ವರು ಶಾಸಕರು ರಾಜೀನಾಮೆ ನೀಡಿದ್ದಾರೆ. ಅವರಲ್ಲಿ ಇಬ್ಬರು ಬಿಜೆಪಿ ಸೇರಿದ್ದಾರೆ. ಸೋಮವಾರ … Continued

ಪಶ್ಚಿಮ ಬಂಗಾಳ: ಬಿಜೆಪಿ ಧ್ವಜ ಹಿಡಿದ ನಟ ಯಶ್‌ ದಾಸಗುಪ್ತಾ

ಪಶ್ಚಿಮ ಬಂಗಾಳದ ಚಿತ್ರನಟ ಯಶ್‌ ದಾಸಗುಪ್ತಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಮುಖಂಡರಾದ ಕೈಲಾಶ್‌ ವಿಜಯವರ್ಗಿಯ, ಸ್ವಪನ್‌ ದಾಸಗುಪ್ತ ಸಮ್ಮುಖದಲ್ಲಿ ಕಮಲ ಪಡೆ ಸೇರಿದರು. 35 ವರ್ಷದ ಯಶ್‌, ಬಂದಿನಿ ಮತ್ತು ಅದಾಲತ್ ಸೇರಿದಂತೆ ಹಲವಾರು ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೇ ಅವರು ಗ್ಯಾಂಗ್‌ಸ್ಟರ್, ಫಿದಾ, ಮತ್ತು ಎಸ್‌ಒಎಸ್ ಕೋಲ್ಕತಾ ಸೇರಿದಂತೆ ಹಲವಾರು ಚಲನಚಿತ್ರಗಳಲ್ಲಿ … Continued

ನೆರೆ ದೇಶಗಳಲ್ಲೂ ಬಿಜೆಪಿ ಸರಕಾರ: ತ್ರಿಪುರ ಸಿಎಂ ವಿವಾದಾತ್ಮಕ ಹೇಳಿಕೆ

ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್‌ ಶಾ ನೆರೆ ದೇಶಗಳಾದ ನೇಪಾಳ ಹಾಗೂ ಶ್ರೀಲಂಕಾದಲ್ಲಿ ಬಿಜೆಪಿ ಸರಕಾರ ರಚನೆಯ ಉದ್ದೇಶ ಹೊಂದಿದ್ದಾರೆ ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇಬ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಮಾತ್ರವಲ್ಲದೇ ನೇಪಾಳ ಹಾಗೂ ಶ್ರೀಲಂಕಾದಲ್ಲಿ ಬಿಜೆಪಿಯನ್ನು ಸಂಘಟಿಸಿ ಅಲ್ಲಿ ಬಿಜೆಪಿ ಸರಕಾರ ರಚನೆ ಮಾಡುವ ಉದ್ದೇಶ … Continued

ರಾಜಾಹುಲಿ, ಬೆಟ್ಟದ ಹುಲಿಯಾರೆಂದು ಜನ ತೀರ್ಮಾನ ಮಾಡ್ತಾರೆ: ಯತ್ನಾಳ

ತುಮಕೂರು: ಭವಿಷ್ಯದಲ್ಲಿ ಯಾರು ರಾಜಾಹುಲಿ ಆಗ್ತಾರೆ ಯಾರು ಬೆಟ್ಟದ ಹುಲಿ ಆಗ್ತಾರೆ ಎಂಬುದನ್ನು ರಾಜ್ಯದ ಜನರೇ ತೀರ್ಮಾನ ಮಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಹೇಳಿದ್ದಾರೆ. ರಾಜ್ಯದಲ್ಲಿ ಲೂಟಿ ಮಾಡಿರುವ ಹಣದಲ್ಲಿ ಎಲ್ಲರನ್ನೂ ಖರೀದಿಸಲಾಗುವುದಿಲ್ಲ. ಹಣದಿಂದ ಎಲ್ಲವನ್ನೂ ಖರೀದಿ ಮಾಡುವುದು ಸಾಧ್ಯವಿದ್ದರೆ ಟಾಟಾ, ಬಿರ್ಲಾರಂಥ ಉದ್ಯಮಿಗಳು ಈ ದೇಶದ ಪ್ರಧಾನಿಗಳು ಆಗಬೇಕಿತ್ತು. ರೈಲಿನಲ್ಲಿ ಚಹಾ … Continued

ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಿ: ಕೇಂದ್ರಕ್ಕೆ ಶಿವಸೇನಾ ಆಗ್ರಹ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ ಬಿಜೆಪಿ ದಾರಿಯಲ್ಲಿ ಸಾಗುತ್ತಿದ್ದು, ಸಂವಿಧಾನ ಎತ್ತಿಹಿಡಿಯಬೇಕಾದರೆ ಕೇಂದ್ರ ಸರಕಾರ ಕೂಡಲೇ ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಬೇಕೆಂದು ಮಹಾರಾಷ್ಟ್ರ ಆಡಳಿತ ನಡೆಸುತ್ತಿರುವ ಶಿವಸೇನೆ ಆಗ್ರಹಿಸಿದೆ. ಮಹಾವಿಕಾಸ್‌ ಅಘಾಡಿ ಸರಕಾರ ಸ್ಥಿರ ಮತ್ತು ದೃಢವಾಗಿದೆ. ರಾಜ್ಯ ಸರಕಾರವನ್ನು ಗುರಿಯಾಗಿಸಲು ಕೇಂದ್ರವು ರಾಜ್ಯಪಾಲರ ಹೆಗಲು ಬಳಸುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ. ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ … Continued

