ಖ್ಯಾತ ನಟ ಮಿಥುನ್ ಚಕ್ರವರ್ತಿಗೆ `ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಘೋಷಣೆ

ನವದೆಹಲಿ: ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿ (74) ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು X ನಲ್ಲಿ ಸುದ್ದಿ ಹಂಚಿಕೊಂಡಿದ್ದಾರೆ. 2024ರ ಅಕ್ಟೋಬರ್ 8ರಂದು ನಡೆಯಲಿರುವ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ನಟ ಮಿಥುನ್‌ ಚಕ್ರವರ್ತಿ ಅವರಿಗೆ … Continued

ಊರ್ಮಿಳಾ ಮಾತೋಂಡ್ಕರ್ ದಾಂಪತ್ಯದಲ್ಲಿ ಬಿರುಕು; ಪತಿಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟಿ : ವರದಿ

ಮುಂಬೈ : ಮದುವೆಯಾದ ಎಂಟು ವರ್ಷಗಳ ನಂತರ ಊರ್ಮಿಳಾ ಮಾತೋಂಡ್ಕರ್ ತನ್ನ ಪತಿ ಮೊಹ್ಸಿನ್ ಅಖ್ತರ್ ಮಿರ್‌ನಿಂದ ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಬಾಂದ್ರಾ ನ್ಯಾಯಾಲಯದಲ್ಲಿ ನಾಲ್ಕು ತಿಂಗಳ ಹಿಂದೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿಚ್ಛೇದನದ ಹಿಂದಿನ ಕಾರಣಗಳು ಸ್ಪಷ್ಟವಾಗಿಲ್ಲ. ದಂಪತಿ ಫೆಬ್ರವರಿ 4, 2016 ರಂದು … Continued

ಮಂಗಳೂರು : ಕುತ್ತಾರು ಕೊರಗಜ್ಜನ ಕೋಲದಲ್ಲಿ ಬಾಲಿವುಡ್‌ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆಎಲ್ ರಾಹುಲ್ ಭಾಗಿ

ಮಂಗಳೂರು: ತುಳುನಾಡಿನ ಅತ್ಯಂತ ಕಾರಣಿಕ ದೈವವಾಗಿರುವ ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್‌ ಖ್ಯಾತ ನಟಿ ಕತ್ರಿನಾ ಕೈಫ್ , ಭಾರತದ ಕ್ರಿಕೆಟ್ ತಂಡದ ಖ್ಯಾತನಾಮ ಆಟಗಾರ ಕೆ.ಎಲ್. ರಾಹುಲ್, ಖ್ಯಾತ ಚಲನಚಿತ್ರ ನಟ ಸುನಿಲ್ ಶೆಟ್ಟಿ ಕುಟುಂಬದವರು ಭಾಗಿಯಾಗಿದ್ದರು. ನಟಿ ಕತ್ರಿನಾ ಕೈಫ್, ಅವರ ಪತಿ ವಿಕ್ಕಿ ಕೌಶಲ್, ನಟ … Continued

ಬಾಲಿವುಡ್‌ ಹಿರಿಯ ನಟ-ಸಂಸದ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

ಮುಂಬೈ : ಬಾಲಿವುಡ್‌ ಹಿರಿಯ ನಟ ಹಾಗೂ ಸಂಸದ ಶತ್ರುಘ್ನ ಸಿನ್ಹಾ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಲವ್ ಸಿನ್ಹಾ ಅವರು ಭಾನುವಾರ ಬಹಿರಂಗಪಡಿಸಿದ್ದಾರೆ. ಶಾಟ್ ಗನ್ ಎಂದು ಕರೆಯಲ್ಪಡುವ ನಟ ಕಳೆದ ಎರಡು ದಿನಗಳಿಂದ ಜ್ವರ ಮತ್ತು ದುರ್ಬಲತೆಯಿಂದ ಬಳಲುತ್ತಿದ್ದರು, ಈ ಕಾರಣದಿಂದಾಗಿ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಕರ್ನಾಟಕದಲ್ಲಿ ʼಹಮಾರೆ ಬಾರಾಹ್’ ಸಿನಿಮಾ ನಿಷೇಧಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಮುಸ್ಲಿಂ ಮಹಿಳೆಯರ ಕುರಿತಾದ ಸಿನಿಮಾ ‘ಹಮಾರೆ ಬಾರಾಹ್‌’ (Hamare Baarah) ಬಿಡುಗಡೆಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. “ಹಮಾರೆ ಬಾರಾಹ್” ಸಿನೆಮಾ ಜೂ.7ರಂದು ಬಿಡುಗಡೆ ಆಗಲಿದ್ದು, ಈ ಚಿತ್ರದ ಟ್ರೈಲರ್ ಅನ್ನು ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನೆಮಾ ಮಂದಿರ, ಖಾಸಗಿ ಟಿವಿ ಚಾನಲ್ ಸೇರಿದಂತೆ ಯಾವುದೇ ಯಲ್ಲೂ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ … Continued

