ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ ; ಅಸ್ಸಾಂ ಮಾಜಿ ಕಾಂಗ್ರೆಸ್‌ ಅಧ್ಯಕ್ಷ ಫೆ. 22ರಂದು ಬಿಜೆಪಿಗೆ ಸೇರ್ಪಡೆ

ಗುವಾಹತಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿಗೆ ಭಾರಿ ಆಘಾತ ಎದುರಾಗಿದ್ದು, ಹಿರಿಯ ನಾಯಕ ಭೂಪೇನ್ ಬೋರಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮಂಗಳವಾರ ಈ ಮಹತ್ವದ ಘೋಷಣೆ ಮಾಡಿದ್ದು, ಫೆಬ್ರವರಿ 22 ರಂದು ಬೋರಾ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಗುವಾಹತಿ ಮತ್ತು ಉತ್ತರ … Continued

ರಾಹುಲ್ ಗಾಂಧಿ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದನಿಂದ ಸಬ್‌ಸ್ಟಾಂಟಿವ್ ಮೋಷನ್ ಮಂಡನೆ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ‘ಸಬ್‌ಸ್ಟಾಂಟಿವ್ ಮೋಷನ್’ (ಗಂಭೀರ ಸ್ವರೂಪದ ಪ್ರಸ್ತಾವನೆ) ಮಂಡಿಸಲು ನೋಟಿಸ್ ನೀಡಿರುವುದಾಗಿ ಬಿಜೆಪಿ ಸಂಸದ ನಿಶಿಕಾಂತ ದುಬೆ ಗುರುವಾರ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅಮಾನತುಗೊಳಿಸಬೇಕು ಎಂಬುದು ಈ ಪ್ರಸ್ತಾವನೆಯ ಮುಖ್ಯ ಉದ್ದೇಶವಾಗಿದೆ. ಈ ಕುರಿತು ಎಎನ್‌ಐ  ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದುಬೆ, “ಜಾರ್ಜ್ … Continued

ಮುಂಬೈ ಮೇಯರ್ ಆಗಿ ರಿತು ತಾವ್ಡೆ ಅವಿರೋಧವಾಗಿ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್‌ ಮುಂಬೈ ಮಹಾನಗರ ಪಾಲಿಕೆ (BMC)ಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿದ್ದ ಆಡಳಿತಾಧಿಕಾರಿಗಳ ಆಡಳಿತಕ್ಕೆ ತೆರೆ ಬಿದ್ದಿದೆ. ಬಿಜೆಪಿ ಪಾಲಿಕೆ ಸದಸ್ಯರಾದ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಮತ್ತು ಶಿವಸೇನೆಯ (ಶಿಂದೆ ಬಣ) ಸಂಜಯ ಘಾಡಿ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಮಣಿಪುರದಲ್ಲಿ ಮತ್ತೆ ಸರ್ಕಾರ ರಚನೆಗೆ ಮುಂದಾದ ಬಿಜೆಪಿ ; ಸಿಎಂ ಸ್ಥಾನಕ್ಕೆ ಖೇಮಚಂದ್ ಸಿಂಗ್ ಆಯ್ಕೆ

ನವದೆಹಲಿ: ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಳ್ಳಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಮತ್ತು ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಅವರ ಪಕ್ಷ ಮಂಗಳವಾರ ಆಯ್ಕೆ ಮಾಡಿದೆ. ಮಣಿಪುರದಲ್ಲಿ ನಡೆದ ದೀರ್ಘಕಾಲದ ಜನಾಂಗೀಯ ಹಿಂಸಾಚಾರದ ಮಧ್ಯೆ ಫೆಬ್ರವರಿ 9, 2025 ರಂದು ಎನ್ ಬಿರೇನ್ … Continued

ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲುವುದು ಯಾರು..? : ʼಮೂಡ್ ಆಫ್ ದಿ ನೇಷನ್ʼ ಸರ್ವೆ ಏನು ಹೇಳುತ್ತದೆ…?