ದಿನೇಶ ತ್ರಿವೇದಿ ಬಿಜೆಪಿಗೆ ಬಂದರೆ ಸ್ವಾಗತ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕ ದಿನೇಶ ತ್ರಿವೇದಿ ಶುಕ್ರವಾರ ರಾಜ್ಯಸಭೆಯಲ್ಲಿ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಅವರು ಬಯಸಿದರೆ ತಮ್ಮ ಪಕ್ಷಕ್ಕೆ ಬರಬಹುದು ಎಂದು ಬಿಜೆಪಿ ಹೇಳಿದೆ. ದಿನೇಶ್ ತ್ರಿವೇದಿ ರಾಜೀನಾಮೆ ಬಗ್ಗೆ ಸುದಿಗಾರರ ಜೊತೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ , ದಿನೇಶ ತ್ರಿವೇದಿ ಅವರು ಇಷ್ಟವಿದ್ದರೆ ಬಿಜೆಪಿಗೆ … Continued

ನಡ್ಡಾ ಪೋಸ್ಟರ್‌ ಕಿತ್ತಿದ್ದಕ್ಕೆ ಬಿಜೆಪಿ-ಟಿಎಂಸಿ ಆರೋಪ ಪ್ರತ್ಯಾರೋಪ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಪರಿವರ್ತನ ರಥಯಾತ್ರೆ’ ಗಿಂತ ಮುಂಚೆ ಮಾಲ್ಡಾದಲ್ಲಿ ಬಿಜೆಪಿ ಪಕ್ಷದ  ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ. ಈ ಘಟನೆಗೆ ಆಡಳಿತಾರೂಢ ಟಿಎಂಸಿ ಸರ್ಕಾರವೇ ಇದಕ್ಕೆ ಕಾರಣ ಎಂದು ಬಿಜೆಪಿ ಆರೋಪಿಸಿದೆ, ಆದರೆ, ತಮ್ಮ ಪಕ್ಷದ ಮುಖಂಡರ ಮಧ್ಯದ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯವರೇ ನಡ್ಡಾ ಅವರ ಪೋಸ್ಟರ್‌ಗಳನ್ನು ಕಿತ್ತು ಹಾಕಿದ್ದಾರೆ ಎಂದು … Continued

ಎನ್‌ಸಿಪಿಗೆ ಬಿಜೆಪಿ ಶಾಸಕನ ೫ ಕೋಟಿ ರೂ. ದೇಣಿಗೆ !

ಮುಂಬೈ: ಶರದ್‌ ಪವಾರ್‌ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ೨೦೧೯-೨೦ನೇ ಸಾಲಿನಲ್ಲಿ ೫೯.೯೪ ಕೋಟಿ ರೂ. ಪಕ್ಷದ ದೇಣಿಗೆ ಸಂಗ್ರಹ ಮಾಡಿದ್ದು, ಕಳೆದ ವರ್ಷ ಪಕ್ಷ ಕೇವಲ ೧೨.೦೫ ಕೋಟಿ ರೂ. ದೇಣಿಗೆ ಸಂಗ್ರಹಿಸಿತ್ತು. ಶಿವಸೇನಾ, ಕಾಂಗ್ರೆಸ್‌ ನೊಂದಿಗೆ ಮಹಾ ವಿಕಾಸ ಅಗಾಢಿ ಸರಕಾರ ನಡೆಸುತ್ತಿರುವ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ಹಣ ಹರಿದು … Continued

ಬಿಜೆಪಿ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್:ಸಿದ್ದರಾಮಯ್ಯ

ಬೆಂಗಳೂರು:  ರಾಜ್ಯದಲ್ಲಿ ಸರ್ಕಾರ ಸತ್ತಿದೆ. ಈ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿ,   ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್‌ಶೆಟ್ಟರ್ ಅವರು ಸರ್ಕಾರ ಟೇಕ್ … Continued

ಟಿಎಂಸಿಯಿಂದ ಬಿಜೆಪಿಗೆ ಸಾಮೂಹಿಕ ವಲಸೆ ತಡೆಗೆ ನಿರ್ಧಾರ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ನಿಂದ  ಬಿಜೆಪಿಗೆ ಸಾಮೂಹಿಕ ವಲಸೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿರು ತಮ್ಮ ಪಕ್ಷ ಆಡಳಿತ ಪಕ್ಷದ “ಬಿʼ ಟೀಮ್‌ ಆಗಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಂದೆ ಪಕ್ಷದ ಸ್ಥಳಿಯ  ಮುಖಂಡರ ಸಲಹೆ ಪಡೆದುಕೊಂಡು ಆಯ್ಕೆ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯ ತಿಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ … Continued