ಮಹದೇವ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಬಂಧನ

ಮುಂಬೈ : ಮಹದೇವ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಟ ಮತ್ತು ಪ್ರಭಾವಿ ಸಾಹಿಲ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ಬಂಧಿಸಿದೆ. ಇದಕ್ಕೂ ಮೊದಲು, 2023 ರ … Continued

ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು, ಭಾನುವಾರ (ಏಪ್ರಿಲ್‌ ೧೪) ಮುಂಜಾನೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಮುಂಜಾನೆ 5 ಗಂಟೆಗೆ, ಬಾಂದ್ರಾದಲ್ಲಿರುವ ಸಲ್ಮಾನ್‌ ಖಾನ್ ಅವರ ಮನೆಯ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಿದರು … Continued

ರಣದೀಪ ಹೂಡಾ ನಿರ್ದೇಶನದ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನೆಮಾಕ್ಕೆ ನೇತಾಜಿ ಸುಭಾಷಚಂದ್ರ ಬೋಸ್ ಮೊಮ್ಮಗ ಟೀಕೆ

ನವದೆಹಲಿ : ರಣದೀಪ್ ಹೂಡಾ ನಿರ್ದೇಶನ ಮಾಡಿ ನಾಯಕನಾಗಿ ನಟಿಸಿರುವ ಸ್ವಾತಂತ್ರ್ಯ ವೀರ ಸಾವರ್ಕರ ಚಿತ್ರದ ಟ್ರೈಲರ್ ಬಿಡುಗಡೆಯಾದ ಒಂದು ದಿನದ ನಂತರ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಕುಮಾರ ಬೋಸ್ ಚಲನಚಿತ್ರದ ಬಗ್ಗೆ ಕೆಲವೊಂದು ವಿಷಯಗಳ ಬಗ್ಗೆ ಆಕ್ಷೇಪ ಮಾಡಿದ್ದಾರೆ. ಚಿತ್ರದ ಮೂರು ನಿಮಿಷಗಳ ಟ್ರೇಲರ್‌ನಲ್ಲಿ ಸಾವರ್ಕರ್ ಅವರು … Continued

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಫಾರ್ಮ್‌ ಹೌಸ್‌ ಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಪನ್ವೇಲ್‌ನಲ್ಲಿರುವ ಫಾರ್ಮ್‌ಹೌಸ್‌ಗೆ ನುಗ್ಗಲು ಯತ್ನಿಸಿದ ಇಬ್ಬರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಪನ್ವೇಲ್‌ನಲ್ಲಿರುವ ನಟನ ಫಾರ್ಮ್‌ಹೌಸ್‌ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ಇಬ್ಬರೂ ವ್ಯಕ್ತಿಗಳನ್ನು ತಡೆದರು. ನಂತರ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಇಬ್ಬರೂ ವ್ಯಕ್ತಿಗಳ ಚಲನವನಗಳು ಅನುಮಾನಕ್ಕೆ ಕಾರಣವಾದ ನಂತರ … Continued

ಬಾಲಿವುಡ್‌ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

ಮುಂಬೈ:  ಖ್ಯಾತ ನಟ ಶ್ರೇಯಸ್ ತಲ್ಪಾಡೆ (47) ಅವರು ಗುರುವಾರ ಸಂಜೆ ಮುಂಬೈನಲ್ಲಿ ತಮ್ಮ ಚಿತ್ರೀಕರಣ ಮುಗಿಸಿದ ನಂತರ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ಹಾಗೂ ಅವರನ್ನು ತಕ್ಷಣವೇ ಅಂಧೇರಿ ಪಶ್ಚಿಮದಲ್ಲಿರುವ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ. ಹಿಂದೂಸ್ತಾನ್‌ಟೈಮ್ಸ್‌ ವರದಿಯ ಪ್ರಕಾರ ತಲ್ಪಾಡೆ ಅವರು ಏನೋ ತೊಂದರೆಯಾಗುತ್ತಿದೆ ಎಂದು ಹೇಳಿದರು ಹಾಗೂ ಮನೆಗೆ … Continued

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್ ಖಾನ್-ಪುತ್ರಿ ಸುಹಾನಾ | ವೀಡಿಯೊ

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಮತ್ತು ಅವರ ಮಗಳು ಸುಹಾನಾ ಖಾನ್ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ಶಾರುಖ್ ಖಾನ್ ಅವರು ತಮ್ಮ ಮಗಳು ಸುಹಾನಾ ಮತ್ತು ತಮಿಳಿನ ಖ್ಯಾತ ನಟಿ ನಯನತಾರಾ ಅವರೊಂದಿಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರೊಂದಿಗೆ ನಯನತಾರಾ ಪತಿ, ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ ಶಿವನ್ … Continued

ಬಾಲಿವುಡ್‌ ನಟ ಅಮೀರ್‌ ಖಾನಗೆ ಕೊರೊನಾ ಸೋಂಕು

ಮುಂಬೈ: ಖ್ಯಾತ ಬಾಲಿವುಡ್‌ ನಟ ಅಮೀರ್ ಖಾನಗೆ  ಕೊರೊನಾ ಸೋಂಕು ದೃಢಪಟ್ಟಿದೆ. ಕ ರಣಬೀರ್ ಕಪೂರ್ ಮತ್ತು ಕಾರ್ತಿಕ್ ಆರ್ಯನ್ ನಂತರ ಅಮೀರ್ ಖಾನ್ ಕೊರೊನಅ ಸೋಂಕಿಗೆ ಒಳಗಾಗಿದ್ದು, ನಟ ಹೋಮ್‌ ಕ್ಯಾರೆಂಟೈನ್‌ನಲ್ಲಿದ್ದಾರೆ. ನಟ ಅಮೀರ್ ಖಾನ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್‌ ಬಂದಿದೆ. ಅಮೀರ್ ವಕ್ತಾರರು, ಅಮೀರ್ ಖಾನ್ ಅವರಿಗೆ ಕೊರೊನಅ ಸೋಖು ದೃಢಪಟ್ಟಿದೆ. … Continued