ಬಾಲಿವುಡ್‌ ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್ : ಹೀಟ್ ಸ್ಟ್ರೋಕ್ ನಿಂದ ಬಳಲುತ್ತಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಅಹಮದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯವನ್ನು ವೀಕ್ಷಿಸಲು ನಟ ಅಹಮದಾಬಾದ್‌ಗೆ ಆಗಮಿಸಿದ್ದರು. “ಅಹಮದಾಬಾದ್‌ನಲ್ಲಿ 45 ಡಿಗ್ರಿ ಸೆಲ್ಸಿಯಸ್‌ನ ಅಧಿಕ … Continued

ಮಹದೇವ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಬಂಧನ

ಮುಂಬೈ : ಮಹದೇವ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಟ ಮತ್ತು ಪ್ರಭಾವಿ ಸಾಹಿಲ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ಬಂಧಿಸಿದೆ. ಇದಕ್ಕೂ ಮೊದಲು, 2023 ರ … Continued

ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು, ಭಾನುವಾರ (ಏಪ್ರಿಲ್‌ ೧೪) ಮುಂಜಾನೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಮುಂಜಾನೆ 5 ಗಂಟೆಗೆ, ಬಾಂದ್ರಾದಲ್ಲಿರುವ ಸಲ್ಮಾನ್‌ ಖಾನ್ ಅವರ ಮನೆಯ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಿದರು … Continued

ರಣದೀಪ ಹೂಡಾ ನಿರ್ದೇಶನದ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನೆಮಾಕ್ಕೆ ನೇತಾಜಿ ಸುಭಾಷಚಂದ್ರ ಬೋಸ್ ಮೊಮ್ಮಗ ಟೀಕೆ

ನವದೆಹಲಿ : ರಣದೀಪ್ ಹೂಡಾ ನಿರ್ದೇಶನ ಮಾಡಿ ನಾಯಕನಾಗಿ ನಟಿಸಿರುವ ಸ್ವಾತಂತ್ರ್ಯ ವೀರ ಸಾವರ್ಕರ ಚಿತ್ರದ ಟ್ರೈಲರ್ ಬಿಡುಗಡೆಯಾದ ಒಂದು ದಿನದ ನಂತರ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಕುಮಾರ ಬೋಸ್ ಚಲನಚಿತ್ರದ ಬಗ್ಗೆ ಕೆಲವೊಂದು ವಿಷಯಗಳ ಬಗ್ಗೆ ಆಕ್ಷೇಪ ಮಾಡಿದ್ದಾರೆ. ಚಿತ್ರದ ಮೂರು ನಿಮಿಷಗಳ ಟ್ರೇಲರ್‌ನಲ್ಲಿ ಸಾವರ್ಕರ್ ಅವರು … Continued

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಫಾರ್ಮ್‌ ಹೌಸ್‌ ಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಪನ್ವೇಲ್‌ನಲ್ಲಿರುವ ಫಾರ್ಮ್‌ಹೌಸ್‌ಗೆ ನುಗ್ಗಲು ಯತ್ನಿಸಿದ ಇಬ್ಬರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಪನ್ವೇಲ್‌ನಲ್ಲಿರುವ ನಟನ ಫಾರ್ಮ್‌ಹೌಸ್‌ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ಇಬ್ಬರೂ ವ್ಯಕ್ತಿಗಳನ್ನು ತಡೆದರು. ನಂತರ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಇಬ್ಬರೂ ವ್ಯಕ್ತಿಗಳ ಚಲನವನಗಳು ಅನುಮಾನಕ್ಕೆ ಕಾರಣವಾದ ನಂತರ … Continued