2025ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣಾ ಪ್ರಾಬಲ್ಯವನ್ನು ಮುಂದುವರೆಸಿತು, ದೆಹಲಿ ಮತ್ತು ಬಿಹಾರದಲ್ಲಿ ಗೆಲುವು ಸಾಧಿಸಿತು.  ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದ ಇತರ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಭಾರೀ ಗೆಲುವಿನೊಂದಿಗೆ 2026 ಪ್ರಾರಂಭವಾಯಿತು. ಇದೇವೇಳೆ ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಈಗ … Continued

ಸರ್ಕಾರ ನೀಡಿದ ಭಾಷಣ ಓದದೆ ಎರಡೇ ಸಾಲಿನ ಭಾಷಣ ಓದಿ ಸದನದಿಂದ ತೆರಳಿದ ರಾಜ್ಯಪಾಲರು

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನದ ಆರಂಭದಲ್ಲೇ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ಸ್ಫೋಟಗೊಂಡಿದೆ. ಗುರುವಾರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು, ಕೇವಲ ಎರಡೇ ಸಾಲುಗಳನ್ನು ಓದಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಪ್ರತಿಯಲ್ಲಿ ಉಲ್ಲೇಖಿಸಲಾಗಿದ್ದ … Continued

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿತಿನ್ ನವೀನ್

ನವದೆಹಲಿ: ನಿತಿನ್ ನವೀನ್ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ 1980ರಲ್ಲಿ ಸ್ಥಾಪನೆಯಾದ ಬಿಜೆಪಿ ಪಕ್ಷದಲ್ಲಿ ಹೊಸ ತಲೆಮಾರಿನ ನಾಯಕತ್ವಕ್ಕೆ ಚಾಲನೆ ಸಿಕ್ಕಂತಾಗಿದೆ. ವಿಶೇಷವೆಂದರೆ, ಬಿಜೆಪಿ ಸ್ಥಾಪನೆಯಾದ ವರ್ಷವೇ (1980) ನಿತಿನ್ ನವೀನ್ ಅವರು ಜನಿಸಿದ್ದಾರೆ. ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಅಧಿಕೃತ ಸಭೆಯಲ್ಲಿ ನಿತಿನ್ ನವೀನ್ … Continued

ಬಿಜೆಪಿ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ ; ಆಗಲಿದ್ದಾರೆ ಬಿಜೆಪಿ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ

ನವದೆಹಲಿ: ಭಾರತೀಯ ಜನತಾ ಪಾರ್ಟಿ(BJP)ಯ ಸಾಂಘಿಕ ನಾಯಕತ್ವದಲ್ಲಿ ದೊಡ್ಡ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರನ್ನು  ಸರ್ವಾನುಮತದ ನಿರ್ಣಯದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಮತ್ತು ಆ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ ಎಂದು ಪಕ್ಷ ದೃಢಪಡಿಸಿದೆ. ಆರೋಗ್ಯ ಸಚಿವ … Continued

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ‘ಸ್ಟ್ರೈಕ್ ರೇಟ್’ಗೆ ವಿಪಕ್ಷಗಳು ಧೂಳೀಪಟ

2026 ರ ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿಯು ರಾಜ್ಯಾದ್ಯಂತ ಅತ್ಯಂತ ಪರಿಣಾಮಕಾರಿ ಮತ್ತು ಬಲಾಢ್ಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದೆ, ಇದರಲ್ಲಿ ಭಾರತದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸೇರಿದೆ. ಮುಂಬೈನಲ್ಲಿ, ಬಿಜೆಪಿ ಎಲ್ಲಾ ಪಕ್ಷಗಳಿಗಿಂತ ಅತ್ಯಧಿಕ ಸ್ಟ್ರೈಕ್ ರೇಟ್‌ ದಾಖಲಿಸಿದೆ, ಅದು ಸ್ಪರ್ಧಿಸಿದ 135 ಸ್ಥಾನಗಳಲ್ಲಿ 89 … Continued

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆ : 29ರಲ್ಲಿ 23 ಪಾಲಿಕೆಗಳಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಗೆ ಭರ್ಜರಿ ಜಯ

ಮುಂಬೈ : ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ 2026: 29 ಪಾಲಿಕೆಗಳಲ್ಲಿ 23ರಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಗೆ ಭರ್ಜರಿ ಜಯ ಮುಂಬೈ: ಮಹಾರಾಷ್ಟ್ರದ ಒಟ್ಟು 29 ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ-ಶಿವಸೇನೆ (ಮಹಾಯುತಿ) ಮೈತ್ರಿಕೂಟ 23 ಪಾಲಿಕೆಗಳಲ್ಲಿ ಭರ್ಜರಿ ಜಯ ದಾಖಲಿಸಿದೆ. ವಿಪಕ್ಷಗಳು ಕೇವಲ ಐದು ಪಾಲಿಕೆಗಳಲ್ಲಿ ಮಾತ್ರ ಜಯಗಳಿಸಲು … Continued